J&K ಉಗ್ರರ ಅಟ್ಟಹಾಸ; ಬಸ್ ಕಣಿವೆಗೆ ಉರುಳಿ 10 ಯಾತ್ರಿಗಳು ಮೃತ್ಯು
Team Udayavani, Jun 9, 2024, 9:30 PM IST
ರಿಯಾಸಿ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ದೇಗುಲದಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ನ ಮೇಲೆ ಶಂಕಿತ ಉಗ್ರರು ಗುಂಡಿನ ದಾಳಿ ನಡೆಸಿ ಅಟ್ಟಹಾಸಗೈದಿದ್ದಾರೆ. ಬಸ್ ಕಮರಿಗೆ ಉರುಳಿದ ಪರಿಣಾಮ ಹತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮತ್ತು ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ ರಿಯಾಸಿಯ ಶಿವ ಖೋರಿ ದೇವಸ್ಥಾನದಿಂದ ಕತ್ರಾಗೆ ಹಿಂದಿರುಗುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಗುಂಡಿನ ದಾಳಿ ನಡೆದುದರ ಪರಿಣಾಮ ಚಾಲಕ ನಿಯಂತ್ರಣ ಕಳೆದುಕೊಂಡು ಬಸ್ ಕಮರಿಗೆ ಬಿದ್ದಿದೆ ಎಂದು ರಿಯಾಸಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮೋಹಿತಾ ಶರ್ಮ ಹೇಳಿದ್ದಾರೆ. ಪ್ರಯಾಣಿಕರು ಸ್ಥಳೀಯರಲ್ಲ ಮತ್ತು ಅವರ ಗುರುತನ್ನು ಇನ್ನೂ ದೃಢೀಕರಿಸಲಾಗಿಲ್ಲ.ರಕ್ಷಣ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಹೇಳಿದ್ದಾರೆ.
ಮೂಲಗಳ ಪ್ರಕಾರ, ಭಯೋತ್ಪಾದಕರು ರಾಜೌರಿ, ಪೂಂಚ್ ಮತ್ತು ರಿಯಾಸಿಯಲ್ಲಿ ಅಡಗಿಕೊಂಡಿದ್ದಾರೆ ಎಂದು ಹೇಳಲಾಗಿದೆ. ದಾಳಿಯ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡಗಳು, ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಆರಂಭಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು
T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ
Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು
Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.