ವಾಲ್ಮೀಕಿ ನಿಗಮದ ಅಕ್ರಮದಲ್ಲಿ ಪಾತ್ರವಿಲ್ಲ: ಶಾಸಕ ದದ್ದಲ್ ಸ್ಪಷ್ಟನೆ
Team Udayavani, Jun 8, 2024, 10:44 PM IST
ರಾಯಚೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮದಲ್ಲಿ ನನ್ನ ಪಾತ್ರವಿರುವ ದಾಖಲೆಗಳಿದ್ದರೆ ತನಿಖಾ ಸಂಸ್ಥೆಗೆ ಒದಗಿಸುವಂತೆ ಶಾಸಕ ಬಸನಗೌಡ ದದ್ದಲ್ ತಾಕೀತು ಮಾಡಿದ್ದಾರೆ.
ದದ್ದಲ್ ಅವರೇ ನಿಗಮದ ಅಧ್ಯಕ್ಷರಾಗಿರುವುದರಿಂದ ಅವರ ಅನುಮತಿ ಇಲ್ಲದೆ ಇಷ್ಟೊಂದು ಹಣ ಹೇಗೆ ವರ್ಗಾವಣೆಯಾಗಲು ಸಾಧ್ಯ ಎಂಬ ವಿಪಕ್ಷ ಆರೋಪಕ್ಕೆ ಪ್ರತಿಕ್ರಿಯಿಸಿರುವ ದದ್ದಲ್, ನಾನು ಅಧ್ಯಕ್ಷನಾದ ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾಯಿತು. ಹೀಗಾಗಿ ಈವರೆಗೆ ಯಾವುದೇ ಹಣದ ವಹಿವಾಟು ನಡೆದಿಲ್ಲ. ಈ ಅಕ್ರಮಕ್ಕೂ ನನಗೂ ಸಂಬಂಧವಿಲ್ಲ. ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ದುರುದ್ದೇಶದಿಂದ ನನ್ನ ಹೆಸರನ್ನು ತಳಕು ಹಾಕುವ ಮೂಲಕ ಷಡ್ಯಂತ್ರ ರೂಪಿಸುತ್ತಿದ್ದಾರೆ. ಪರಿಶಿಷ್ಟ ಪಂಗಡ ಮೀಸಲಾತಿಯಡಿ ಗೆಲುವು ಸಾಧಿ ಸಿರುವ ನಾನು ಯಾವುದೇ ಕಾರಣಕ್ಕೂ ಎಸ್ಟಿ ಸಮುದಾಯಕ್ಕೆ ಎರಡು ಬಗೆಯಲಾರೆ. ವಾಲ್ಮೀಕಿ ಸಮಾಜ ನನ್ನ ಮೇಲಿಟ್ಟಿರುವ ವಿಶ್ವಾಸಕ್ಕೆ ಎಂದೂ ದ್ರೋಹ ಬಗೆಯುವ ಚಿಂತನೆ ಮಾಡಿಲ್ಲ ಎಂದಿದ್ದಾರೆ.
ಯೂನಿಯನ್ ಬ್ಯಾಂಕ್ ನೀಡಿದ ದೂರಿನ ಮೇರೆಗೆ ಸಿಬಿಐ ಈಗಾಗಲೇ ಅಕ್ರಮ ಹಣ ವರ್ಗಾವಣೆ ತನಿಖೆ ಆರಂಭಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಐವರನ್ನು ಬಂ ಧಿಸಲಾಗಿದೆ. ನಿಗಮದ ಹಣ ಯಾರೇ ಕಬಳಿಸಲು ಯತ್ನಿಸಿದರೂ ತನಿಖೆಯಲ್ಲಿ ಸತ್ಯ ಬಯಲಾಗಲಿದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರಗಲಿದೆ. ಇಲ್ಲಿ ಯಾರನ್ನೂ ರಕ್ಷಿಸುವ ಮಾತೇ ಇಲ್ಲ. ನನ್ನ ವಿರುದ್ಧ ಆರೋಪಿಸುವವರಲ್ಲಿ ದಾಖಲೆಗಳಿದ್ದರೆ ಅವುಗಳನ್ನು ತನಿಖಾ ತಂಡಕ್ಕೆ ಕೊಡಲಿ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.