ಕಳ್ಳರು ಕದ್ದೊಯ್ದರು; ಇವರು ದಾನವಾಗಿ ಕೊಟ್ಟರು!
Team Udayavani, Jun 9, 2024, 10:58 PM IST
ಉಪ್ಪಿನಂಗಡಿ: ಪಿಲಿಗೂಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಬಿಸಿಯೂಟದ ಮಿಕ್ಸಿ, ಗ್ಯಾಸ್ ಸಿಲಿಂಡರ್ಗಳನ್ನು ಇತ್ತೀಚೆಗೆ ಕಳ್ಳರು ಕಳ್ಳತನ ಮಾಡಿದ್ದು, ಶಾಲೆಯಲ್ಲಿ ಬಿಸಿಯೂಟ ತಯಾರಿಗೆ ಸಮಸ್ಯೆಯಾಗಿತ್ತು. ಇದನ್ನು ತಿಳಿದ ಉಜಿರೆಯ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಹಾಗೂ ಉದ್ಯಮಿ ಮೋಹನ್ ಕುಮಾರ್ ಅವರು ಶಾಲೆಗೆ ಮಿಕ್ಸಿ ಹಾಗೂ ಗ್ಯಾಸ್ ಸಿಲಿಂಡರ್ ನೀಡಿ ಮಕ್ಕಳ ಬಿಸಿಯೂಟ ಅಬಾಧಿತವಾಗಿ ನಡೆಯುವಂತೆ ಸಹಕರಿಸಿದ್ದಾರೆ.
ಜೂ.5ರ ರಾತ್ರಿ ಕಳ್ಳತನ ನಡೆದಿದ್ದು, ಶಾಲೆಯ ಸಮಸ್ಯೆಯನ್ನು ಅರಿತ ಉದ್ಯಮಿ ಮೋಹನ್ ಕುಮಾರ್ ಅವರು ಶಾಲೆಗೆ ಮಿಕ್ಸಿ ಹಾಗೂ ಗ್ಯಾಸ್ ಸಿಲಿಂಡರ್ ನೀಡುವ ಮನಸ್ಸು ಮಾಡಿದರು. ಅದರಂತೆ ಶಾಲೆಗೆ ತೆರಳಿ ಎಸ್ಡಿಎಂಸಿ ಅಧ್ಯಕ್ಷರ, ಶಿಕ್ಷಕರ ಸಮ್ಮುಖದಲ್ಲಿ ಶಾಲೆಗೆ ಮಿಕ್ಸಿ ಹಾಗೂ ಗ್ಯಾಸ್ ಸಿಲಿಂಡರ್ ಹಸ್ತಾಂತರಿಸಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ಪ್ಲೇವಿಯ ಡಿ’ಸೋಜಾ, ಶಿಕ್ಷಕಿಯರಾದ ಚಂದ್ರಾ ಕೆ, ಶಿಲ್ಪಾ, ಉಷಾ, ಎಸ್.ಡಿ.ಎಂ.ಸಿ ಅಧ್ಯಕ್ಷ ಇಸ್ಮಾಯಿಲ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಭುವನೇಶ್, ಎಸ್.ಡಿ.ಎಂ.ಸಿ ಸದಸ್ಯರಾದ ಬಾಲಕೃಷ್ಣ, ವನಿತಾ ಹಾಗೂ ಪೋಷಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.