Mangaluru ಡಿವೈಡರ್ಗೆ ಸ್ಕೂಟರ್ ಢಿಕ್ಕಿ: ಎ.ಸಿ. ಮೆಕಾನಿಕ್ ಸಾವು
Team Udayavani, Jun 7, 2024, 9:40 PM IST
ಮಂಗಳೂರು: ಡಿವೈಡರ್ಗೆ ಸ್ಕೂಟರ್ ಢಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಗುರುವಾರ ತಡರಾತ್ರಿ ಮೇರಿಹಿಲ್ ಜಂಕ್ಷನ್ ಬಳಿ ಸಂಭವಿಸಿದೆ.
ಕಾವೂರು ಬೊಲ್ಪುಗುಡ್ಡೆ ನಿವಾಸಿ ನಿಶಾಂಕ್ ದೇವಾಡಿಗ (23) ಮೃತಪಟ್ಟವರು. ಅವರು ರಾತ್ರಿ 11.30ರ ಸುಮಾರಿಗೆ ಸ್ಕೂಟರ್ನಲ್ಲಿ ವಿಮಾನ ನಿಲ್ದಾಣ ರಸ್ತೆಯ ಕೆಪಿಟಿ ಕಡೆಯಿಂದ ಪದವಿನಂಗಡಿ ಕಡೆಗೆ ಹೋಗುತ್ತಿದ್ದಾಗ ಮೇರಿಹಿಲ್ ಜಂಕ್ಷನ್ ಬಳಿಯ ನೆಕ್ಸಾ ಶೋರೂಂ ಎದುರುಗಡೆ ರಸ್ತೆ ನಡುವಿನ ಡಿವೈಡರ್ಗೆ ಸ್ಕೂಟರ್ ಢಿಕ್ಕಿಯಾಯಿತು.
ನಿಶಾಂಕ್ ಅವರ ತಲೆ ಮತ್ತು ಹೊಟ್ಟೆಯ ಭಾಗಕ್ಕೆ ಗಂಭೀರ ಸ್ವರೂಪದ ಹೊಡೆತ ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 12.30ರ ವೇಳೆಗೆ ಮೃತಪಟ್ಟಿದ್ದಾರೆ. ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಶಾಂಕ್ ದೇವಾಡಿಗ ಎ.ಸಿ. ಮೆಕಾನಿಕ್ ಆಗಿ ಕೆಲಸ ಮಾಡಿಕೊಂಡಿದ್ದರು. ಅವರ ತಂದೆ ಆಟೋರಿಕ್ಷಾ ಚಾಲಕರಾಗಿದ್ದಾರೆ. ಅವರ ತಮ್ಮ ಕಾಲೇಜು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕುಟುಂಬದ ಆಧಾರಸ್ತಂಭವಾಗಿದ್ದ ನಿಶಾಂಕ್ ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.
ಅಪಾಯಕಾರಿ ಸ್ಥಳ
ಮೇರಿಹಿಲ್ ಜಂಕ್ಷನ್ ಬಳಿ ಈ ಹಿಂದೆಯೂ ಹಲವು ಅಪಘಾತಗಳು ಸಂಭವಿಸಿವೆ. ಇದೇ ಸ್ಥಳದ ಪಕ್ಕದಲ್ಲಿ ಕಳೆದ ವರ್ಷದ ಜೂನ್ನಲ್ಲಿ ಸ್ಕೂಟರ್ ಡಿವೈಡರ್ಗೆ ಢಿಕ್ಕಿ ಹೊಡೆದು ಅಪ್ರಾಪ್ತ ವಯಸ್ಕರಿಬ್ಬರು ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.