Ullal ತೊಕ್ಕೊಟ್ಟಿನಲ್ಲಿ ನೇಪಾಲ ಮೂಲದ ಬಾಲಕಿ ಆತ್ಮಹತ್ಯೆ
Team Udayavani, Jun 9, 2024, 11:02 PM IST
ಉಳ್ಳಾಲ: ತೊಕ್ಕೊಟ್ಟು ಚೆಂಬುಗುಡ್ಡೆಯ ಬಾಡಿಗೆ ಮನೆಯ ಲ್ಲಿದ್ದ ನೇಪಾಲ ಮೂಲದ ಬಾಲಕಿ ಶನಿವಾರ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಬೀನಾ ಬಿ.ಕೆ. (16) ಮೃತಪಟ್ಟವರು.
ತೊಕ್ಕೊಟ್ಟು ಜಂಕ್ಷನ್ನಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಲ ಮೂಲದ ರಾಮ್ ಶರಣ್ ಅವರು ಪತ್ನಿ ಮತ್ತು ನಾಲ್ವರು ಮಕ್ಕಳೊಂದಿಗೆ ತೊಕ್ಕೊಟ್ಟು, ಚೆಂಬು ಗುಡ್ಡೆಯ ರೀಟಾ ಡಿ’ಸೋಜಾ ಅವರ ಮನೆಯಲ್ಲಿ ಬಾಡಿಗೆಗೆ ನೆಲೆಸಿದ್ದರು.
ರಾಮ್ ಶರಣ್ ಅವರ ಎರಡನೇ ಮಗಳಾದ ರಬೀನ ನೇಪಾಲದಲ್ಲಿ ಎಂಟನೇ ತರಗತಿ ಓದುತ್ತಿದ್ದು, ಆಕೆ ಯನ್ನು ಮಂಗಳೂರಿನಲ್ಲೇ ಓದಿಸುವ ಸಲುವಾಗಿ ತಿಂಗಳ ಹಿಂದೆ ಪೋಷಕರು ತೊಕ್ಕೊಟ್ಟಿಗೆ ಕರೆತಂದಿದ್ದರು.ಆದರೆ ರಬೀನ ತಾನು ನೇಪಾಲದಲ್ಲೇ ಓದು ಮುಂದುವರಿಸುವುದಾಗಿ ಹೆತ್ತವರೊಂದಿಗೆ ಹಠ ಹಿಡಿದಿದ್ದಳು ಎನ್ನಲಾಗಿದೆ.
ತಾಯಿ ಮತ್ತು ಸಹೋದರಿ ಮನೆಯಿಂದ ಹೊರಗೆ ಹೋಗಿದ್ದ ಸಂದರ್ಭದಲ್ಲಿ ರಬೀನ ಮನೆಯ ಶೌಚಾ ಲಯದ ಕಬ್ಬಿಣದ ಸಲಾಕೆಗೆ ಚೂಡಿ ದಾರದ ಶಾಲಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ ಎನ್ನಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್
Fraud: ದೋಷ ಪರಿಹರಿಸುವುದಾಗಿ ನಂಬಿಸಿ ಬುಡುಬುಡಿಕೆ ವೇಷ ಧರಿಸಿ ವಂಚನೆ
Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!
ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ
Box office: ರಿಲೀಸ್ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.