![1-qwewq-wq-ew](https://www.udayavani.com/wp-content/uploads/2024/06/1-qwewq-wq-ew-415x219.jpg)
ಪಿಎಂ ಸೂರ್ಯ ಘರ್ ಯೋಜನೆ ಪ್ರಚಾರಕ್ಕೆ ರಾಜ್ಯದಲ್ಲಿ ಚಾಲನೆ
Team Udayavani, Jun 8, 2024, 9:26 PM IST
![ಪಿಎಂ ಸೂರ್ಯ ಘರ್ ಯೋಜನೆ ಪ್ರಚಾರಕ್ಕೆ ರಾಜ್ಯದಲ್ಲಿ ಚಾಲನೆ](https://www.udayavani.com/wp-content/uploads/2024/06/29-620x372.jpg)
ಬೆಂಗಳೂರು: ದೇಶದ ಒಂದು ಕೋಟಿ ಮನೆಗಳ ಛಾವಣಿಗೆ ಸೋಲಾರ್ ಫಲಕ ಅಳವಡಿಸಿ ಉಚಿತ ವಿದ್ಯುತ್ ಒದಗಿಸುವ ಪಿಎಂ ಸೂರ್ಯ ಘರ್ ಯೋಜನೆಯನ್ನು ಕೇಂದ್ರ ಸರಕಾರ ಜಾರಿಗೆ ತಂದಿದ್ದು, ರಾಜ್ಯದಲ್ಲಿ ಈ ಕುರಿತ ಪ್ರಚಾರಕ್ಕೆ ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅಧಿಕೃತ ಚಾಲನೆ ನೀಡಿದರು.
ಸೂರ್ಯ ಘರ್ ಯೋಜನೆಯ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ “ಸೂರ್ಯ ರಥ ಯಾತ್ರೆ’ಗೆ ಹಸುರು ನಿಶಾನೆ ತೋರಿದ ಬಳಿಕ ಮಾತನಾಡಿದ ಅವರು, ಯೋಜನೆ ಅನುಷ್ಠಾನಕ್ಕೆ ಆಸಕ್ತಿ ತೋರಿ ರಾಜ್ಯದಲ್ಲಿ ಈವರೆಗೆ 10 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂದರು.
ಕೇಂದ್ರ ಸರಕಾರದ pmsuryaghar.gov.in ವೆಬ್ಸೈಟ್ನಲ್ಲಿ ರೂಫ್ ಟಾಪ್ ಸೋಲಾರ್ ವ್ಯವಸ್ಥೆಗೆ ಗೃಹ ಬಳಕೆದಾರರು ಅರ್ಜಿ ಸಲ್ಲಿಸಬಹುದು ಎಂದರು.
ಸಂಪರ್ಕದ ಲಾಭಗಳು:
ಮನೆಯ ರೂಫ್ ಟಾಪ್ ಸೋಲಾರ್ ವ್ಯವಸ್ಥೆಯಿಂದ 25 ವರ್ಷ ವಿದ್ಯುತ್ ಬಿಲ್ ಪಾವತಿಸಬೇಕಿಲ್ಲ. ಮನೆ ಛಾವಣಿಯಲ್ಲಿ ಅಳವಡಿಕೆಯಿಂದ ಸ್ಥಳ ಬಳಕೆ ನಿಯಂತ್ರಣ, ನಿರ್ವಹಣೆ ಸುಲಭ. 1 ಕಿಲೋ ವ್ಯಾಟ್ ಸಾಮರ್ಥ್ಯದ ವ್ಯವಸ್ಥೆಗೆ 30 ಸಾವಿರ ರೂ. 2 ಕಿ. ವ್ಯಾ.ಗೆ 60 ಸಾವಿರ ರೂ. ಮತ್ತು 3 ಕಿ. ವ್ಯಾ.ಗೆ 78 ಸಾವಿರ ಸಬ್ಸಿಡಿ ದೊರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
![1-qwewq-wq-ew](https://www.udayavani.com/wp-content/uploads/2024/06/1-qwewq-wq-ew-415x219.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-asdsad](https://www.udayavani.com/wp-content/uploads/2024/06/1-asdsad-6-150x92.jpg)
Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ
![prahlad-joshi](https://www.udayavani.com/wp-content/uploads/2024/06/prahlad-joshi-2-150x86.jpg)
Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ
![MLA-Shivaganga](https://www.udayavani.com/wp-content/uploads/2024/06/MLA-Shivaganga-150x90.jpg)
D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ
![Bommai BJP](https://www.udayavani.com/wp-content/uploads/2024/06/Bommai-BJP-1-150x105.jpg)
Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ
![Hamsa Moily](https://www.udayavani.com/wp-content/uploads/2024/06/hamsa-150x83.jpg)
Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.