Heavy Rains ರಾಜ್ಯದ 13 ಜಿಲ್ಲೆಗಳಲ್ಲಿ ಭಾರೀ ಮಳೆ: ಇಬ್ಬರು ಸಾವು
Team Udayavani, Jun 10, 2024, 12:11 AM IST
ಹುಬ್ಬಳ್ಳಿ/ಬೆಂಗಳೂರು: ಉತ್ತರ ಕರ್ನಾಟಕದ 9 ಜಿಲ್ಲೆಗಳು ಸೇರಿ ರಾಜ್ಯದ 13 ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸಿದ್ದು, ಮಳೆ ಸಂಬಂಧಿ ಅನಾಹುತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 8 ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಡೋಣಿ ನದಿ ಅಪಾಯದ ಮಟ್ಟ ಮೀರಿವೆ. ಹಲವೆಡೆ ಮನೆ, ಮರಗಳು ಧರೆಗುರುಳಿವೆ. ಅಪಾರ ಪ್ರಮಾಣದ ಹಾನಿಯಾಗಿದೆ.
ಬೆಳಗಾವಿ ತಾಲೂಕಿನ ಬೆಳಕಗುಂದಿ-ಕರ್ಲೆ ರಸ್ತೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಮರ ಬಿದ್ದು ಸೋಮನಾಥ ಮುಚ್ಚಂಡಿಕರ (20) ಮೃತಪಟ್ಟಿದ್ದು, ಇನ್ನೋರ್ವ ಸವಾರ ಗಾಯಗೊಂಡಿದ್ದಾನೆ. ಮೂಡಲಗಿ ತಾಲೂಕಿನ ಅವರಾದಿ-ನಂದಗಾಂವ್ಗೆ ಸಂಪರ್ಕ ಕಲ್ಪಿಸುವ ಸೇತುವೆ ಬಳಿ ಘಟಪ್ರಭಾ ನದಿಯಲ್ಲಿ ಟ್ರ್ಯಾಕ್ಟರ್ ಬಿದ್ದು ಓರ್ವ ಕೊಚ್ಚಿ ಹೋಗಿದ್ದು, 9 ಜನರನ್ನು ರಕ್ಷಿಸಲಾಗಿದೆ. ಕೊಚ್ಚಿ ಹೋದ ವ್ಯಕ್ತಿಗಾಗಿ ಶೋಧ ನಡೆದಿದೆ.
ಸೇಡಂ ತಾಲೂಕಿನ ತೊಟ್ನಳ್ಳಿಯಲ್ಲಿ ಭಾರೀ ಮಳೆಗೆ ಗ್ರಾಮದ ಕೆಲವು ಮನೆಗಳಿಗೆ ನೀರು ನುಗ್ಗಿದೆ. ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ಬಳಿ ಮಹಿಷವಾಡಗಿ ಸೇತುವೆ ಮುಳುಗುವ ಭೀತಿ ಎದುರಾಗಿದೆ. ಬಾಳೆಹೊನ್ನೂರು, ಕುಮಟಾ, ಅಂಕೋಲಾ, ಶಿರಸಿ, ಕಾರವಾರದಲ್ಲಿ ನಿರಂತರ ಮಳೆಯಾಗುತ್ತಿದೆ. ವಿಜಯಪುರ ಜಿಲ್ಲೆ ತಾಳಿಕೋಟಿಯಲ್ಲಿ ಡೋಣಿ ನದಿ ಪ್ರವಾಹದಿಂದ ವಿಜಯಪುರ ರಸ್ತೆಯ ಕೆಳಮಟ್ಟದ ಸೇತುವೆ, ಮೂಕಿಹಾಳ ಮೂಲಕ ತಾಳಿಕೋಟೆ ಸಂಪರ್ಕಿಸುವ ಸೇತುವೆ ಸಂಪೂರ್ಣ ಜಲಾವೃತಗೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.