ಪಕ್ಷದ ಸೋಲಿಗೆ ಕಾರ್ಯಕರ್ತರು ಧೃತಿಗೆಡಬೇಕಾಗಿಲ್ಲ: ಕಿಮ್ಮನೆ ರತ್ನಾಕರ್


Team Udayavani, Jun 8, 2024, 8:47 PM IST

ಪಕ್ಷದ ಸೋಲಿಗೆ ಕಾರ್ಯಕರ್ತರು ಧೃತಿಗೆಡಬೇಕಾಗಿಲ್ಲ: ಕಿಮ್ಮನೆ ರತ್ನಾಕರ್

ತೀರ್ಥಹಳ್ಳಿ: ಸಂಸತ್‌ ಭವನದ ಮುಂಭಾಗದಲ್ಲಿ ಅವರ ಮುಖಂಡರೇ ಸಂವಿಧಾನದ ಪುಸ್ತಕ ಸುಟ್ಟು ಹಾಕಿದ್ದರು. ಈಗ ಅದೇ ಪುಸ್ತಕಕ್ಕೆ ಮೋದಿ ನಮಸ್ಕಾರ ಮಾಡುತ್ತಿದ್ದಾರೆ. ಚುನಾವಣೆಗೆ ಮೊದಲು ಸಂವಿಧಾನವನ್ನು ಹೊಸದಾಗಿ ಬರೆಯುತ್ತೇವೆ ಎಂದು ಹೇಳಿದ್ದರು. ತಾಳಿ ಸರದ ಬಗ್ಗೆ ಮಾತನಾಡಿದ್ದರು. ಪ್ರಧಾನಮಂತ್ರಿಗಳ ಇಂತಹ ಹೇಳಿಕೆಯಿಂದ ಈ ಬಾರಿ ಬದಲಾವಣೆ ಆಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಗೆಲುವು ಆಶ್ಚರ್ಯ ಏನಿಲ್ಲ. ಇದು ನಮ್ಮ ಮುಖಂಡರು ಅಥವಾ ಕಾರ್ಯಕರ್ತರ ಸೋಲಲ್ಲ. ಹಣಕ್ಕಾಗಿ ಮಾರಿಕೊಳ್ಳುವ ಒಂದಿಷ್ಟು ಮತಗಳು ಇವೆ. ಅದನ್ನೇ ಅವರು ನಂಬಿಕೊಂಡಿದ್ದಾರೆ. ಅಂತಹ ಹಿಡನ್‌ ಅಜೆಂಡಾ ವಿರುದ್ಧ ಕಾಂಗ್ರೆಸ್‌ ಹೋರಾಟ ಮಾಡುತ್ತದೆ. ಪ್ರಧಾನಮಂತ್ರಿ ಕುಳಿತಿರುವ ಕುರ್ಚಿ ಒಂದೇ. ಆದರೆ ಅದರ ನಾಲ್ಕು ಕಾಲುಗಳು ಬೇರೆಯವರ ಕೈಯಲ್ಲಿವೆ ಎಂದರು.

ಪ್ರತಿ ಕ್ಷೇತ್ರದಲ್ಲಿ 12 ರಿಂದ 13 ಕೋಟಿ ಹಣ ಕೊಟ್ಟಿದ್ದಾರೆ. ಮರಳು, ಬಂಡೆಯವರು ಶಾಲು ಹಾಕಿಕೊಂಡು ಇರುವುದು ನೋಡಿದರೆ ಜ್ಞಾನೇಂದ್ರ ಅವರೇ ಮರಳು ನೀಡಿರುವುದು ಎಂಬಂತಿದೆ. ಎಲ್ಲರನ್ನು ಹೆದರಿಸಿ ಇಟ್ಟಿದ್ದಾರೆ. ಹಣಕ್ಕಾಗಿ ಕೊಡುವ ಮತವನ್ನು ಪರಿವರ್ತನೆ ಮಾಡುವ ಕೆಲಸ ಇನ್ನು ಮುಂದೆ ಮಾಡಲಿದ್ದೇನೆ. ಬಡತನ ಕುಟುಂಬದಿಂದ ಬಂದ ಆರಗ ಮೊದಲ ಬಾರಿ ಶಾಸಕರಾದ ಮೇಲೆ 20,800 ರೂ. ಹಣ ಬರುತ್ತಿತ್ತು. ಅದರಲ್ಲೇ ಜೀವನ ಸಾಗಿಸುತ್ತಿದ್ದಾರಾ? ಈ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಬರಲು ನಾನು ಸಿದ್ಧನಿದ್ದೇನೆ ಎಂದು ಸವಾಲೆಸೆದರು.

ಈಗಿನ ಚುನಾವಣೆಯಲ್ಲಿ ಹಣಬಲದಿಂದ ಗೆದ್ದಿದ್ದಾರೆ ಹೊರತು ವಿಷಯ, ವಿಚಾರದಿಂದ ಅಲ್ಲ. ಸುಳ್ಳು ಪ್ರಚಾರ ಮಾಡಿ ಗೆದ್ದಿದ್ದಾರೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ಅವರನ್ನು ಹೊಗಳಿದ್ದರು. ಆದರೆ ಅಲ್ಲಿನ ಚುನಾವಣೆಯಲ್ಲಿ ಏನಾಯಿತು? ಕೋಮುವಾದ ಇಟ್ಟುಕೊಂಡು ಪ್ರಚಾರ ಮಾಡುತ್ತಾರೆ. ಇಂದಲ್ಲ ಮುಂದೊಂದು ದಿನ ಕಾಂಗ್ರೆಸ್‌ ಆಡಳಿತಕ್ಕೆ ಬಂದೇ ಬರುತ್ತದೆ ಎಂದರು.

ಮುಡುಬಾ ರಾಘವೇಂದ್ರ, ಅಮರನಾಥ್‌ ಶೆಟ್ಟಿ ವಿಶ್ವನಾಥ್‌ ಶೆಟ್ಟಿ, ಗೀತಾ ರಮೇಶ್‌, ಸುಶೀಲ ಶೆಟ್ಟಿ, ಮಂಜುಳಾ ನಾಗೇಂದ್ರ, ಶಬನಂ ಇತರರು ಇದ್ದರು.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Shimoga; ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್

Shimoga; ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ

Shimoga; ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ

Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ

Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.