Odisha; ರಾಜಕೀಯ ತೊರೆಯುತ್ತೇನೆ ಎಂದ ಪಟ್ನಾಯಕ್ ಆಪ್ತ ವಿ.ಕೆ.ಪಾಂಡ್ಯನ್
ಸೋಲಿನ ಬಳಿಕ ವ್ಯಾಪಕ ಟೀಕೆ... ಯಾರಾಗಲಿದ್ದಾರೆ ಬಿಜೆಡಿ ಉತ್ತರಾಧಿಕಾರಿ?
Team Udayavani, Jun 9, 2024, 5:35 PM IST
ಭುವನೇಶ್ವರ: ಒಡಿಶಾದಲ್ಲಿ ಪಕ್ಷದ ಸೋಲಿನ ಬಳಿಕ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಆಪ್ತ, ನಿವೃತ್ತ ಐಎಎಸ್ ಅಧಿಕಾರಿ ಮತ್ತು ಬಿಜೆಡಿ ನಾಯಕ ವಿ.ಕೆ.ಪಾಂಡ್ಯನ್ ಅವರು ಸಕ್ರಿಯ ರಾಜಕೀಯವನ್ನು ತೊರೆಯುವ ನಿರ್ಧಾರವನ್ನು ಪ್ರಕಟಿಸಿದ್ದಾರೆ,
ನಾನು ‘ಹೊರಗಿನವನು’ ಎಂದು ಲೇಬಲ್ ಮಾಡಿದ ಬಿಜೆಪಿಯ ಆಕ್ರಮಣಕಾರಿ ಪ್ರಚಾರವನ್ನು ನಾನು ಊಹಿಸಿರಲಿಲ್ಲ ಎಂದು ಹೇಳಿದ್ದಾರೆ.
ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಬಿಜೆಡಿಯ ಆಘಾತಕಾರಿ ಸೋಲಿನ ನಂತರ ರಾಜಕೀಯದಿಂದ ನಿವೃತ್ತಿಯಾಗುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಪಾಂಡ್ಯನ್ ಅವರೇ ಉತ್ತರಾಧಿಕಾರಿಯಾಗಲಿದ್ದಾರೆ ಎಂಬ ವದಂತಿಗಳ ಬಗ್ಗೆ ನವೀನ್ ಪಟ್ನಾಯಕ್ ಅವರು ಮಾತನಾಡಿ ‘ಪಾಂಡ್ಯನ್ ಅವರು ನನ್ನ ಉತ್ತರಾಧಿಕಾರಿ ಅಲ್ಲ. ನನ್ನ ಉತ್ತರಾಧಿಕಾರಿಯನ್ನು ಜನರೇ ತೀರ್ಮಾನಿಸಲಿದ್ದಾರೆ’ ಎಂದು ಹೇಳಿದ್ದರು.
‘ಪಾಂಡ್ಯನ್ ವಿರುದ್ಧ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳ ಬಗ್ಗೆ ಆಕ್ಷೇಪ ಮಾಡಿದ ಪಟ್ನಾಯಕ್ ‘ಪಾಂಡ್ಯನ್ ಅವರು, ಪ್ರಾಮಾಣಿಕ ವ್ಯಕ್ತಿ ಮತ್ತು ನಿಯತ್ತು ಇರುವ ವ್ಯಕ್ತಿ. ಅಂಥವ ಬಗ್ಗೆ ಸಲ್ಲದ ಮಾತುಗಳು ಖಂಡನೀಯ’ ಎಂದು ಹೇಳಿದ್ದರು. ಪಾಂಡ್ಯನ್ ಹುದ್ದೆಯ ಆಕಾಂಕ್ಷಿಯಾಗಿ ಬಿಜೆಡಿಯನ್ನು ಸೇರಿಕೊಂಡಿಲ್ಲ. ಐಎಎಸ್ ಅಧಿಕಾರಿಯಾಗಿ 10 ವರ್ಷಗಳಿಂದ ಕೋವಿಡ್ ಅವಧಿಯಲ್ಲಿ, ಒಡಿಶಾಕ್ಕೆ ಅಪ್ಪಳಿಸಿದ್ದ 2 ಚಂಡಮಾರುತದ ಸಂದರ್ಭದಲ್ಲಿ ಅತ್ಯುತ್ತಮ ರೀತಿಯಲ್ಲಿ ಕೆಲಸ ಮಾಡಿದ್ದರು ಎಂದು ಭಾರೀ ಟೀಕೆಗಳ ಕುರಿತು ಪ್ರತಿಕ್ರಿಯೆ ನೀಡಿದ್ದರು.
ಬಿಜೆಪಿ ಒಡಿಶಾದಲ್ಲಿ ಪ್ರಾಬಲ್ಯ ತೊರೆದಿದ್ದು ಬಿಜೆಡಿಯ ಉತ್ತರಾಧಿಕಾರಿ ಯಾರಾಗಲಿದ್ದಾರೆ ಎನ್ನುವ ಪ್ರಶ್ನೆ ಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್ ಯಾದವ್ ನಾಯಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.