ಸುಶಿಕ್ಷಿತರ ಮತಗಳೇ ಹೆಚ್ಚು ಅಸಿಂಧು!
Team Udayavani, Jun 7, 2024, 11:37 PM IST
ರಾಮನಗರ/ಕಲಬುರಗಿ: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಸುಶಿಕ್ಷಿತರ ಮತಗಳು ಹೆಚ್ಚು ತಿರಸ್ಕೃತಗೊಂಡಿದ್ದು, ಇದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರು ಪದವೀಧರ, ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಸಂದರ್ಭದಲ್ಲಿ 8,482 ಮತಗಳು ತಿರಸ್ಕೃತಗೊಂಡಿರುವುದು ಪತ್ತೆಯಾಗಿದೆ. ಅಂದರೆ ಚಲಾವಣೆಗೊಂಡ ಒಟ್ಟು ಮತಗಳಲ್ಲಿ ಶೇ.10 ಮತಗಳು ತಿರಸ್ಕೃತಗೊಂಡಂತಾಗಿದೆ. ಈಶಾನ್ಯ ಪದವೀಧರ ಮತಕ್ಷೇತ್ರದಲ್ಲಿ ಚಲಾವಣೆಯಾದ ಒಟ್ಟಾರೆ 1.09 ಲಕ್ಷ ಮತಗಳಲ್ಲಿ 12,513 ಮತಗಳು ತಿರಸ್ಕೃತವಾಗಿವೆ. ಪದವೀಧರ, ಸರಕಾರಿ ನೌಕರರು-ಅಧಿ ಕಾರಿಗಳೇ ಇರುವ ಮತದಾರರಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಮತ ತಿರಸ್ಕೃತವಾಗಿರುವುದು ಆತ್ಮಾವಲೋಕನಕ್ಕೆ ಎಡೆ ಮಾಡಿಕೊಟ್ಟಿದೆ. ಈ ಕ್ಷೇತ್ರದಲ್ಲಿ ಶೇ.12ರಷ್ಟು ಮತಗಳು ಅಸಿಂಧುವಾಗಿವೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತ ಎಣಿಕೆ ವೇಳೆ ಚಲಾವಣೆಯಾಗಿದ್ದ 6,655 ಅಂಚೆ ಮತಗಳ ಪೈಕಿ 1,139 ಮತಗಳು ತಿರಸ್ಕೃತಗೊಂಡಿವೆ. ಕೆಲವು ತಿಂಗಳ ಹಿಂದೆ ನಡೆದಿದ್ದ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲೂ 1,300ಕ್ಕೂ ಹೆಚ್ಚು ಮತಗಳು ತಿರಸ್ಕೃತಗೊಂಡಿದ್ದವು. ಸಾರ್ವತ್ರಿಕ ಚುನಾವಣೆಯಲ್ಲಿ ಇವಿಎಂ ಬಳಕೆ ಆರಂಭವಾದ ಬಳಿಕ ತಿರಸ್ಕೃತ ಮತಗಳ ಸಂಖ್ಯೆ ಶೂನ್ಯಕ್ಕೆ ಇಳಿದರೆ, ಮತಪತ್ರಗಳನ್ನು ಬಳಸಿ ನಡೆಸುವ ಚುನಾವಣೆಗಳಲ್ಲಿ, ತಿರಸ್ಕೃತ ಮತಗಳು ಹೆಚ್ಚುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.