Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

36 ರ ಹರೆಯದ ಟಿಡಿಪಿ ಸಂಸದನಿಗೆ ಕ್ಯಾಬಿನೆಟ್ ದರ್ಜೆ

Team Udayavani, Jun 9, 2024, 9:17 PM IST

1-sadsadasd

ಹೊಸದಿಲ್ಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿ ದೇಶದ ಗಮನ ಸೆಳೆದಿದ್ದ ತೆಲುಗು ದೇಶಂ ಪಕ್ಷದ ಚಂದ್ರಶೇಖರ್ ಪೆಮ್ಮಸಾನಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಟಿಡಿಪಿ ನಾಯಕ ಚಂದ್ರಶೇಖರ್ ಪೆಮ್ಮಸಾನಿ ಅವರು ಆಂಧ್ರಪ್ರದೇಶದ ಗುಂಟೂರು ಕ್ಷೇತ್ರದಿಂದ ತಮ್ಮ ಸಮೀಪದ ಪ್ರತಿಸ್ಪರ್ಧಿ ವೈಎಸ್‌ಆರ್‌ಸಿಪಿಯ ಕಿಲಾರಿ ವೆಂಕಟ ರೋಸಯ್ಯ ಅವರನ್ನು 3.4 ಲಕ್ಷ ಮತಗಳಿಂದ ಸೋಲಿಸಿ ಸಂಸತ್ ಪ್ರವೇಶಿಸಿ ಸಚಿವನಾಗುವಲ್ಲಿ ಯಶಸ್ವಿಯಾಗಿದ್ದಾರೆ.

ಚಂದ್ರಬಾಬು ನಾಯ್ಡು ಅವರ ಆಪ್ತರಾಗಿರುವ ಪೆಮ್ಮಸಾನಿ ಅವರು 5,700 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಸಿದ್ದರು.

ಗುಂಟೂರಿನ ಬುರ್ರಿಪಾಲೆಮ್ ಗ್ರಾಮದಲ್ಲಿ ಜನಿಸಿದ ಚಂದ್ರಶೇಖರ್ ಪೆಮ್ಮಸಾನಿ ಅವರು ಒಸ್ಮಾನಿಯಾ ವಿವಿಯಲ್ಲಿ ಎಂಬಿಬಿಎಸ್ ಅನ್ನು ಪೂರ್ಣಗೊಳಿಸಿದರು. ಪೆನ್ಸಿಲ್ವೇನಿಯಾದ ಡ್ಯಾನ್‌ವಿಲ್ಲೆಯಲ್ಲಿರುವ ಗೀಸಿಂಗರ್ ವೈದ್ಯಕೀಯ ಕೇಂದ್ರದಲ್ಲಿ ರೆಸಿಡೆನ್ಸಿ, ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ-ಸಿನೈ ಆಸ್ಪತ್ರೆಯಲ್ಲಿ ಸುಮಾರು ಐದು ವರ್ಷಗಳ ವೈದ್ಯರಾಗಿ ಕೆಲಸ ಮಾಡಿದ್ದರು.

ಆನ್‌ಲೈನ್ ಕಲಿಕಾ ವೇದಿಕೆಯಾದ UWorld ನ ಸ್ಥಾಪಕ ಮತ್ತು CEO ಆಗಿರುವ 48 ವರ್ಷದ ರಾಜಕಾರಣಿ, ಟಿಡಿಪಿ ಎನ್‌ಆರ್‌ಐ ಸೆಲ್‌ನಲ್ಲಿ ಸಕ್ರಿಯ ನಾಯಕರಾಗಿದ್ದು, ಯುಎಸ್‌ನಲ್ಲಿದ್ದ ವೇಳೆಯೂ ಪಕ್ಷದ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.

ಚಂದ್ರಶೇಖರ್ ಪೆಮ್ಮಸಾನಿ ಅವರು 2020 ರಲ್ಲಿ ಯುಎಸ್‌ನಲ್ಲಿ ಯುವ ಉದ್ಯಮಿಯಾಗಿ ಅರ್ನ್ಸ್ಟ್ ಮತ್ತು ಯಂಗ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಅವರು ಪೆಮ್ಮಸಾನಿ ಫೌಂಡೇಶನ್ ಅನ್ನು ಸ್ಥಾಪಿಸಿದ್ದು, ಆರೋಗ್ಯ ಶಿಬಿರಗಳನ್ನು ನಡೆಸುವುದನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಗುಂಟೂರು ಮತ್ತು ನರಸರಾವ್ಪೇಟೆಯ ಹಳ್ಳಿಗಳಿಗೆ ಕುಡಿಯುವ ನೀರನ್ನು ಒದಗಿಸುತ್ತಿದ್ದಾರೆ.

ಕಿಂಜರಾಪುಗೆ ಕ್ಯಾಬಿನೆಟ್ ದರ್ಜೆ

36 ರ ಹರೆಯದ ಟಿಡಿಪಿ ಸಂಸದ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರಿಗೆಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡಲಾಗಿದೆ. ನಾಯ್ಡು ಶ್ರೀಕಾಕುಳಂ ಲೋಕಸಭಾ ಕ್ಷೇತ್ರದಿಂದ 2014ರಲ್ಲಿ 2019 ರಲ್ಲಿ ಮತ್ತು ಈಗ ಮೂರನೇ ಬಾರಿಗೆ ಜಯ ಸಾಧಿಸಿದ್ದಾರೆ.

ರಾಮ್ ಮೋಹನ್ ಅವರ ಅಜ್ಜ ಕಿಂಜರಾಪು ಯರ್ರಾನ್ ನಾಯ್ಡು ಅವರು ಎಚ್.ಡಿ.ದೇವೇಗೌಡ ಮತ್ತು ಐ.ಕೆ.ಗುಜ್ರಾಲ್ ಅವರ ಸಂಪುಟದಲ್ಲಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಆಂಧ್ರಪ್ರದೇಶದ ಶಾಸಕರಾಗಿದ್ದ ಅವರು ಹರಿಶ್ಚಂದ್ರಪುರದಿಂದ ನಾಲ್ಕು ಬಾರಿ ಗೆದ್ದಿದ್ದರು. ಇದಲ್ಲದೆ, ಅವರು ನಾಲ್ಕು ಬಾರಿ ಶ್ರೀಕಾಕುಳಂನಿಂದ ನಾಲ್ಕು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.