ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಹಾಲಹಂಡೆ ಜಲಪಾತ


Team Udayavani, Jun 8, 2024, 6:33 PM IST

ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಹಾಲಹಂಡೆ ಜಲಪಾತ

ಗುಳೇದಗುಡ್ಡ : ಕಾನನ ಮಧ್ಯದೊಳಗೊಂದು ನೀರಿನ ಆರ್ಭಟ. ಎತ್ತ ನೋಡಿದರು ಹಚ್ಚಹಸಿರಿನ ಸಿರಿ, ನಿಶಬ್ದ ವಾತಾವಾರಣ. ಇದು ಕಂಡು ಬರುವುದು ತಾಲೂಕಿನ ಹಾನಾಪುರ ಎಸ್‌ಪಿ ಗ್ರಾಮದ ಗುಡ್ಡದ ಹಾಲಹಂಡೆ ಜಲಪಾತದಲ್ಲಿ.

ಹಾನಾಪುರ ಎಸ್.ಪಿ. ಗ್ರಾಮದಿಂದ 1ಕಿಮೀ ದೂರದಲ್ಲಿರುವ ಈ ಹಾಲಹಂಡೆ ಜಲಪಾತ ನಿಜಕ್ಕೂ ಅಧ್ಭುತವಾಗಿದ್ದು, ಈ ಜಾಗಕ್ಕೆ ಭೇಟಿಕೊಟ್ಟರೇ ಸಾಕು ರಮಣೀಯ ದೃಶ್ಯವನ್ನು ಕಾಣಸಿಗಬಹುದು. ಇಲ್ಲಿ ಸುಮಾರು 80 ಅಡಿ ಎತ್ತರದಿಂದ ಧುಮ್ಮಿಕ್ಕುವ ಹಾಲಹಂಡೆ ಜಲಪಾತ ಈಗ ಪ್ರವಾಸಿಗರ ಗಮನ ಸೆಳೆದಿದೆ.

ಮಳೆಗಾಲದಲ್ಲಿ ತನ್ನ ಸೌಂದರ್ಯ ತೋರಿಸುವ ಈ ಜಲಪಾತ ಪ್ರಕೃತಿಯ ಮಡಿಲಲ್ಲಿದೆ. ಉತ್ತಮವಾಗಿ ಮಳೆಯಾದರೆ ಸಾಕು ಇದರ ವೈಯಾರ ಹೆಚ್ಚುತ್ತದೆ. ಪ್ರವಾಸಿಗರ ಕಣ್ಣಿಗೂ ಕಾಣದೇ ಇದ್ದ ಜಲಪಾತಕ್ಕೆ ಈಗ ಹೋಗಲು ಮಾರ್ಗವಿದೆ. ಕೆಳಗಡೆ ಈಜಲು ಹೊಂಡದಂತೆ ಸ್ಥಳವಿದೆ. ಜಲಪಾತ ಕಡೆ ಅಲ್ಲಲ್ಲಿ ಕೆಲವು ಬೃಹತ್ ಗಾತ್ರದ ಕಲ್ಲುಗಳಿದ್ದು, ನೀರಿನ ಕೆಳಗೆ ಕುಳಿತು ಜಪ ಮಾಡಲೆಂದು ಯಾರೊ ಹಾಕಿದ್ದಾರೇನು ಎನ್ನುವ ರೀತಿಯಲ್ಲಿಯೇ ಅವುಗಳು ಕಾಣಸಿಗುತ್ತವೆ.

ಈಶ್ವರ ಪಡಿ: ಈ ಹಾಲಹಂಡೆ ಜಲಪಾತದಿಂದ ಮುಂದೆ ಸಾಗಿದರೆ ಈಶ್ವರ ಪಡಿ ಸಿಗುತ್ತದೆ. ಇಲ್ಲಿ ಶಿವಲಿಂಗವಿದ್ದು, ಅಲ್ಲದೇ 10-20 ಜನರು ಊಟ ಮಾಡುವ ವಿಶಾಲವಾದ ಸ್ಥಳವಿದೆ. 1937ರಿಂದ ಇಲ್ಲಿಯವರೆಗೆ ಇಲ್ಲಿ ಬಂದು ಹೋದವರು ಅಲ್ಲಿ ತಮ್ಮ ಹೆಸರುಗಳನ್ನು ಬರೆದಿರುವುದು ಕಂಡು ಬರುತ್ತವೆ. ಈ ಹಾಲಹಂಡೆ ಜಲಪಾತದಿಂದ ಹರಿಯುವ ನೀರು ಸುಮಾರು 5-6 ಕಿಮೀ ದೂರದ ಗಂಜಿಗೆರೆ, ಖಾನಾಪುರ ಬಳಿಯ ದೊಡ್ಡ ಕೆರೆ, ಪರ್ವತಿ ಬಳಿಯ ಈರಣ್ಣ ಕೆರೆಗಳಿಗೆ ಹರಿದು ಹೋಗುತ್ತದೆ.

ಹೋಗುವುದು ಹೇಗೆ: ಈ ಸುಂದರ ನಿಸರ್ಗ ರಮಣೀಯ ಸ್ಥಳಕ್ಕೆ ಗುಳೇದಗುಡ್ಡದಿಂದ ಹಾನಾಪುರ ಎಸ್‌ಪಿ ಗ್ರಾಮದ ಶಾಲೆಯ ಬಲ ಭಾಗದ ರಸ್ತೆಯಿಂದ15-20 ನಿಮಿಷ ನಡೆದು ಮೂರಾಲ್ಕು ಹೊಲಗಳನ್ನು ದಾಟಿ ಸ್ವಲ್ಪ ದೂರ ಗುಡ್ಡದಲ್ಲಿ ಹಾಲ ಹಂಡೆ ಜಲಪಾತ, ಕಣ್ಣಿಗೆ ಗೋಚರಿಸುತ್ತದೆ.

ಗಂಜಿಗೇರಿ ಕೆರೆಯಿಂದಲೂ ಈ ಜಲಪಾತಕ್ಕೆ ಹೋಗಬಹುದು ಆದರೆ, ಈ ಗಂಜಿಗೇರಿ ಕೆರೆಯಿಂದ ಬರುವುದು ಕಷ್ಟದ ಕೆಲಸ. ಅಲ್ಲದೇ ಗಂಜಿಗೇರಿ ಕೆರೆಯವರೆಗೆ ಮಾತ್ರ ವಾಹನಗಳು ಹೋಗುತ್ತವೆ. ಅಲ್ಲಿಂದ ಗುಡ್ಡದಲ್ಲಿ ನಡೆದು 1-2 ಕಿಮೀ ಸಂಚರಿಸಬೇಕಾಗುತ್ತದೆ.

-ಮಲ್ಲಿಕಾರ್ಜುನ ಕಲಕೇರಿ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.