Kasaragod: ಟೆಲಿಫೋನ್‌ ಕಂಬಕ್ಕೆ ಬೈಕ್‌ ಢಿಕ್ಕಿ; ಇಬ್ಬರ ಸಾವು


Team Udayavani, Jun 8, 2024, 6:42 PM IST

Kasaragod: ಟೆಲಿಫೋನ್‌ ಕಂಬಕ್ಕೆ ಬೈಕ್‌ ಢಿಕ್ಕಿ; ಇಬ್ಬರ ಸಾವು

ಕಾಸರಗೋಡು: ಪಯ್ಯನ್ನೂರು ಪರಿಸರದಲ್ಲಿ ನಿಯಂತ್ರಣ ತಪ್ಪಿದ ಮೋಟಾರ್‌ ಬೈಕ್‌ ಟೆಲಿಫೋನ್‌ ಕಂಬಕ್ಕೆ ಢಿಕ್ಕಿ ಹೊಡೆದು ತೃಕ್ಕರಿಪುರ ಮೊಟ್ಟಮ್ಮಲ್‌ ಈಸ್ಟ್‌ನ ಮುಹಮ್ಮದ್‌ ಕುಂಞಿ ಅವರ ಪುತ್ರ ವಿ.ಪಿ.ಎಂ.ಮುಹಮ್ಮದ್‌ ಸುಹೈಸ್‌ (27) ಮತ್ತು ಪಯ್ಯನ್ನೂರು ಪೆರುಂಬಳ ಕಕ್ಕೋಟಕ್ಕತ್ತ್ ನಿವಾಸಿ ಶಾಹುಲ್‌ ಹಮೀದ್‌ ಅವರ ಪುತ್ರ ಕೆ. ಶಾಹಿದ್‌ (22) ಮೃತಪಟ್ಟರು.

ಜೂ. 6ರಂದು ರಾತ್ರಿ 12.30ಕ್ಕೆ ಅಪಘಾತ ಸಂಭವಿಸಿದ್ದು ಬೈಕ್‌ನಿಂದ ಬಿದ್ದ ಯುವಕರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ.

———————————————————————————————————————————-

ನಕಲಿ ಚಿನ್ನ ಅಡವಿರಿಸಿ ಸಾಲ ಪಡೆದು ವಂಚನೆ: ಮಹಿಳೆಯ ವಿರುದ್ಧ ಕೇಸು ದಾಖಲು

ಕಾಸರಗೋಡು: ನಕಲಿ ಚಿನ್ನದೊಡವೆ ಅಡವಿರಿಸಿ ಬ್ಯಾಂಕ್‌ನಿಂದ 1,79,000 ರೂ. ಸಾಲ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಸೂರ್ಲು ನಿವಾಸಿ ಸುಬೈದಾ ಮಂಜಿಲ್‌ನ ಖೈರುನ್ನೀಸಾ (45) ವಿರುದ್ಧ ಕಾಸರಗೋಡು ಪೊಲೀಸರು ಕೇಸು ದಾಖಲಿಸಿದ್ದಾರೆ.

ಇ.ಎಸ್‌.ಎ.ಎಫ್‌. ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌ನ ಕಾಸರಗೋಡು ಶಾಖೆಯ ಮೆನೇಜರ್‌ ಅನೀಶ್‌ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಪ್ರಸ್ತುತ ಬ್ಯಾಂಕ್‌ನಿಂದ ಖೈರುನ್ನೀಸಾ 2023ರ ಡಿ.6ರಂದು 48.36 ಗ್ರಾಂ ನಕಲಿ ಚಿನ್ನದ ಬಳೆಗಳನ್ನು ಅಡವಿರಿಸಿ 1,79,000 ರೂ. ಸಾಲ ಪಡೆದು ವಂಚಿಸಿದ್ದಾಗಿ ಬ್ಯಾಂಕ್‌ ಮೆನೇಜರ್‌ ಪೊಲೀಸರಿಗೆ ದೂರು ನೀಡಿದ್ದರು.

—————————————————————————————————————————————-

ಕಾರಡ್ಕ ಸೊಸೈಟಿ ವಂಚನೆ ಪ್ರಕರಣ ಸೂತ್ರಧಾರ ಪೊಲೀಸ್‌ ವಶದಲ್ಲಿ

ಕಾಸರಗೋಡು:ಕಾರಡ್ಕ ಅಗ್ರಿಕಲ್ಚರಿಸ್ಟ್‌ ವೆಲ್ಫೇರ್ ಕೋ-ಆಪರೇಟಿವ್‌ ಸೊಸೈಟಿಯಿಂದ 4.76 ಕೋಟಿ ರೂಪಾಯಿ ವಂಚನೆ ನಡೆಸಿದ ಪ್ರಕರಣದಲ್ಲಿ ಸೂತ್ರಧಾರ ಕಲ್ಲಿಕೋಟೆ ರಾಮನಾಟುಕರ ನಿವಾಸಿ ನಬೀಲ್‌ (42)ನನ್ನು ತನಿಖಾ ತಂಡ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ. ವಂಚನೆ ಪ್ರಕರಣದಲ್ಲಿ ಬಂಧಿತ ಆರೋಪಿಗಳಾದ ಸೊಸೈಟಿಯ ಕಾರ್ಯದರ್ಶಿ ಕರ್ಮಂತೋಡಿ ಬಾಳಕಂಡದ ಕೆ.ರತೀಶನ್‌, ಕಣ್ಣೂರು ಚೊವ್ವ ನಿವಾಸಿ, ಪಯ್ಯನ್ನೂರಿನಲ್ಲಿ ವಾಸಿಸುವ ಜಬ್ಟಾರ್‌ ಯಾನೆ ಮಂಞಕಂಡಿ ಅಬ್ದುಲ್‌ ಜಬ್ಟಾರ್‌ನಿಂದ ಲಭಿಸಿದ ಮಾಹಿತಿಯಂತೆ ನಬೀಲ್‌ನನ್ನು ವಶಕ್ಕೆ ತೆಗೆದುಕೊಂಡಿದೆ.

ಸೊಸೈಟಿಯಿಂದ ರತೀಶನ್‌ ಎಗರಿಸಿದ ಹಣವೂ ಜಬ್ಟಾರ್‌ ಮುಖಾಂತರ ನಬೀಲ್‌ನ ಕೈಗೆ ಸೇರಿದೆಯೆಂದು ಅವರಿಬ್ಬರು ನೀಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. ನಬೀಲ್‌ ಹಾಗೂ ಜಬ್ಟಾರ್‌ ಸೇರಿ ನಕಲಿ ದಾಖಲೆ ಪತ್ರ ಸೃಷ್ಟಿಸಿ ವಂಚನೆ ನಡೆಸಿದ್ದಾಗಿ ತಿಳಿದು ಬಂದಿದೆ. ಜಬ್ಟಾರ್‌ಗೆ ಬ್ರಿಟನ್‌ನಿಂದ 673 ಕೋಟಿ ರೂ. ಲಭಿಸಲಿದೆಯೆಂದು ತಿಳಿಸುವ ರಿಸರ್ವ್‌ ಬ್ಯಾಂಕ್‌ನ ಹೆಸರಿನಲ್ಲಿರುವ ನಕಲಿ ದಾಖಲೆ ಪತ್ರವನ್ನು ತೋರಿಸಿ ತಂಡ ವಂಚನೆ ನಡೆಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ರಿಸರ್ವ್‌ ಬ್ಯಾಂಕ್‌ ಗವರ್ನರ್‌ನ ನಕಲಿ ಸಹಿ ಹಾಕಿ ದಾಖಲೆಪತ್ರ ಸೃಷ್ಟಿಸಿಲಾಗಿತ್ತು. ಪೊಲೀಸರ ವಶದಲ್ಲಿರುವ ನಬೀಲ್‌ ಎನ್‌ಐಎ ಅಧಿಕಾರಿ ಎಂದು ಹೇಳಿಕೊಂಡು ಕೋಟ್ಯಂತರ ರೂ. ವಂಚನೆ ನಡೆಸಿರುವುದಾಗಿ ತನಿಖಾ ತಂಡಕ್ಕೆ ಸೂಚನೆ ಲಭಿಸಿದೆ. ಎನ್‌ಐಎ ಅಧಿಕಾರಿಗಳು ಬಳಸುವ ಓವರ್‌ ಕೋಟ್‌ ಧರಿಸಿ ನಬೀಲ್‌ ಬಂದೂಕು ಕೈವಶವಿರಿಸಿ ವ್ಯಕ್ತಿಗಳನ್ನು ಕಾಣಲು ತೆರಳುತ್ತಿದ್ದನೆಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಕುಂಬಾxಜೆ ಪಂಚಾಯತ್‌ ವ್ಯಾಪ್ತಿಯ ನಿವಾಸಿಯೋರ್ವ ಶಾಮೀಲಾಗಿದ್ದು, ಈತನಿಗಾಗಿ ಶೋಧ ನಡೆಯುತ್ತಿದೆ.

ಟಾಪ್ ನ್ಯೂಸ್

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

04

Kasaragod: ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ

0023

Kasargod: ಅಪಹರಿಸಿ ಹಲ್ಲೆ ಪ್ರಕರಣ: ಬಂಧನ

Election: ಬಿಜೆಪಿ, ಜೆಡಿಎಸ್‌ ಜತೆಯಾಗಿ ಸ್ಪರ್ಧೆ: ಸಾ.ರಾ. ಮಹೇಶ್‌

Election: ಬಿಜೆಪಿ, ಜೆಡಿಎಸ್‌ ಜತೆಯಾಗಿ ಸ್ಪರ್ಧೆ: ಸಾ.ರಾ. ಮಹೇಶ್‌

man-a

Kumble: ಕಾರು ಅಪಘಾತ; ಗಾಯಾಳು ಮಹಿಳೆ ಸಾವು

12

Madikeri: 2022ರಲ್ಲಿ ನಡೆದ ಮಹಿಳೆಯ ಹತ್ಯೆ: ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.