Rainy Days Memories: ಮಳೆಯಲ್ಲಿ ಸಂಭ್ರಮ ಮನದ ತುಂಬ ಚಂದ್ರಮ!


Team Udayavani, Jun 9, 2024, 11:59 AM IST

Rainy Days Memories: ಮಳೆಯಲ್ಲಿ ಸಂಭ್ರಮ ಮನದ ತುಂಬ ಚಂದ್ರಮ!

ಧೋ ಎಂದು ಸುರಿವ ಮಳೆ, ಚಿಟಪಟ ಮಳೆ, ಜಿಟಿಜಿಟಿಯಾಗಿ ಸುರಿಯುತ್ತಲೇ ಇರುವ ಮಳೆ…ಮಳೆಗಾಲ ಬಂತೆಂದರೆ ಮಳೆ ನಮ್ಮ ಹೃದಯವನ್ನೂ ತಂಪಾಗಿಸಿಬಿಡುತ್ತದೆ. ಮಳೆ ಬರುವ ಮುನ್ನ ಒಂದು ಮಳೆಗಾಗಿ ಎಷ್ಟೊಂದು ಹಪಹಪಿಸಿಬಿಡುತ್ತೇವೆ. ಒಂದು ಬಾರಿ ಸುರಿದ ಮೇಲೆ ಇಳೆಯಂತೆ ನಮ್ಮ ಮನಸ್ಸೂ ಹಗುರಾಗಿ ಬಿಡುತ್ತದೆ. ಸೃಷ್ಟಿಯ ಜೀವಕಳೆ ಮಳೆಯನ್ನವಲಂಬಿಸಿದೆ. ಮಳೆಗೆ ಕೊಡೆಯೊಳಗೆ ಸೇರಿಕೊಂಡಂತೆ, ಮಳೆಯ ಜೊತೆಗೆ ಸೇರಿಕೊಂಡ ನೆನಪುಗಳೂ ಅಷ್ಟೇ ಚೇತೋಹಾರಿ. ಅವು, ಮಳೆಯ ಸರಸರ ಸದ್ದಿನೊಂದಿಗೆ ಸರಕ್ಕನೆ ನಮ್ಮ ಕಣ್ಣ ಮುಂದೆ ಬಂದುಬಿಡುತ್ತವೆ.

ಅದರಲ್ಲೂ ಬಾಲ್ಯಕ್ಕೆ ಬಣ್ಣ ತುಂಬಿದ ಮಳೆಯ ನೆನಪುಗಳು. ಗಾಳಿಗೆ ಉಲ್ಟಾ ಹೊಡೆದ ಕೊಡೆ, ತೋಡಿನ ನೀರಿನಲ್ಲಿ ಹರಿ ಬಿಡುವ ಕಾಗದದ ದೋಣಿ, ತೋಡು ದಾಟುವಾಗ ಬೊಳ್ಳದಲ್ಲಿ ಹೋದ ಚಪ್ಪಲಿ, ಮಳೆಯಲ್ಲಿ ಬೇಕಂತಲೇ ಒದ್ದೆಯಾಗಿಕೊಂಡು ಹೋಗಿ ಮೇಷ್ಟ್ರಲ್ಲಿ ಶಾಲೆಗೆ ರಜೆ ಕೇಳಿದ್ದು, ಬರುವ ದಾರಿಯಲ್ಲಿ ಗದ್ದೆಯ ಕೆಸರಿನಲ್ಲೋ, ತೋಡಿನ ನೀರಿನಲ್ಲೋ ಆಟವಾಡುತ್ತಾ ಬಾಲ್ಯದ ದಿನಗಳನ್ನು ಎಷ್ಟು ಚಂದ ವಾಗಿ ಕಳೆದಿದ್ದೆವು… ಈಗ ಬೇಕೆಂದರೂ ಅಂತಹ ದಿನಗಳು ವಾಪಸ್‌ ಬರಲಾರದು. ಈಗ ಗದ್ದೆ ತೋಡು ದಾಟಿಕೊಂಡು ಶಾಲೆಗೆ ಹೋಗಬೇಕಾದ ಪ್ರಸಂಗಗಳೇ ವಿರಳ.

ಅದು ಬೆರಗಿನ ಬದುಕು…

ಹಳ್ಳಿಗಳಲ್ಲಿ ಮಳೆಗಾಲಕ್ಕಾಗಿ ನಡೆಸುವ ತಯಾರಿಯೂ ಒಂದು ರೀತಿಯಲ್ಲಿ ಸಂಭ್ರಮ ಎನ್ನಬಹುದು. ಒಲೆಯ ಬೆಂಕಿಗೆ ಕಟ್ಟಿಗೆಯಿಂದ ಹಿಡಿದು ಹಪ್ಪಳ, ಸಂಡಿಗೆ, ಅಕ್ಕಿ, ತರಕಾರಿ(ಮೊದಲೆಲ್ಲಾ ಹಳ್ಳಿಗಳಲ್ಲಿ ತಾವು ಬೆಳೆದ ಸೌತೆ, ಕುಂಬಳಕಾಯಿಗಳನ್ನೆಲ್ಲಾ ಬಾಳೆಗಿಡದ ನಾರಿನಲ್ಲಿ ಕಟ್ಟಿ ಛಾವಣಿಗೆ ನೇತು ಹಾಕಿಡುತ್ತಿದ್ದರು) ಎಲ್ಲವನ್ನೂ ಸಂಗ್ರಹಿಸಿಡುತ್ತಾರೆ.

ಹಾಗಂತ ಮಳೆ ಬಂದರೆ ಮನೆಯ ಹೊರಗೆ ಕಾಲಿಡುವುದಿಲ್ಲ ಎಂಬ ಅರ್ಥ ಅಲ್ಲ. ಮಳೆಗಾಲದಲ್ಲಿ ಹಳ್ಳಿಗಳಲ್ಲಿ ಜಡಿ ಮಳೆ ಎನ್ನದೆ ಗದ್ದೆ, ತೋಟಗಳಲ್ಲಿ ಒದ್ದೆಯಾಗುತ್ತಲೇ ದುಡಿಯುವ ರೈತರ ಬೆರಗು ತುಂಬಿದ ಬದುಕು, ಹಸಿರಿನ ನಡುವೆ ತುಂಬಿ ಹರಿಯುವ ಜಲರಾಶಿ, ಇಳೆಯ ಕಳೆ, ಬೆಳೆಯ ಸೊಗಸು ಯಾರನ್ನಾದರೂ ಆಕರ್ಷಿಸದೆ ಇರದು.

ಆಹಾ ಹಳ್ಳಿಯ ಬದುಕೇ…

ಯಾಕೆಂದರೆ ಇವೆಲ್ಲವುಗಳಲ್ಲಿ ತೋರಿಕೆಗಳಿಲ್ಲ. ಜನರ ಸಹಜ ಬದುಕಿನ ನಡುವೆ ಪ್ರಕೃತಿಯ ಸಹ ಜತೆಯೂ ಸೇರಿಕೊಂಡು ಆಹಾ ಹಳ್ಳಿಯ ಬದುಕೇ ತಂಪು ಅಂತನ್ನಿಸಿಬಿಡುತ್ತದೆ. ಮಳೆಗೆ ಇಳೆ ತಂಪಾಗಿಬಿಡುವ ಸೊಗಸು, ಒಲೆಯ ಮುಂದೆ ಕುಳಿತು ಒದ್ದೆಯಾದ ಮೈ ಮನಸ್ಸನ್ನು ಬೆಚ್ಚಗಾಗಿಸಿಕೊಳ್ಳುವ ಸುಖ, ಹಬೆಯಾಡುವ ಹಂಡೆ ನೀರಿನ ಸ್ನಾನ, ಪಾಚಿಗಟ್ಟಿದ ಅಂಗಳ, ಹೆಂಚಿನಿಂದ ಝರಿಯಾಗಿ ಇಳಿ ಬೀಳುವ ನೀರು…ಈ ಮಳೆಗಾಲದಲ್ಲಿ ಹಳ್ಳಿಗಳಲ್ಲಿ ಕಾಣಸಿಗುವ ನೋಟಗಳೇ ಸೊಗಸು. ಇದೇ ನೋಟವನ್ನು ನಮ್ಮ ನಗರಗಳಲ್ಲಿ ಕಾಣಸಿಗುವುದು ಅಸಾಧ್ಯ. ಒಂದು ಜೋರು ಮಳೆ ಬಂದರೆ ನಗರವೇ ಮುಳುಗುವಷ್ಟು ನೀರು ಹರಿದುಬರುತ್ತದೆ. ಇಲ್ಲಿ ಚರಂಡಿ ನೀರು ಹರಿಯುವುದನ್ನು ನೋಡಿ ಖುಷಿಪಡಬೇಕೇ ಹೊರತು ಮಳೆಯ ನಿಜ ಸುಖವನ್ನು ಅನುಭವಿಸಲಾಗದು.

ಮಳೆಗಾಲ ಎಂಬ ಬೆರಗು

ಆಕಾಶದಿಂದ ಧುಮ್ಮಿಕ್ಕುವ ನೀರು ಬರಿಯ ನೀರಾಗಿರದೆ ಕೆಲವೊಮ್ಮೆ ಯಾವುದೋ ಕಾಲದ ಆಪ್ತ ಸ್ನೇಹಿತ ಅಚಾನಕ್‌ ಕಣ್ಣ ಮುಂದೆ ಬಂದುನಿಂತಾಗ ಸಿಗುವಾಗಿನ ಭಾವವನ್ನು ನೀಡಿ ನಮ್ಮನ್ನು ಆವರಿಸುತ್ತದೆ. ನಮ್ಮೊಳಗೊಂದು ಅಳತೆಗೆ ಸಿಗದ ಪುಳಕವನ್ನೆಬ್ಬಿಸಲು ಮಳೆಗೆ ಸಾಧ್ಯ. ಎಳೆಎಳೆಯಾಗಿ ಇಳಿಬೀಳುವ ನೀರು, ಕೊಚ್ಚೆಗಳನ್ನೆಲ್ಲಾ ಕೊಚ್ಚಿಕೊಂಡು ಹೋಗುತ್ತದೆ. ಎಲ್ಲಿಯೋ ಬರಡಾದ ನೆಲದಲ್ಲಿ ಮತ್ತೆ ಚಿಗುರೊಡೆಯಬಲ್ಲ ಭರವಸೆಗೆ ಒರತೆಯಾಗುತ್ತದೆ. ನದಿಯಾಗಿ, ಝರಿಯಾಗಿ ಆಪ್ತವಾಗಿ ಬಿಡುತ್ತದೆ. ಈ ಮಳೆಗಾಲವೂ ಅಂತಹದೊಂದು ಬೆಚ್ಚನೆಯ ಭಾವಗಳ ಗೂಡಾಗಲಿ.

-ಅನುರಾಧಾ ತೆಳ್ಳಾರ್‌

ಟಾಪ್ ನ್ಯೂಸ್

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Kannada Sahitya Ranga: ಅಮೆರಿಕದಲ್ಲಿ ವಸಂತೋತ್ಸವ; ಕನ್ನಡ‌ ಸಾಹಿತ್ಯ ರಂಗದ ಸಾರ್ಥಕ ಸೇವೆ

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!

20

J. B. Shruti Sagar: ಏಕಾಗ್ರತೆಗೆ ಭಂಗ ತರುವ ಏನನ್ನೂ  ಬಳಸಿದರೂ ಸಾಧನೆಗೆ ತೊಡಕೇ

ಕಣ್ಣಿಗೆ ಬಟ್ಟೆ ಕಟ್ಟಿಕೊಂಡವಳ ಕಷ್ಟ, ಕೋಪ ಮತ್ತು ಕನವರಿಕೆ

ಕಣ್ಣಿಗೆ ಬಟ್ಟೆ ಕಟ್ಟಿಕೊಂಡವಳ ಕಷ್ಟ, ಕೋಪ ಮತ್ತು ಕನವರಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.