![Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ](https://www.udayavani.com/wp-content/uploads/2024/06/hrdik-415x229.jpg)
UP ; ಎಸ್ ಪಿ ಶಾಸಕ ಇರ್ಫಾನ್ ಸೋಲಂಕಿಗೆ 7 ವರ್ಷ ಜೈಲು ಶಿಕ್ಷೆ
Team Udayavani, Jun 7, 2024, 8:29 PM IST
![1—-dsadas](https://www.udayavani.com/wp-content/uploads/2024/06/1-dsadas-620x413.jpg)
ಕಾನ್ಪುರ: ಎಸ್ಪಿ ಶಾಸಕ ಇರ್ಫಾನ್ ಸೋಲಂಕಿ ಅವರಿಗೆ ಕಾನ್ಪುರದ ಎಂಪಿ-ಎಂಎಲ್ಎ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೆ 20 ಸಾವಿರ ರೂ. ದಂಡ ವಿಧಿಸಲಾಗಿದೆ. ಮಹಾರಾಜಗಂಜ್ ಜೈಲಿನಲ್ಲಿರುವ ಇರ್ಫಾನ್ ಸೋಲಂಕಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಎದುರಿಸಿದ್ದು, ಇರ್ಫಾನ್ ಸಹೋದರ ರಿಜ್ವಾನ್ಗೂ 7 ವರ್ಷ ಶಿಕ್ಷೆ ವಿಧಿಸಲಾಗಿದೆ.
ಜೂನ್ 3 ರಂದು, ಜಾಜ್ಮೌ ಬೆಂಕಿ ಹಚ್ಚಿ ಮನೆ ಸುಟ್ಟ ಪ್ರಕರಣದಲ್ಲಿ ಎಸ್ಪಿ ಶಾಸಕ ಇರ್ಫಾನ್ ಸೋಲಂಕಿ ಸೇರಿದಂತೆ 5 ಆರೋಪಿಗಳನ್ನು ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿತ್ತು. ಶಾಸಕ ಇರ್ಫಾನ್, ಅವರ ಸಹೋದರ ರಿಜ್ವಾನ್ ಸೋಲಂಕಿ, ಶೌಕತ್ ಪೆಹಲ್ವಾನ್, ಇಸ್ರೇಲ್ ಆತೆ ವಾಲಾ ಮತ್ತು ಮೊಹಮ್ಮದ್ ಷರೀಫ್ ಅವರನ್ನು ಎಂಪಿಎಂಎಲ್ ನ್ಯಾಯಾಲಯ ದೋಷಿಗಳೆಂದು ಘೋಷಿಸಿದೆ.
‘ಎಲ್ಲ ಅಪರಾಧಿಗಳಿಗೂ ಗರಿಷ್ಠ 7 ವರ್ಷಗಳು ಶಿಕ್ಷೆ ಏಕಕಾಲದಲ್ಲಿ ನಡೆಯುತ್ತವೆ. ಪ್ರತಿ ಅಪರಾಧಿಗೆ ಒಟ್ಟು 30,500 ರೂ. ದಂಡವನ್ನು ವಿಧಿಸಲಾಗಿದೆ. ನ್ಯಾಯಾಲಯದ ಆದೇಶವು ಸಮರ್ಥನೀಯವಾಗಿದೆ ಎಂದು ನಾನು ಭಾವಿಸುತ್ತೇನೆ’ ಎಂದು ಪ್ರಾಸಿಕ್ಯೂಷನ್ ವಕೀಲ ಪ್ರಾಚಿ ಶ್ರೀವಾಸ್ತವ್ ಹೇಳಿದ್ದಾರೆ.
ನಜೀರ್ ಫಾತಿಮಾ ಪರವಾಗಿ ಜಜ್ಮೌ ಪೊಲೀಸ್ ಠಾಣೆಯಲ್ಲಿ 8 ನವೆಂಬರ್ 2022 ರಂದು ಪ್ರಕರಣ ದಾಖಲಿಸಲಾಗಿತ್ತು. ಶಾಸಕ ಸೇರಿ ಒಟ್ಟು 12 ಮಂದಿಯನ್ನು ಆರೋಪಿಗಳನ್ನಾಗಿ ಮಾಡಲಾಗಿತ್ತು. ತನ್ನ ಮನೆಯನ್ನು ಎಲ್ಲರೂ ಸುಟ್ಟು ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು.
7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿರುವುದರಿಂದ ಇರ್ಫಾನ್ ಶಾಸಕ ಸ್ಥಾನದಿಂದ ಅನರ್ಹವಾಗುವುದು ಖಚಿತವಾಗಿದೆ, ಔಪಚಾರಿಕ ಘೋಷಣೆ ಮಾತ್ರ ಮಾಡಬೇಕಾಗಿದೆ. 6 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಸಿಸಮಾವು ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಅಜಂ ಖಾನ್ ಹಾಗೂ ಅವರ ಪುತ್ರನ ವಿಧಾನಸಭಾ ಸದಸ್ಯತ್ವವೂ ರದ್ದಾಗಿತ್ತು.
ಟಾಪ್ ನ್ಯೂಸ್
![Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ](https://www.udayavani.com/wp-content/uploads/2024/06/hrdik-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ](https://www.udayavani.com/wp-content/uploads/2024/06/hrdik-150x83.jpg)
Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ
![ಈ ವಿಚಾರದಲ್ಲಿ ಶಾರುಖ್ ಖಾನ್ ʼಜವಾನ್ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ](https://www.udayavani.com/wp-content/uploads/2024/06/5-19-150x90.jpg)
ಈ ವಿಚಾರದಲ್ಲಿ ಶಾರುಖ್ ಖಾನ್ ʼಜವಾನ್ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ
![9-sirsi](https://www.udayavani.com/wp-content/uploads/2024/06/9-sirsi-150x90.jpg)
ಶಿರಸಿಯ ಅದ್ವೈತನಿಗೆ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
![Hamsa Moily](https://www.udayavani.com/wp-content/uploads/2024/06/hamsa-150x83.jpg)
Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ
![8-health](https://www.udayavani.com/wp-content/uploads/2024/06/8-health-150x90.jpg)
PCOD (ಪಾಲಿಸಿಸ್ಟಿಕ್ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.