Demotion; ರಾಜ್ಯ ಖಾತೆ ಸಚಿವ ಸ್ಥಾನ ಬೇಡ ಎಂದ ಎನ್ ಸಿಪಿ ಅಜಿತ್ ಬಣ
ಒಂದು ಪಕ್ಷದಿಂದಾಗಿ ಮಾನದಂಡ ಬದಲಾಯಿಸಲಾಗುವುದಿಲ್ಲ ಎಂದ ಬಿಜೆಪಿ
Team Udayavani, Jun 9, 2024, 6:08 PM IST
ಮುಂಬಯಿ: ರಾಜ್ಯ ಖಾತೆ ಸಚಿವ ಸ್ಥಾನ ಬೇಡ ಎಂದು ಮಹಾರಾಷ್ಟ್ರದ ಎನ್ ಡಿಎ ಮಿತ್ರ ಪಕ್ಷ ಎನ್ ಸಿಪಿ(ಅಜಿತ್ ಪವಾರ್)ಬಣ ಹೇಳಿದೆ.
ಎನ್ಸಿಪಿ(ಅಜಿತ್ ಪವಾರ್ ಬಣ) ಹಿರಿಯ ನಾಯಕ, ರಾಜ್ಯ ಸಭಾ ಸದಸ್ಯ ಪ್ರಫುಲ್ ಪಟೇಲ್ ಮಾತನಾಡಿ ‘ನಮ್ಮ ಪಕ್ಷಕ್ಕೆ ಸ್ವತಂತ್ರ ಉಸ್ತುವಾರಿ ಹೊಂದಿರುವ ರಾಜ್ಯ ಖಾತೆ ನೀಡಲಾಗುತ್ತದೆ ಎಂದು ನಿನ್ನೆ ರಾತ್ರಿ ನಮಗೆ ತಿಳಿಸಲಾಯಿತು.ನಾನು ಈ ಹಿಂದೆ ಕೇಂದ್ರ ಸರಕಾರದಲ್ಲಿ ಕ್ಯಾಬಿನೆಟ್ ಸಚಿವನಾಗಿದ್ದೆ, ಆದ್ದರಿಂದ ಇದು ನನಗೆ ಹಿಂಬಡ್ತಿ ನೀಡಿದಂತಾಗುತ್ತದೆ ಎಂದು ನಾವು ಬಿಜೆಪಿ ನಾಯಕತ್ವಕ್ಕೆ ತಿಳಿಸಿದ್ದೇವೆ. ಈಗಾಗಲೇ ನಮಗೆ ಕೆಲವು ದಿನ ಕಾಯಲು ಹೇಳಿದ್ದಾರೆ, ಅವರು ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ’ ಎಂದು ಪ್ರಧಾನಿ ಮೋದಿ ಮತ್ತು ಸಚಿವರು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಮುನ್ನ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, “ಎನ್ಸಿಪಿ(ಅಜಿತ್ ಪವಾರ್ ಬಣ) ಪಕ್ಷಕ್ಕೆ ಸ್ವತಂತ್ರ ಉಸ್ತುವಾರಿ ರಾಜ್ಯ ಖಾತೆ ಒಂದು ಸ್ಥಾನವನ್ನು ನೀಡಲಾಗಿದೆ. ಆದರೆ ಅವರು ಕ್ಯಾಬಿನೆಟ್ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿ ಅವರ ಕಡೆಯಿಂದ ಪ್ರಫುಲ್ ಪಟೇಲ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಪಟೇಲ್ ಅವರು ಈಗಾಗಲೇ ಸಚಿವರಾಗಿದ್ದವರು, ಆದ್ದರಿಂದ, ಅವರು ರಾಜ್ಯ ಖಾತೆ ವಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ’ ಎಂದು ಹೇಳಿದರು.
‘ ಮೈತ್ರಿಕೂಟದೊಂದಿಗೆ ಸರಕಾರ ರಚನೆಯಾದಾಗ ಕೆಲವು ಮಾನದಂಡಗಳನ್ನು ಹೊಂದಿರಬೇಕು. ಆದರೆ ಒಂದು ಪಕ್ಷಕ್ಕಾಗಿ ಮಾನದಂಡಗಳನ್ನು ಬದಲಾಗಿಸುವುದಿಲ್ಲ. ಸಂಪುಟ ಯಾವಾಗ ವಿಸ್ತರಣೆ ಆಗುತ್ತದೋ ಆ ಸಮಯದಲ್ಲಿ ಅವರ ನೆನಪಾಗುತ್ತದೆ’ ಎಂದು ಹೇಳಿದರು.
ಮಹಾರಾಷ್ಟ್ರದ ರಾಯಗಢದ ಲೋಕಸಭಾ ಕ್ಷೇತ್ರದಿಂದ ಸುನಿಲ್ ತಟ್ಕರೆ ಅವರು ಎನ್ಸಿಪಿ(ಅಜಿತ್ ಪವಾರ್ ಬಣ)ದಿಂದ ಆಯ್ಕೆಯಾದ ಏಕೈಕ ಸಂಸದರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.