Kumta ಅಧಿಕಾರಿಗಳ ನಿರ್ಲಕ್ಷ್ಯ: ದುರಸ್ತಿಯಾಗದ ಶಾಲಾ ಕಟ್ಟಡ
ಆಯುಷ್ಮಾನ್ ಆರೋಗ್ಯ ಮಂದಿರದ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ
Team Udayavani, Jun 8, 2024, 9:09 PM IST
ಕುಮಟಾ: ಅತೀ ಎತ್ತರದಲ್ಲಿರುವ ಕುಗ್ರಾಮ ತಾಲೂಕಿನ ಸೊಪ್ಪಿನಹೊಸಳ್ಳಿ ಗ್ರಾಪಂ ವ್ಯಾಪ್ತಿಯ ಮೇದಿನಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ ಕಟ್ಟಡ ಕಳೆದ ಮಳೆಯಲ್ಲಿ ಕುಸಿದಿದ್ದು, ದುರಸ್ತಿಯಾಗದ ಕಾರಣ ಮಕ್ಕಳಿಗೆ ಬೇರೆಡೆ ಪಾಠ ಮಾಡಬೇಕಾದ ಸ್ಥಿತಿ ಬಂದೊದಗಿದೆ.
ಮೇದಿನಿ ಗ್ರಾಮಕ್ಕೆ ಸರಿಯಾದ ರಸ್ತೆಯೂ ಇಲ್ಲ. ಗುಡ್ಡದ ಮೇಲಿರುವ ಶಾಲೆಗೆ ಸುಸಜ್ಜಿತ ಕಟ್ಟಡವೂ ಇಲ್ಲದಂತಾಗಿದೆ. 60 ವರ್ಷಗಳಷ್ಟು ಹಳೆಯ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕಳೆದ ಮಳೆಗಾಲದಲ್ಲಿ ಕುಸಿದಿದೆ. 2020ರಲ್ಲಿ ಜಿಲ್ಲಾಧಿಕಾರಿ ಇಲ್ಲಿ ಬಂದು ವಾಸ್ತವ್ಯ ಮಾಡಿದ್ದರು. ಆಗ ಹಳೆಯ ಕಟ್ಟಡದ ಗೋಡೆಗೆ ಬಣ್ಣ, ನೆಲಕ್ಕೆ ಟೈಲ್ಸ್ ಹಾಕಲಾಗಿತ್ತು. ಈಗ ಕಟ್ಟಡ ಅಪಾಯಕಾರಿಯಾಗಿದ್ದರೂ ಅದೇ ಕಟ್ಟಡದ ಒಂದು ಕೊಠಡಿಯನ್ನು ಸದ್ಯ ಬಿಸಿಯೂಟದ ಕೋಣೆಯಾಗಿ ಬಳಸಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಯುಷ್ಮಾನ್ ಆರೋಗ್ಯ ಮಂದಿರದ 8 ಅಡಿ ಅಳತೆಯ ಸಮುದಾಯ ಆರೋಗ್ಯಾಧಿಕಾರಿ ಕೊಠಡಿಯಲ್ಲಿ ತರಗತಿ ನಡೆಸಲಾಗುತ್ತಿದೆ.
ಶಾಲೆಗೆ 60 ವರ್ಷವಾದ ಹಿನ್ನೆಲೆಯಲ್ಲಿ ಶಾಲೆ ಎದುರು ಸಾರ್ವಜನಿಕರ ಶ್ರಮದಾನ, ದಾನಿಗಳ ನೆರವಿನಿಂದ ಒಂದು ಪುಟ್ಟ ಕಟ್ಟಡ ನಿರ್ಮಿಸುತ್ತಿದ್ದೇವೆ. ಅದಕ್ಕೆ ಕೆಲ ದಾನಿಗಳು ಸುಮಾರು 1.50 ಲಕ್ಷ ನೀಡಿದರೆ, ಚಿಕ್ಕಬಳ್ಳಾಪುರ ಶಾಸಕ ನಂಜೇಗೌಡ 25 ಸಾವಿರ ನೀಡಿದ್ದಾರೆ. ಈಗ ಶಾಲೆಗೆ 14 ವಿದ್ಯಾರ್ಥಿಗಳು ಬರುತ್ತಿದ್ದಾರೆ. ಹೊಸ ಕಟ್ಟಡ, ಒಬ್ಬ ಅತಿಥಿ ಶಿಕ್ಷಕರ ಅಗತ್ಯವಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಶಿಕ್ಷಕ ರಾಜು ನಾಯ್ಕ ತಿಳಿಸಿದ್ದಾರೆ.
ಸ್ಥಳೀಯರಾದ ಬಾಲಚಂದ್ರ ಗೌಡ ಮಾತನಾಡಿ, ಶಿಕ್ಷಕ ರಾಜು ನಾಯ್ಕ ಅವರು ವಿದ್ಯಾರ್ಥಿಗಳ ಮನೆಗಳಿಗೆ ಹೋಗಿ ಅವರನ್ನು ಶಾಲೆಗೆ ಕರೆ ತಂದಿದ್ದಾರೆ. ಶಾಲೆಗೆ ಬರುವಾಗ ಸ್ವಂತ ಖರ್ಚಿನಿಂದ ವಿದ್ಯಾರ್ಥಿಗಳಿಗೆ ಹಣ್ಣು, ತಿನಿಸು ತಂದು ಕೊಡುತ್ತಾರೆ. ಇದರಿಂದ ಬೇರೆ ಕಡೆ ಇದ್ದ ಮಕ್ಕಳನ್ನು ಇಲ್ಲಿಗೆ ಕರೆತಂದು ಶಾಲೆಗೆ ಸೇರಿಸಿದ್ದೇವೆ ಎಂದರು.
ಶಾಲೆ ಕಟ್ಟಡ ದುರಸ್ತಿ ಕುರಿತು ಮಾಹಿತಿ ನೀಡಲಾಗಿದ್ದು, ಅನುದಾನ ಬಿಡುಗಡೆಯಾಗಿಲ್ಲ. ಅನುದಾನ ಲಭಿಸಿದ ಬಳಿಕ ಆದ್ಯತೆ ಮೇಲೆ ಕಟ್ಟಡ ದುರಸ್ತಿ ಮಾಡಲಾಗುತ್ತದೆ.
-ಆರ್.ಎಲ್. ಭಟ್ಟ, ಬಿಇಒ, ಕುಮಟಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಕಾಳಿ ನದಿಗೆ ಜಿಗಿದ ಮಹಿಳೆಯ ಮೃತದೇಹ ಪತ್ತೆ
Joida: ಬಸ್ ನಿಲ್ದಾಣದಲ್ಲಿ ಚಾಲಕ, ನಿರ್ವಾಹಕನಿಂದ ಪ್ರಯಾಣಿಕನಿಗೆ ಹಲ್ಲೆ
Dandeli: ಗಣೇಶನಗರದಲ್ಲಿ ವಿವಾಹಿತ ಮಹಿಳೆ ನಾಪತ್ತೆ: ದೂರು ದಾಖಲು
Sirsi: ಪಾಶ್ಚಾತ್ಯ ಅಡಿಕೆ ಆಮದು ನಿರ್ಬಂಧಕ್ಕೆ ಸಂಸದರು ಧ್ವನಿ ಎತ್ತಲಿ: ಶಾಸಕ ಭೀಮಣ್ಣ
Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.