Malpe: ಬೋಟ್ಗಳ ಸುರಕ್ಷತೆಗೆ ಕ್ರಮ; ಮಲ್ಪೆ ಬಂದರಿಗೆ ಬಿಗಿ ಭದ್ರತೆ
Team Udayavani, Jun 8, 2024, 4:22 PM IST
ಮಲ್ಪೆ: ಜೂನ್ 1ರಿಂದ ಜುಲೈ 31ರವರೆಗೆ ಆಳ ಸಮುದ್ರ ಮೀನುಗಾರಿಕೆಗೆ ನಿಷೇಧ ಇರುವುದ ರಿಂದ ಮಲ್ಪೆ ಬಂದರಿನಲ್ಲಿ ದೋಣಿಗಳ ನಿಲುಗ ಡೆಗೆ ಅವಕಾಶ ನೀಡಲಾಗಿದೆ. ಕೋಟ್ಯಂತರ ಮೌಲ್ಯದ ಸಾವಿರಾರು ಬೋಟುಗಳ ಸುರಕ್ಷೆಯ ದೃಷ್ಟಿಯಿಂದ ಬಂದರಿನಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಮಾಡಲು ತೀರ್ಮಾನಿಸಲಾಗಿದೆ.
ಬಂದರಿನಲ್ಲಿ ಅಗತ್ಯ ಪೂರ್ವ ಸಿದ್ಧತಾ ಕ್ರಮ ಕೈಗೊಳ್ಳುವ ಬಗ್ಗೆ ಉಡುಪಿ ಮೀನುಗಾರಿಕಾ ಜಂಟಿ ನಿರ್ದೇಶಕ ವಿವೇಕ್ ಆರ್. ಅವರ ಅಧ್ಯಕ್ಷತೆಯಲ್ಲಿ ಮೀನುಗಾರರು ಮತ್ತು ವಿವಿಧ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು.
ರಾತ್ರಿ ವೇಳೆ ನಿತ್ಯ ಪೊಲೀಸ್ ಗಸ್ತು ಇರಿಸಬೇಕು ಮತ್ತು ಅಗ್ನಿ ಆಕಸ್ಮಿಕ ನಿಯಂತ್ರಿಸಲು ಅಗ್ನಿ ಶಾಮಕದಳ ಸನ್ನದ್ಧರಾಗಿರಬೇಕು ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ ಇಲಾಖಾಧಿಕಾರಿಗಳನ್ನು ಆಗ್ರಹಿಸಿದರು.
ಮೀನುಗಾರರ ಸಂಘದ ಕಾರ್ಯದರ್ಶಿ ಜಗನ್ನಾಥ ಕಡೆಕಾರ್, ನಾಡದೋಣಿ ಮೀನುಗಾರರ ಸಹಕಾರ ಸಂಘದ ಕಾರ್ಯದರ್ಶಿ ಗೋಪಾಲ್ ಆರ್. ಕೆ., ಯಾಂತ್ರಿಕ ಟ್ರಾಲ್ ದೋಣಿ ಮೀನುಗಾರರ ಸಹಕಾರ ಸಂಘದ ಕಾರ್ಯದರ್ಶಿ ಪ್ರಶಾಂತ್ ಕುಮಾರ್, ಡೀಪ್ ಸೀ ಟ್ರಾಲ್ ದೋಣಿ ಮೀನುಗಾರರ ಅಸೋಸಿಯೇಷನ್ ಅಧ್ಯಕ್ಷ ಸುಭಾಷ್ ಮೆಂಡನ್,ಆಳಸಮುದ್ರ ಬೋಟ್ ಮಾಲಕರ ಸಂಘದ ಕಾರ್ಯದರ್ಶಿ ಹರಿಶ್ಚಂದ್ರ, ಯಾಂತ್ರಿಕ ಟ್ರಾಲ್ ಮೀನುಗಾರರ ಸಹಕಾರ ಸಂಘದ ನಿರ್ದೇಶಕ ಕಿಶೋರ್ ಡಿ. ಸುವರ್ಣ, ಪರ್ಸೀನ್ ಮೀನುಗಾರರ ಸಂಘದ ಉಪಾಧ್ಯಕ್ಷ ಮಧುಕರ್ ಸುವರ್ಣ, ವಿವಿಧ ಮೀನುಗಾರ ಸಂಘಟನೆಗಳು ಪ್ರತಿನಿಧಿಗಳು, ಮಲ್ಪೆ ಪೊಲೀಸ್
ಠಾಣೆ, ಕರಾವಳಿ ಪೊಲೀಸ್ ಪಡೆ, ಅಗ್ನಿಶಾಮಕ ದಳದ ಅಧಿಕಾರಿಗಳು ಉಪಸ್ಥಿತರಿದ್ದರು. ಮೀನುಗಾರಿಕೆ ಉಪ ನಿರ್ದೇಶಕಿ ಸವಿತಾ ಖಾದ್ರಿ ಕೆ. ಎಸ್. ಸ್ವಾಗತಿಸಿ, ವಂದಿಸಿದರು.
ಏನೇನು ಸುರಕ್ಷತಾ ಕ್ರಮ?
* ಬೋಟ್ಗಳ ದುರಸ್ತಿಗಾಗಿ ಜನರೇಟರ್ ಬಳ ಸಲು ಮೀನುಗಾರಿಕೆ ಇಲಾಖೆ ಅನುಮತಿ ಪಡೆಯಬೇಕು.
* ಪ್ರತಿ ದಿನ ಬೆಳಗ್ಗೆ 9ರಿಂದ ಸಂಜೆ 6 ರವರೆಗೆ ಮಾತ್ರ ದೋಣಿ ದುರಸ್ತಿ ನಡೆಸಲು ಅವಕಾಶ.
* ಸೀ ವಾಕ್ವೇಗೆ ಹೋಗುವ ವಾಹನಗಳನ್ನು ತಪಾಸಣೆ ಮಾಡಿಯೇ ಅನುಮತಿ ನೀಡಬೇಕು.
* ಸಂಜೆ 6 ಗಂಟೆ ಬಳಿಕ ವಾಹನಗಳನ್ನು ಬಂದರಿನೊಳಗೆ ಸಂಚಾರಿಸಲು ನಿಷೇಧ ಹೇರಲಾಗುವುದು.
* ಬಂದರಿನಲ್ಲಿ ರಾತ್ರಿ ಪೊಲೀಸ್ ಗಸ್ತು ತಿರುಗುವುದು, ಅಗ್ನಿ ಶಾಮಕ ದಳ ಸನ್ನದ್ಧರಾಗಿರುವುದು
* ಬಂದರಿನ ಎಲ್ಲ ಡೀಸೆಲ್ ಬಂಕ್ಗಳಲ್ಲಿ ಭದ್ರತಾ ಸಿಬಂದಿ ನೇಮಕ
* ಆಯಕಟ್ಟಿನ ಪ್ರದೇಶಗಳಲ್ಲಿ ದಿನದ 24 ಗಂಟೆ ಸಿ.ಸಿ. ಕೆಮೆರಾ ಕಾರ್ಯ ನಿರತವಾಗಿರಬೇಕು.
* ಹೊರರಾಜ್ಯದ ಬೋಟ್ಗಳು ತುರ್ತು ಪರಿಸ್ಥಿತಿ ಹೊರತುಪಡಿಸಿ, ಉಳಿದ ಸಂದರ್ಭದಲ್ಲಿ ಪ್ರವೇ ಶವಿಲ್ಲ
*ಸಿನೆಮಾ ಚಿತ್ರೀಕರಣಕ್ಕೆ ಅವಕಾಶವಿಲ್ಲ.
ಮುಂಜಾಗ್ರತ ಕ್ರಮ
ಮಲ್ಪೆ ಬಂದರಿನಲ್ಲಿ ಬೋಟ್ಗಳ ಸುರಕ್ಷತೆಗೆ ಅಗತ್ಯ ಪೂರ್ವ ಸಿದ್ಧತೆ ಮತ್ತು ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳ ಲಾಗುವುದು. ಯಾವುದೇ ಕಳ್ಳತನ, ಅಹಿತಕರ ಘಟನೆ ನಡೆಯದಂತೆ ಕ್ರಮ ತೆಗೆದುಕೊಳ್ಳಲಾಗುವುದು.
*ವಿವೇಕ್ ಆರ್., ಮೀನುಗಾರಿಕೆ ಜಂಟಿ ನಿರ್ದೇಶಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ರಸ್ತೆ ಮಾರ್ಜಿನ್ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.
Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ
Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ
Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫಲ ಬಿಡಬಹುದು
Fishing: ಬುಲ್ಟ್ರಾಲ್ ನಿಷೇಧ ಕಟ್ಟುನಿಟ್ಟು ಮಾಡಿ: ಸಚಿವರಿಗೆ ಮನವಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.