Ullal ವಿಜಯೋತ್ಸವ ಸಂದರ್ಭ ಚಕಮಕಿ: ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಇರಿತ
Team Udayavani, Jun 10, 2024, 7:10 AM IST
ಉಳ್ಳಾಲ: ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಬೋಳಿಯಾರು ಸಮೀಪ ರವಿವಾರ ರಾತ್ರಿ ನಡೆದಿದೆ.
ಗಾಯಾಳುಗಳನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನೋಳಿ ಧರ್ಮನಗರದ ಹರೀಶ್ ಹಾಗೂ ನಂದನ್ ಕುಮಾರ್ ಗಾಯ ಗೊಂಡವರು.
ಘಟನೆಯ ವಿವರ
ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಮತ್ತು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರ ವಿಜಯೋತ್ಸವದ ಅಂಗವಾಗಿ ಬೋಳಿಯಾರು ಬಿಜೆಪಿ ಗ್ರಾಮಸಮಿತಿ ವತಿಯಿಂದ ಚೇಳೂರು, ಬೋಳಿಯಾರು ಮಾರ್ಗವಾಗಿ ಧರ್ಮನಗರದ ವರೆಗೆ ವಿಜಯೋತ್ಸವ ಮೆರವಣಿಗೆ ಆಯೋಜಿಸಲಾಗಿತ್ತು.
ರ್ಯಾಲಿ ಮುಗಿಸಿ ಮನೆಗೆ ತೆರಳಿದ್ದ ಹರೀಶ ಮತ್ತು ನಂದನ್ ಅಂಗಡಿಯಿಂದ ಯಾವುದೋ ಸಾಮಗ್ರಿ ಖರೀದಿಸಿ ತರಲೆಂದು ಬೋಳಿಯಾರು ಕ್ರಾಸ್ನತ್ತ ಮರಳಿ ಬಂದಿದ್ದರು. ಮನೆಗೆ ಮರಳು ವಾಗ ಅವರು ಕೇಸರಿ ಶಾಲು ಧರಿಸಿದ್ದನ್ನು ನೋಡಿದ ತಂಡವೊಂದು ತಡೆದು ಬೆದರಿಸಿದ್ದಲ್ಲದೆ ಬೈಕಿನ ಮುಂದೆ ಹರೀಶ್ ಅವರ ಹೊಟ್ಟೆಗೆ ಮತ್ತು ನಂದನ್ ಅವರ ಬೆನ್ನಿಗೆ ಚೂರಿಯಿಂದ ಇರಿಯಿತು. ಬಳಿಕ ಕೃತ್ಯ ಎಸಗಿದ ತಂಡ ಪರಾರಿಯಾಗಿದೆ. ಘಟನೆಯಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನೆಲೆಸಿದೆ.
ಬೋಳಿಯಾರು ನಿವಾಸಿ ಪಿಕಪ್ ಚಾಲಕ ಕೃತ್ಯ ಎಸಗಿರುವುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆರೋಪಿಗಳಿಗೆ ಶೋಧ ಕಾರ್ಯ ಮುಂದುವರಿದಿದೆ.
ಕೊಣಾಜೆ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!
ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ
Box office: ರಿಲೀಸ್ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’
ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್
World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.