Crime: ತುಂಡರಿಸಿದ ಮೃತ ದೇಹ ಪತ್ತೆಗೆ ಶೋಧ
Team Udayavani, Jun 10, 2024, 11:59 AM IST
ಬೆಂಗಳೂರು: ಅಕ್ರಮ ಸಂಬಂಧ ಹಾಗೂ ಹಣಕಾಸಿನ ವಿಚಾರಕ್ಕೆ ಹತ್ಯೆಗೀಡಾದ ಚಿಟ್ ಫಂಡ್ ಕಂಪನಿ ಉದ್ಯೋಗಿ ಶ್ರೀನಾಥ್ ದೇಹದ ತುಂಡು ಗಳ ಪತ್ತೆ ಕಾರ್ಯ ಮುಂದುವರಿದಿದ್ದು, ಭಾನುವಾರ ಬೆಳತ್ತೂರು ರಾಜಕಾಲುವೆ ಯಲ್ಲಿ ರಾಮಮೂರ್ತಿನಗರ ಠಾಣೆ ಪೊಲೀಸರು ಹಾಗೂ ಮುಳುಗು ತಜ್ಞರು ಶೋಧ ನಡೆಸಿದರು.
ಹಣಕಾಸು ವಿಚಾರ ಮತ್ತು ಪತ್ನಿಯೊಂದಿಗಿನ ಅಕ್ರಮ ಸಂಬಂಧ ಕಾರಣಕ್ಕೆ ಶ್ರೀನಾಥ್ನನ್ನು ಮೇ 28ರಂದು ಕೊಲೆ ಮಾಡಿದ್ದ ಆರೋಪಿ ಮಾಧವರಾವ್, ಮೃತದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿದ್ದ. ಬಳಿಕ ಚೀಲಕ್ಕೆ ತುಂಬಿಸಿ ದ್ವಿಚಕ್ರದಲ್ಲಿ ಸಾಗಿಸಿಕೊಂಡು ಹೋಗಿ ಬೆಳತ್ತೂರು ರಾಜಕಾಲುವೆಗೆ ಎಸೆದಿದ್ದ. ಆರೋಪಿ ಮಾಧವರಾವ್ ನೀಡಿದ ಮಾಹಿತಿ ಆಧರಿಸಿ ಶ್ರೀನಾಥ್ರ ಮೃತ ದೇಹದ ಭಾಗಗಳಿಗಾಗಿ ರಾಜಕಾಲುವೆಯಲ್ಲಿ ಶನಿವಾರ 5 ಕಿ.ಮೀ.ವರೆಗೆ ಶೋಧ ಕಾರ್ಯ ನಡೆಸಲಾಗಿತ್ತು. ಭಾನುವಾರ ಸುಮಾರು 5 ಕಿ.ಮೀ. ಶೋಧ ನಡೆಸಲಾ ಯಿತು. ರಾಜಕಾಲುವೆಯೊಳಗೆ ಬೆಳೆದಿರುವ ಗಿಡಗಳ ಪೊದೆಗಳಲ್ಲೂ ಪರಿಶೀಲನೆ ಮಾಡಲಾಯಿತು. ಆದರೆ, ಎಲ್ಲಿಯೂ ಮೃತ ದೇಹದ ತುಂಡುಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದರು.
ಆರೋಪಿ ಮಾಧವರಾವ್, ಶ್ರೀನಾಥ್ರ ಮೃತ ದೇಹದ ತುಂಡುಗಳನ್ನು ತುಂಬಿಸಿದ್ದ ಚೀಲವನ್ನು ಕಟ್ಟಿರಲಿಲ್ಲ. ಜತೆಗೆ, ಆ ಸಂದರ್ಭದಲ್ಲಿ ರಾಜಕಾಲುವೆಯಲ್ಲಿ ಹೆಚ್ಚಿನ ಪ್ರಮಾಣದ ನೀರು ಇರಲಿಲ್ಲ. ಮಾಧವರಾವ್, ಮೃತ ದೇಹದ ತುಂಡುಗಳನ್ನು ಎಸೆದ ನಂತರದ ದಿನಗಳಲ್ಲಿ ವ್ಯಾಪಕ ಮಳೆಯಾಗಿ ರಾಜಕಾಲುವೆಯಲ್ಲಿ ನೀರಿನ ಹರಿವು ಹೆಚ್ಚಿದೆ. ಹೀಗಾಗಿ, ಮೃತ ದೇಹದ ತುಂಡುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಬೆಳತ್ತೂರು ರಾಜಕಾಲುವೆಯ ನೀರು ಪಿನಾಕಿನಿ ನದಿಗೆ ಸೇರುತ್ತದೆ. ಸೋಮವಾರವೂ ಶೋಧ ಕಾರ್ಯ ಮುಂದುವರಿಸುತ್ತೇವೆ. ಮಾಧವರಾವ್ನನ್ನು ಕೊಲೆ ಪ್ರಕರಣ ಸಂಬಂಧ ವಿಜಿನಾಪುರದ ಆತನ ಮನೆಗೆ ಕರೆದೊಯ್ದು ಸ್ಥಳ ಮಹಜರು ನಡೆಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Bengaluru: ಇಬ್ಬರು ಡ್ರಗ್ಸ್ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ
Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.