ಸ್ವತಂತ್ರ ಭಾರತದಲ್ಲಿ ಜನಿಸಿದ ಮೊದಲ ಪ್ರಧಾನಿ

ನೆಹರೂ ಬಳಿಕ ಮೂರನೇ ಬಾರಿಗೆ ಸತತವಾಗಿ ಪ್ರಧಾನಿಯಾಗುತ್ತಿರುವ ಎರಡನೇ ವ್ಯಕ್ತಿ ನರೇಂದ್ರ ಮೋದಿ

Team Udayavani, Jun 9, 2024, 7:55 AM IST

ಸ್ವತಂತ್ರ ಭಾರತದಲ್ಲಿ ಜನಿಸಿದ ಮೊದಲ ಪ್ರಧಾನಿ

ಹೊಸದಿಲ್ಲಿ: ದೇಶದ ಮೊತ್ತಮೊದಲ ಪ್ರಧಾನಿ ಜವಾಹರ್‌ಲಾಲ್‌ ನೆಹರೂ ಸತತ 3ನೇ ಬಾರಿಗೆ ಪ್ರಧಾನಿಯಾಗಿದ್ದವರು. ಸದ್ಯ ಹಂಗಾಮಿ ಪ್ರಧಾನ ಮಂತ್ರಿಯಾಗಿರುವ ನರೇಂದ್ರ ಮೋದಿ, ರವಿವಾರ 3ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂಥ ಸಾಧನೆ ಮಾಡಲಿರುವ ದೇಶದ ಮೊದಲ ಮತ್ತು ಕಾಂಗ್ರೆಸ್‌ ಹೊರತಾಗಿರುವ ಪಕ್ಷದ ಮೊದಲ ನಾಯಕ ನರೇಂದ್ರ ಮೋದಿ.

ಹೀಗೆ ಹ್ಯಾಟ್ರಿಕ್‌ ಸಾಧನೆ ಮಾಡುವ ಅವರ ಸಾಧನೆಯ ಹಿಂದೆ ಹಲವು ವಿಶೇಷತೆಯೂ ಇವೆ. 1950ರಲ್ಲಿ ಜನಿಸಿದ ನರೇಂದ್ರ ಮೋದಿ ಸ್ವತಂತ್ರ ಭಾರತದಲ್ಲಿ ಜನಿಸಿದ ಮೊದಲ ಪ್ರಧಾನಿ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಮೋದಿ ಗುಜರಾತ್‌ನಲ್ಲಿ 12 ವರ್ಷ 227 ದಿನಗಳ ಕಾಲ ಅಧಿಕಾರ ನಡೆಸಿದ್ದರು.

ಬಾಲ್ಯದಿಂದಲೇ ದೇಶಸೇವೆಯ ಕಡೆಗೆ ಒಲವು ತೋರಿದ್ದ ಮೋದಿ, ವೈಯಕ್ತಿಕ ಜೀವನದ ಕಡೆ ನಿರ್ಲಕ್ಷ್ಯ ತೋರಿದ್ದರು. ಬಳಿಕ ರಾಷ್ಟ್ರೀಯ ಸ್ವಯಂ ಸೇವೇಕ ಸಂಘ(ಆರ್‌ಎಸ್‌ಎಸ್‌) ಸೇರಿ 80ರ ದಶಕದಲ್ಲಿ ಪೂರ್ಣ ಪ್ರಮಾಣದಲ್ಲಿ ಸಂಘದ ಪ್ರಚಾರಕರಾಗಿ ಸೇವೆ ಸಲ್ಲಿಸಿ ದ್ದರು. ದೇಶದ ತುರ್ತು ಪರಿಸ್ಥಿತಿ, ರಾಮಮಂದಿರದ ಹೋರಾಟ ಸೇರಿ ಸಂಘದ ಜತೆ ಹಲವಾರು ಹೋರಾಟಗಳಲ್ಲಿ ಭಾಗಿಯಾಗಿದ್ದರು. ಆರ್‌ಎಸ್‌ಎಸ್‌ ಹಿನ್ನೆಲೆಯಿಂದ ಬಿಜೆಪಿಯನ್ನು ಸೇರಿದ ಮೋದಿ 2001ರಲ್ಲಿ ಗುಜರಾತ್‌ ಮುಖ್ಯ ಮಂತ್ರಿಯಾಗಿ ಆಯ್ಕೆಯಾದರು. ಆ ಸಂದರ್ಭದಲ್ಲಿ ಅವರು ಗುಜರಾತ್‌ ವಿಧಾನಸಭೆಯಲ್ಲಿ ಶಾಸಕರಾಗಿರಲಿಲ್ಲ ಎಂಬುದು ಮತ್ತೂಂದು ವಿಶೇಷ. ಸತತ 12 ವರ್ಷ 277 ದಿನ ಗುಜರಾತ್‌ನ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ 2014ರಲ್ಲಿ ದೇಶದ ಪ್ರಧಾನಿಯಾಗಿ ಮೊದಲ ಬಾರಿಗೆ ಆಯ್ಕೆಯಾದರು. 5 ವರ್ಷಗಳ ಅಧಿಕಾರದ ಬಳಿಕ ಸಾಕಷ್ಟು ಯಶಸ್ಸು ಕಂಡಿದ್ದ ಪ್ರಧಾನಿ ಹೊಸ ಅಲೆಯನ್ನೇ ಎಬ್ಬಿಸಿದ್ದರು. 2019ರಲ್ಲಿ ಬಿಜೆಪಿಯೊಂದೇ 303 ಸ್ಥಾನಗಳನ್ನು ಗಳಿಸುವುದರೊಂದಿಗೆ ಇಂದಿರಾ ಗಾಂಧಿ ಬಳಿಕ ದೊಡ್ಡ ಬಹುಮತದೊಂದಿಗೆ ಗೆಲುವು ಪಡೆದ ಕೀರ್ತಿಯೂ ಮೋದಿಯವರಿಗಿದೆ.

ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದೇ ಅಚ್ಚರಿ
ಆರ್‌ಎಸ್‌ಎಸ್‌ನ ಮೂಲದಿಂದ ಬಿಜೆಪಿ ಸೇರಿದ್ದ ನರೇಂದ್ರ ಮೋದಿ ಪಕ್ಷದಲ್ಲಿ ರಾಷ್ಟ್ರಮಟ್ಟದಲ್ಲಿ ಹಲವು ಕೆಲಸಗಳನ್ನು ನಿರ್ವಹಿದ್ದರೇ ಹೊರತು ರಾಜಕಾರಣಿಯಾಗಿ ಶಾಸಕೀಯ ಅಥವಾ ಸಂಸದೀಯ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿರಲಿಲ್ಲ. 2001ರಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಮೋದಿಯವರಿಗೆ ಕರೆ ಮಾಡಿ “ದಿಲ್ಲಿಯ ಸಹವಾಸ ನಿನಗೆ ಸಾಕು, ನೀನಿನ್ನು ಗುಜರಾತ್‌ಗೆ ತೆರಳು’ ಎಂದಿದ್ದರು. ಈ ರೀತಿಯಲ್ಲಿ ಅವರು ಗುಜರಾತ್‌ ಮುಖ್ಯಮಂತ್ರಿಯಾಗಬೇಕೆಂದು ವಾಜಪೇಯಿ ನಿರ್ಧರಿಸಿದ್ದರು. ಹಿರಿಯ ನಾಯಕನ ಆಣತಿಯಂತೆ ಗುಜರಾತ್‌ನಲ್ಲಿ ಮುಖ್ಯಮಂತ್ರಿಯಾದ ಮೋದಿ ಅಲ್ಲಿಯೂ ಯಶಸ್ವಿಯಾಗಿ ಆಡಳಿತ ನಡೆಸಿ ಸತತ 13 ವರ್ಷಗಳು ಸೇವೆ ಸಲ್ಲಿಸಿದರು.

ಟಾಪ್ ನ್ಯೂಸ್

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.