Rain ಬೈಂದೂರು, ಕುಂದಾಪುರ: ಮರ ಬಿದ್ದು ಮನೆ ಹಾನಿ
Team Udayavani, Jun 9, 2024, 11:37 PM IST
ಕುಂದಾಪುರ: ಬೈಂದೂರು ಹಾಗೂ ಕುಂದಾಪುರ ತಾಲೂಕಿನಾದ್ಯಂತ ರವಿವಾರವೂ ಉತ್ತಮ ಮಳೆಯಾಗಿದೆ. ಬೆಳಗ್ಗೆ ಅಬ್ಬರದ ಮಳೆಯಾಗಿತ್ತು. ಬಳಿಕ ಮಧ್ಯಾಹ್ನದವರೆಗೆ ತುಸು ಬಿಡುವು ನೀಡಿದರೂ ಮಧ್ಯಾಹ್ನದ ಬಳಿಕ ಮತ್ತೆ ಬಿರುಸು ಪಡೆದುಕೊಂಡಿತು.
ಕುಂದಾಪುರ ತಾಲೂಕಿನ ಕನ್ಯಾನ ಗ್ರಾಮದ ಶಿವರಾಮ ಅವರ ಮನೆಗೆ ಮೇಲೆ ಮರ ಬಿದ್ದು 10 ಸಾವಿರ ರೂ. ನಷ್ಟ, ತೆಕ್ಕಟ್ಟೆ ಗ್ರಾಮದ ಲಕ್ಷ್ಮೀ ಅವರ ಮನೆಗೆ ತೆಂಗಿನ ಮರ ಬಿದ್ದು 10 ಸಾವಿರ ರೂ. ನಷ್ಟ, ಗಂಗೊಳ್ಳಿ ಗ್ರಾಮದ ಸಾಂತಯ್ಯನ ಕೇರಿಯ ಸಕ್ಲಾತಿ ಕೇಶವ ಶೇರುಗಾರ ಅವರ ಮನೆಗೆ ಮರ ಬಿದ್ದು 50 ಸಾವಿರ ರೂ. ನಷ್ಟ ಸಂಭವಿಸಿದೆ.
ಕಡಲಬ್ಬರ ಜೋರು
3-4 ದಿನಗಳಿಂದ ಭಾರೀ ಮಳೆಯಾಗು ತ್ತಿದ್ದು ನದಿಗಳ ನೀರಿನ ಮಟ್ಟವೂ ಹೆಚ್ಚುತ್ತಿದೆ. ವಾರಾಹಿ, ಚಕ್ರ, ಕುಬಾj, ಸೌಪರ್ಣಿಕಾ, ಪಂಚಗಂಗಾವಳಿ, ಸುಮನಾವತಿ ಸಹಿತ ಕುಂದಾಪುರ, ಬೈಂದೂರು ಭಾಗದ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಕೋಡಿ, ಗಂಗೊಳ್ಳಿ, ಮರವಂತೆ, ನಾವುಂದ, ಅಳ್ವೆಗದ್ದೆ ಸಹಿತ ಕರಾವಳಿ ತೀರದುದ್ದಕ್ಕೂ ಕಡಲ ಅಲೆಗಳ ಅಬ್ಬರ ಜೋರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!
ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ
Box office: ರಿಲೀಸ್ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’
ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್
World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.