Kundapur: ಮಳೆಗೆ ಕುಸಿಯುವ ಆತಂಕದಲ್ಲಿ ಹಟ್ಟಿಯಂಗಡಿ ಶಾಲೆ-ತೆರವಿಗೆ ಮೀನ-ಮೇಷ


Team Udayavani, Jun 8, 2024, 2:25 PM IST

Kundapur: ಮಳೆಗೆ ಕುಸಿಯುವ ಆತಂಕದಲ್ಲಿ ಹಟ್ಟಿಯಂಗಡಿ ಶಾಲೆ-ತೆರವಿಗೆ ಮೀನ-ಮೇಷ

ಕುಂದಾಪುರ: ಶತಮಾನೋತ್ಸವ ಪೂರೈಸಿರುವ ಹಟ್ಟಿಯಂಗಡಿ ಸರಕಾರಿ ಹಿ.ಪ್ರಾ. ಶಾಲೆಯ ಹಳೆಯ ಕಟ್ಟಡವೊಂದು ಶಿಥಿಲಗೊಂಡಿದ್ದು, ಮಕ್ಕಳ ಹಿತದೃಷ್ಟಿಯಿಂದ ಆ ಕಟ್ಟಡದ ತೆರವಿಗೆ ಎಸ್‌ಡಿಎಂಸಿ, ಶಿಕ್ಷಕರು, ಪೋಷಕರು, ಹಳೆ ವಿದ್ಯಾರ್ಥಿ ಸಂಘದವರು ವರ್ಷದಿಂದ ಒತ್ತಾಯಿಸುತ್ತಿದ್ದರೂ, ಇನ್ನೂ ತೆರವಿಗೆ ಮುಂದಾಗಿಲ್ಲ. ಈ ಬಗ್ಗೆ ಸಂಬಂಧಪಟ್ಟ ಎಲ್ಲರಿಗೂ ಮನವಿ ಕೊಟ್ಟರೂ, ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ.

ಸದ್ಯ ಅಲ್ಲಿ ತರಗತಿ ನಡೆಸದೇ, ಬೇರೆ ಕಡೆ ನಡೆಸಲಾಗುತ್ತಿದೆ. ಆದರೂ ಮಕ್ಕಳು ಆಚೀಚೆ ಓಡಾಡುವ ವೇಳೆ ಗಾಳಿ- ಮಳೆಗೆ
ಕುಸಿದು ಬಿದ್ದು, ಏನಾದರೂ ಅನಾಹುತ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.

ಹೊಸ ಕಟ್ಟಡಕ್ಕೆ ಎಸ್‌ಡಿಎಂಸಿ ಮನವಿ
ಈ ಶಿಥಿಲಗೊಂಡ ಕಟ್ಟಡ ಅಪಾಯಕಾರಿ ಯಾಗಿದ್ದು, ಇಲ್ಲಿ ತರಗತಿ ನಡೆಸಲು ಸಾಧ್ಯವಿಲ್ಲ. ಈ ಕಟ್ಟಡವನ್ನು ಆದಷ್ಟು ಬೇಗ ತೆರವು ಮಾಡಿ, ಆ ಜಾಗದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಕ್ರಮಕೈಗೊಳ್ಳಬೇಕು ಎನ್ನುವುದಾಗಿ ಶಾಲಾಭಿವೃದ್ಧಿ ಮತ್ತು
ಮೇಲುಸ್ತುವಾರಿ ಸಮಿತಿ ವತಿಯಿಂದ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.

ಇದಕ್ಕೂ ಮುನ್ನ ಬೈಂದೂರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ ಮನವಿ ಸಲ್ಲಿಸಿದ್ದು, ಅವರು ಸ್ವತಹಃ ಇಲ್ಲಿಗೆ ಭೇಟಿ ನೀಡಿ, ವರದಿ ತಯಾರಿಸಿ, ಮೇಲಧಿಕಾರಿಗಳಿಗೆ ಸಲ್ಲಿಸಿದ್ದರು. ಪ್ರಸ್ತುತ 58 ಮಂದಿ ಮಕ್ಕಳಿದ್ದು, ಮೂವರು ಶಿಕ್ಷಕರಿದ್ದಾರೆ. ಶಿಕ್ಷಕರ ಕಚೇರಿಯನ್ನೇ ತರಗತಿ ಕೋಣೆ ಯಾಗಿ ಮಾಡಲಾಗಿದೆ. ಇರುವಂತಹ ಕೊಠಡಿಗಳಲ್ಲಿಯೇ ತರಗತಿ ನಡೆಸಲಾಗುತ್ತಿದ್ದು, ಈ ಕಟ್ಟಡ ನೆಲಸಮಗೊಳಿಸಿ, ಆ ಜಾಗದಲ್ಲಿ ಹೊಸ ಕಟ್ಟಡ ನಿರ್ಮಾಣವಾದರೆ ಮಕ್ಕಳಿಗೆ ಅನುಕೂಲವಾಗಲಿದೆ.

50ವರ್ಷ ಹಳೆಯ ಕಟ್ಟಡ
ಬೈಂದೂರು ವಲಯದ ಹಟ್ಟಿಯಂಗಡಿ ಸರಕಾರಿ ಹಿ.ಪ್ರಾ. ಶಾಲೆಯ ಈ ಕಟ್ಟಡವೂ ಸುಮಾರು 50 ವರ್ಷಗಳಿಗೂ ಹಿಂದಿನದ್ದಾಗಿದೆ. ಈ ಶಾಲೆಯಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮ, ಸಭೆ, ಸಮಾರಂಭಗಳು ಇದೇ ಕಟ್ಟಡದಲ್ಲಿ ನಡೆಯುತ್ತಿದ್ದವು. ಪ್ರತೀ ಚುನಾವಣೆಯಲ್ಲೂ ಈ ಕಟ್ಟಡದಲ್ಲಿಯೇ ಮತಗಟ್ಟೆಯನ್ನು ತೆರೆಯಲಾಗುತ್ತಿತ್ತು. ಆದರೆ ಈ ಬಾರಿಯ ಲೋಕಸಭಾ ಚುನಾವಣೆ ವೇಳೆ ಇಲ್ಲಿ ಮತಗಟ್ಟೆ ತೆರೆದಿರಲಿಲ್ಲ. ಈ ಕಟ್ಟಡದಲ್ಲಿ 3 ಕೊಠಡಿಗಳಿದ್ದು, ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಸಿಮೆಂಟ್‌ ಹಾಕಿರುವುದು ಎದ್ದು ಹೋಗಿ, ಕೆಲವೆಡೆಗಳಲ್ಲಿ ಗೋಡೆ ಮಾತ್ರ ಕಾಣುತ್ತಿದೆ. ಶಿಥಿಲಗೊಂಡ ಈ ಕಟ್ಟಡದಲ್ಲಿ ಮುಂಜಾಗ್ರತ ಕ್ರಮವಾಗಿ ಕಳೆದ ವರ್ಷದ ಜುಲೈನಿಂದ ಮಕ್ಕಳಿಗೆ ತರಗತಿ ನಡೆಸಲಾಗುತ್ತಿಲ್ಲ. ಕಟ್ಟಡವೂ ರಸ್ತೆ ಬದಿಯೇ ಇರುವುದರಿಂದ ಗಾಳಿ – ಮಳೆ ಬಂದಾಗ ಕುಸಿದು, ಏನಾದರೂ ಅನಾಹುತ ಸಂಭವಿಸುವ ಸಾಧ್ಯತೆಗಳು ಇವೆ.

ತೆರವಿಗೆ ಸೂಚನೆ
ಎಸ್‌ಡಿಎಂಸಿಯವರ ಮನವಿಗೆ ಸ್ಪಂದಿಸಿರುವ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್‌ ಬಾಯಲ್‌ ಅವರು, ಶಿಥಿಲಗೊಂಡ ಈ ಕಟ್ಟಡವನ್ನು ತೆರವುಗೊಳಿಸುವ ಸಂಬಂಧ ಪರಿಶೀಲಿಸಿ, ನಿಯಮಾನುಸಾರ ಕ್ರಮಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿಯ ಉಪನಿರ್ದೇಶಕರಿಗೆ ಪತ್ರದ ಮೂಲಕ ಸೂಚಿಸಿದ್ದಾರೆ.

ಶೀಘ್ರ ತೆರವಿಗೆ ಆದೇಶ
ಹಟ್ಟಿಯಂಗಡಿ ಶಾಲೆಯ ಶಿಥಿಲ ಕಟ್ಟಡ ತೆರವಿಗೆ ಸಂಬಂಧಿಸಿದಂತೆ ನಾವು ಪಂಚಾಯತ್‌ ರಾಜ್‌ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಅವರಿಗೆ ಅಂದಾಜು ಪಟ್ಟಿ ಹಾಗೂ ತಾಂತ್ರಿಕ ವರದಿ ಕೊಡುವಂತೆ ಮನವಿ
ಸಲ್ಲಿಸಲಾಗಿದೆ. ಅದರಂತೆ ಅಲ್ಲಿಗೆ ಸಂಬಂಧಪಟ್ಟ ಅಧಿಕಾರಿಗಳು ಅಲ್ಲಿಗೆ ಭೇಟಿ ನೀಡಿ, ವರದಿ ತಯಾರಿಸಿದ್ದು, ಆದಷ್ಟು ಬೇಗ ಶಿಥಿಲ ಕಟ್ಟಡ ತೆರವಿಗೆ ಆದೇಶ ಆಗಲಿದೆ.
*ನಾಗೇಶ್‌ ನಾಯ್ಕ,
ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ

ಅಪಾಯಕಾರಿ ಕಟ್ಟಡದ ತೆರವಿಗೆ ತತ್‌ಕ್ಷಣ ಕ್ರಮಕೈಗೊಳ್ಳಿ
ಶಿಥಿಲಗೊಂಡ ಕಟ್ಟಡದ ತೆರವಿಗೆ ಕಳೆದ ಜುಲೈನಲ್ಲಿ ಸಂಬಂಧಪಟ್ಟ ಎಲ್ಲ ಇಲಾಖೆಗಳ ಗಮನಕ್ಕೆ ತಂದರೂ ಇಲ್ಲಿಯವರೆಗೆ ತೆರವು ಕಾರ್ಯ ಕೈಗೊಂಡಿಲ್ಲ. ಕಟ್ಟಡ ರಸ್ತೆಗೆ ಹತ್ತಿರವಿರುವುದರಿಂದ ಮಳೆಗಾಲದಲ್ಲಿ ಮಕ್ಕಳಿಗೆ, ಸಾರ್ವಜನಿಕರಿಗೂ ಅಪಾಯಕಾರಿಯಾಗಿದೆ. ಶೀಘ್ರ ಈ ಕಟ್ಟಡ ತೆರವಿಗೆ ಸಂಬಂಧಪಟ್ಟ ಇಲಾಖೆ ಕ್ರಮಕೈಗೊಳ್ಳಬೇಕು.
*ಮಹೇಶ್‌ ದೇವಾಡಿಗ ಎಚ್‌., ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ

*ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

Heavy Rain ಕೋಟೇಶ್ವರ: ಭಾರೀ ಮಳೆಗೆ ಬಾವಿ ಕುಸಿತ

Heavy Rain ಕೋಟೇಶ್ವರ: ಭಾರೀ ಮಳೆಗೆ ಬಾವಿ ಕುಸಿತ

Shankaranarayana: ಕಾರಿನಲ್ಲಿ ಬಂದು ದನ ಕಳ್ಳತನ; ಸಿಸಿ ಕೆಮರಾದಲ್ಲಿ ದಾಖಲು

Shankaranarayana ದನ ಕಳ್ಳತನ ಪ್ರಕರಣ; ಆರೋಪಿಗಳ ಬಂಧನ

Kamalashile: ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ

Kamalashile: ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.