3ನೇ ಬಾರಿ ಪ್ರಧಾನಿಯಾಗಿ “ನಮೋ’ ಪ್ರಮಾಣ: ಕರಾವಳಿಯಲ್ಲಿ ಸಂಭ್ರಮಾಚರಣೆ


Team Udayavani, Jun 9, 2024, 11:52 PM IST

3ನೇ ಬಾರಿ ಪ್ರಧಾನಿಯಾಗಿ “ನಮೋ’ ಪ್ರಮಾಣ: ಕರಾವಳಿಯಲ್ಲಿ ಸಂಭ್ರಮಾಚರಣೆ

ಮಂಗಳೂರು: ನರೇಂದ್ರ ಮೋದಿ ಅವರು ರವಿವಾರ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೋದಿ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆಮಾಡಿತ್ತು.

ಮೋದಿಯವರ ಪ್ರಮಾಣವಚನ ಸಂಭ್ರಮ ಹಾಗೂ ನೂತನ ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರ ಗೆಲುವಿನ ವಿಜಯೋತ್ಸವ ಕಾರ್ಯಕ್ರಮ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ರವಿವಾರ ಜಿಲ್ಲಾ ಕಾರ್ಯಾಲಯದಲ್ಲಿ ನಡೆಯಿತು. ಪ್ರಮಾಣ ವಚನ ಸಮಾರಂಭ ವೀಕ್ಷಣೆಗೆ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಬೃಹತ್‌ ಎಲ್‌ಇಡಿ ಪರದೆ ಅಳವಡಿಸಲಾಗಿತ್ತು. ತಾಲೂಕು ಕೇಂದ್ರಗಳಲ್ಲೂ ಹರ್ಷಾಚರಣೆ ನಡೆಯಿತು.

ಸಂಭ್ರಮ, ಹರ್ಷೋದ್ಘಾರ
ಮೋದಿ ಅವರು ಪ್ರಮಾಣ ವಚನ ಸ್ವೀಕಾರಕ್ಕೆ ಆಗಮಿಸಿದ ವೇಳೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು. ಪ್ರಮಾಣ ವಚನ ಸ್ವೀಕರಿಸುವ ವೇಳೆ ಎದ್ದು ನಿಂತು, ಚಪ್ಪಾಳೆ, ಶಿಳ್ಳೆ, ಪಟಾಕಿ, ಹರ್ಷೋದ್ಘಾರದೊಂದಿಗೆ ನಾಯಕರು, ಕಾರ್ಯಕರ್ತರು ಸಂಭ್ರಮಿಸಿದರು. ಜೈ ಜೈ ಮೋದಿ, ಜೈ ಬಿಜೆಪಿ ಘೋಷಣೆಗಳು ಮೊಳಗಿದವು.

ಬ್ಯಾನರ್‌, ಪೋಸ್ಟರ್‌,
ತಂಪು ಪಾನಿಯ ವಿತರಣೆ
ನರೇಂದ್ರ ಮೋದಿಯವರಿಗೆ ಶುಭಾಶಯ ಕೋರಿ ನಗರದ ಅಲ್ಲಲ್ಲಿ ಅಭಿಮಾನಿಗಳು ಪೋಸ್ಟರ್‌ ಅಳವಡಿಸಿದ್ದರು. ಮಣ್ಣಗುಡ್ಡದ ಸಂಘನಿಕೇತನದ ಬಳಿ ಮೋದಿ ಅಭಿಮಾನಿ ಶಂಕರ್‌ ಅವರು ಸಾರ್ವಜನಿಕರಿಗೆ ಉಚಿತ ಕಬ್ಬು ಜ್ಯೂಸ್‌ ವಿತರಿಸಿದರು.

ಜನಾಶೀರ್ವಾದದಿಂದ
ಪಟ್ಟಾಭಿಷೇಕ: ಕಾಮತ್‌
ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ನರೇಂದ್ರ ಮೋದಿ ಹ್ಯಾಟ್ರಿಕ್‌ ಸಾಧನೆಗೆ ಜನರ ಆಶೀರ್ವಾದ ಹಾಗೂ ಬೆಂಬಲವೇ ಕಾರಣ. ದ.ಕ. ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್‌ ಚೌಟ ಗೆಲುವಿಗೆ ಅನೇಕರು ಶ್ರಮಿಸಿದ್ದಾರೆ. ಮುಂದಿನ ದಿನಗಳು ದೇಶದಲ್ಲಿ ಮತ್ತಷ್ಟು ಅಭಿವೃದ್ಧಿಗೆ ಪೂರಕವಾಗಿರಲಿವೆ. ಜನರ ನಂಬಿಕೆಗೂ ಮೀರಿ ಮೋದಿ ನೇತೃತ್ವದ ಎನ್‌ಡಿಎ ಸರಕಾರ ದೇಶದ ಪ್ರಗತಿಗೆ ಕೊಡುಗೆ ನೀಡಲಿದೆ ಎಂದರು.

ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಕಿಶೋರ್‌ ಬೊಟ್ಯಾಡಿ, ಯತೀಶ್‌ ಆರ್ವರ್‌, ಮಂಡಲ ಅಧ್ಯಕ್ಷ ರಮೇಶ್‌ ಕಂಡೆಟ್ಟು, ಯುವ ಮೋರ್ಚ ಅಧ್ಯಕ್ಷ ನಂದನ್‌ ಮಲ್ಯ, ಮಹಿಳಾ ಮೋರ್ಚ ಅಧ್ಯಕ್ಷೆ ಮಂಜುಳಾ ರಾವ್‌, ಪ್ರಮುಖರಾದ ಕವಿತಾ ಸನಿಲ್‌, ಕಿಶೋರ್‌ ಕೊಟ್ಟಾರಿ, ಪೂರ್ಣಿಮಾ, ರಾಜಗೋಪಾಲ್‌ ರೈ, ವಿಕಾಸ್‌ ಪುತ್ತೂರು, ಬಾಲಕೃಷ್ಣ ಭಟ್‌, ಪೂಜಾ ಪೈ, ಜಗದೀಶ್‌ ಶೇಣವ, ಮಹೇಶ ಜೋಗಿ, ನಂದನ್‌ ಮಲ್ಯ, ಅಶ್ವಿ‌ತ್‌ ಕೊಟ್ಟಾರಿ ಸೇರಿದಂತೆ ಮನಪಾ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಉಡುಪಿ: ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುತ್ತಿ ದ್ದಂತೆಯೇ ಜಿಲ್ಲೆಯ ವಿವಿಧೆಡೆ ಸಂಭ್ರಮಾಚರಣೆ ನಡೆಯಿತು.ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ ನೇತೃತ್ವದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಸಹಯೋಗದೊಂದಿಗೆ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಹಣತೆಗಳನ್ನು ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು ಪ್ರಮಾಣ ವಚನ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲಾಯಿತು.

ತಾಲೂಕು ಕೇಂದ್ರಗಳಲ್ಲೂ ಹರ್ಷಾಚರಣೆ ನಡೆಯಿತು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್‌ ಶೆಟ್ಟಿ, ಶಾಸಕ ಯಶಪಾಲ್‌ ಎ. ಸುವರ್ಣ, ಬಿಜೆಪಿ ಮುಖಂಡರಾದ ಕುಯಿಲಾಡಿ ಸುರೇಶ್‌ ನಾಯಕ್‌, ಕಿರಣ್‌ ಕುಮಾರ್‌ ಬೈಲೂರು, ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ನಯನಾ ಗಣೇಶ್‌, ಶಿಲ್ಪಾ ಜಿ. ಸುವರ್ಣ, ಸಂಧ್ಯಾ ರಮೇಶ್‌, ವೀಣಾ ಎಸ್‌. ಶೆಟ್ಟಿ, ರಾಘವೇಂದ್ರ ಕುಂದರ್‌, ಶಿವಕುಮಾರ್‌ ಅಂಬಲಪಾಡಿ, ಗಿರೀಶ್‌ ಎಂ. ಅಂಚನ್‌, ಸುಮಿತ್ರಾ ಆರ್‌. ನಾಯಕ್‌, ಸುಜಾಲಾ ಸತೀಶ್‌, ನಳಿನಿ ಪ್ರದೀಪ್‌ ರಾವ್‌, ಭಾರತೀ ಚಂದ್ರಶೇಖರ್‌, ದಯಾಶಿನಿ, ಜಗದೀಶ್‌ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಆನಂದ ಸುವರ್ಣ, ಲಕ್ಷ್ಮೀಶ ಬಂಗೇರ, ಆಸೀಫ್ ಕಟಪಾಡಿ, ಅಂಡಾರು ದೇವಿ ಪ್ರಸಾದ್‌ ಶೆಟ್ಟಿ, ವೆಂಕಟರಮಣ ಕಿದಿಯೂರು, ನೀತಾ ಪ್ರಭು, ಸರೋಜಾ ಶೆಣೈ, ಪೂರ್ಣಿಮಾ ಶೆಟ್ಟಿ, ಪ್ರೀತಿ, ದೀಪಾ ಪೈ, ಸುಗುಣಾ ನಾಯ್ಕ…, ಸಂತೋಷ್‌ ಆಚಾರ್ಯ, ಸುರೇಶ್‌ ಶೆಟ್ಟಿ, ಸತೀಶ್‌ ಪೂಜಾರಿ ಕುಕ್ಕಿಕಟ್ಟೆ, ಹೇಮನಾಥ್‌ ಹೆಗ್ಡೆ, ದಿವಾಕರ ಶೆಟ್ಟಿ, ನಾಗರಾಜ್‌ ಕರ್ಕೇರ, ರಾಜೇಶ್‌ ಸುವರ್ಣ ಉಪಸ್ಥಿತರಿದ್ದರು.

ಸಿಹಿತಿಂಡಿ, ಚಹಾ ವಿತರಣೆ
ಮಣಿಪಾಲದ ಟೈಗರ್‌ ಸರ್ಕಲ್‌ನಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಸಾರ್ವಜನಿಕರಿಗೆ ಸಿಹಿತಿಂಡಿ, ಚಹಾ ವಿತರಣೆ ಮಾಡಲಾಯಿತು.

ಶಾಸಕ ಯಶ್‌ಪಾಲ್‌ ಎ.ಸುವರ್ಣ, ನಗರಸಭಾ ಸದಸ್ಯರಾದ ಸುಮಿತ್ರಾ ನಾಯಕ್‌, ವಿಜಯಲಕ್ಷ್ಮೀ, ಕಲ್ಪನಾ ಸುಧಾಮ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ, ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್‌ ಆಚಾರ್ಯ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ನಿತಿನ್‌ ಪೈ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿ‌ನಿ ಶೆಟ್ಟಿ, ಹಿಂದೂ ಯುವಸೇನೆ ಅಧ್ಯಕ್ಷ ಅಜಿತ್‌ ಕೊಡವೂರು ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Mangaluru: ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.