ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಹಾಲಹಂಡೆ ಜಲಪಾತ
Team Udayavani, Jun 8, 2024, 6:33 PM IST
ಗುಳೇದಗುಡ್ಡ : ಕಾನನ ಮಧ್ಯದೊಳಗೊಂದು ನೀರಿನ ಆರ್ಭಟ. ಎತ್ತ ನೋಡಿದರು ಹಚ್ಚಹಸಿರಿನ ಸಿರಿ, ನಿಶಬ್ದ ವಾತಾವಾರಣ. ಇದು ಕಂಡು ಬರುವುದು ತಾಲೂಕಿನ ಹಾನಾಪುರ ಎಸ್ಪಿ ಗ್ರಾಮದ ಗುಡ್ಡದ ಹಾಲಹಂಡೆ ಜಲಪಾತದಲ್ಲಿ.
ಹಾನಾಪುರ ಎಸ್.ಪಿ. ಗ್ರಾಮದಿಂದ 1ಕಿಮೀ ದೂರದಲ್ಲಿರುವ ಈ ಹಾಲಹಂಡೆ ಜಲಪಾತ ನಿಜಕ್ಕೂ ಅಧ್ಭುತವಾಗಿದ್ದು, ಈ ಜಾಗಕ್ಕೆ ಭೇಟಿಕೊಟ್ಟರೇ ಸಾಕು ರಮಣೀಯ ದೃಶ್ಯವನ್ನು ಕಾಣಸಿಗಬಹುದು. ಇಲ್ಲಿ ಸುಮಾರು 80 ಅಡಿ ಎತ್ತರದಿಂದ ಧುಮ್ಮಿಕ್ಕುವ ಹಾಲಹಂಡೆ ಜಲಪಾತ ಈಗ ಪ್ರವಾಸಿಗರ ಗಮನ ಸೆಳೆದಿದೆ.
ಮಳೆಗಾಲದಲ್ಲಿ ತನ್ನ ಸೌಂದರ್ಯ ತೋರಿಸುವ ಈ ಜಲಪಾತ ಪ್ರಕೃತಿಯ ಮಡಿಲಲ್ಲಿದೆ. ಉತ್ತಮವಾಗಿ ಮಳೆಯಾದರೆ ಸಾಕು ಇದರ ವೈಯಾರ ಹೆಚ್ಚುತ್ತದೆ. ಪ್ರವಾಸಿಗರ ಕಣ್ಣಿಗೂ ಕಾಣದೇ ಇದ್ದ ಜಲಪಾತಕ್ಕೆ ಈಗ ಹೋಗಲು ಮಾರ್ಗವಿದೆ. ಕೆಳಗಡೆ ಈಜಲು ಹೊಂಡದಂತೆ ಸ್ಥಳವಿದೆ. ಜಲಪಾತ ಕಡೆ ಅಲ್ಲಲ್ಲಿ ಕೆಲವು ಬೃಹತ್ ಗಾತ್ರದ ಕಲ್ಲುಗಳಿದ್ದು, ನೀರಿನ ಕೆಳಗೆ ಕುಳಿತು ಜಪ ಮಾಡಲೆಂದು ಯಾರೊ ಹಾಕಿದ್ದಾರೇನು ಎನ್ನುವ ರೀತಿಯಲ್ಲಿಯೇ ಅವುಗಳು ಕಾಣಸಿಗುತ್ತವೆ.
ಈಶ್ವರ ಪಡಿ: ಈ ಹಾಲಹಂಡೆ ಜಲಪಾತದಿಂದ ಮುಂದೆ ಸಾಗಿದರೆ ಈಶ್ವರ ಪಡಿ ಸಿಗುತ್ತದೆ. ಇಲ್ಲಿ ಶಿವಲಿಂಗವಿದ್ದು, ಅಲ್ಲದೇ 10-20 ಜನರು ಊಟ ಮಾಡುವ ವಿಶಾಲವಾದ ಸ್ಥಳವಿದೆ. 1937ರಿಂದ ಇಲ್ಲಿಯವರೆಗೆ ಇಲ್ಲಿ ಬಂದು ಹೋದವರು ಅಲ್ಲಿ ತಮ್ಮ ಹೆಸರುಗಳನ್ನು ಬರೆದಿರುವುದು ಕಂಡು ಬರುತ್ತವೆ. ಈ ಹಾಲಹಂಡೆ ಜಲಪಾತದಿಂದ ಹರಿಯುವ ನೀರು ಸುಮಾರು 5-6 ಕಿಮೀ ದೂರದ ಗಂಜಿಗೆರೆ, ಖಾನಾಪುರ ಬಳಿಯ ದೊಡ್ಡ ಕೆರೆ, ಪರ್ವತಿ ಬಳಿಯ ಈರಣ್ಣ ಕೆರೆಗಳಿಗೆ ಹರಿದು ಹೋಗುತ್ತದೆ.
ಹೋಗುವುದು ಹೇಗೆ: ಈ ಸುಂದರ ನಿಸರ್ಗ ರಮಣೀಯ ಸ್ಥಳಕ್ಕೆ ಗುಳೇದಗುಡ್ಡದಿಂದ ಹಾನಾಪುರ ಎಸ್ಪಿ ಗ್ರಾಮದ ಶಾಲೆಯ ಬಲ ಭಾಗದ ರಸ್ತೆಯಿಂದ15-20 ನಿಮಿಷ ನಡೆದು ಮೂರಾಲ್ಕು ಹೊಲಗಳನ್ನು ದಾಟಿ ಸ್ವಲ್ಪ ದೂರ ಗುಡ್ಡದಲ್ಲಿ ಹಾಲ ಹಂಡೆ ಜಲಪಾತ, ಕಣ್ಣಿಗೆ ಗೋಚರಿಸುತ್ತದೆ.
ಗಂಜಿಗೇರಿ ಕೆರೆಯಿಂದಲೂ ಈ ಜಲಪಾತಕ್ಕೆ ಹೋಗಬಹುದು ಆದರೆ, ಈ ಗಂಜಿಗೇರಿ ಕೆರೆಯಿಂದ ಬರುವುದು ಕಷ್ಟದ ಕೆಲಸ. ಅಲ್ಲದೇ ಗಂಜಿಗೇರಿ ಕೆರೆಯವರೆಗೆ ಮಾತ್ರ ವಾಹನಗಳು ಹೋಗುತ್ತವೆ. ಅಲ್ಲಿಂದ ಗುಡ್ಡದಲ್ಲಿ ನಡೆದು 1-2 ಕಿಮೀ ಸಂಚರಿಸಬೇಕಾಗುತ್ತದೆ.
-ಮಲ್ಲಿಕಾರ್ಜುನ ಕಲಕೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ
Minister RB Timmapur ರಾಜ್ಯ ಸರ್ಕಾರ ರೈತರ ಪರವಾಗಿ ಕಾರ್ಯ ಮಾಡುತ್ತಿದೆ
ಬಾಗಲಕೋಟೆ: ಫಲಾನುಭವಿಗಳಿಗೆ ಸಾಲ ವಿಳಂಬ ಮಾಡಬೇಡಿ-ಶಶಿಧರ ಕುರೇರ
Mudhol: ತಾಯಿ-ಮಗು ಆಸ್ಪತ್ರೆ ಅನುಷ್ಠಾನಕ್ಕೆ ಕ್ರಮ: ಸಚಿವ ದಿನೇಶ್ ಗುಂಡೂರಾವ್
Congress Government: ತೈಲ, ಹಾಲಿನ ದರ ಹೆಚ್ಚಿಸಿ ಬಡವರಿಗೆ ಅನ್ಯಾಯ
MUST WATCH
ಹೊಸ ಸೇರ್ಪಡೆ
T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು
T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ
Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು
Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.