Belagavi; ಒಂದು ತಿಂಗಳ ಮಗುವನ್ನು ಒಂದೂವರೆ ಲಕ್ಷ ರೂ.ಗೆ ಮಾರಾಟ! ಐವರ ಬಂಧನ


Team Udayavani, Jun 10, 2024, 12:22 PM IST

Belagavi; ಒಂದು ತಿಂಗಳ ಮಗುವನ್ನು ಒಂದೂವರೆ ಲಕ್ಷ ರೂ.ಗೆ ಮಾರಾಟ! ಐವರ ಬಂಧನ

ಬೆಳಗಾವಿ: ಒಂದು ತಿಂಗಳ ಹೆಣ್ಣು ಮಗುವನ್ನು ಒಂದೂವರೆ ಲಕ್ಷ ರೂ. ಗೆ ಮಾರಾಟ ಮಾಡಲು ಯತ್ನಿಸಿದ ವೈದ್ಯ ಸೇರಿ ಐವರನ್ನು ಮಾಳಮಾರುತಿ ಠಾಣೆ ಪೊಲೀಸರು ರವಿವಾರ ಬಂಧಿಸಿದ್ದಾರೆ.

ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದ ಮಹಾದೇವಿ ಉರುಫ್ ಪ್ರಿಯಾಂಕಾ ಬಾಹುಬಲಿ ಜೈನ, ಸವದತ್ತಿ ತಾಲೂಕಿನ ಹಂಚಿನಾಳದ ಸದ್ಯ ಕಿತ್ತೂರಿನ ವೈದ್ಯ ಡಾ. ಅಬ್ದುಲ್ ಗಫಾರ್ ಹುಸೇನಸಾಬ ಲಾಡಖಾನ, ಬೈಲಹೊಂಗಲ ತಾಲೂಕಿನ ತುರಕರ ಶೀಗಿಹಳ್ಳಿ ಗ್ರಾಮದ ಚಂದನ ಗಿರಿಮಲ್ಲಪ್ಪ ಸುಬೇಧಾರ, ಸಂಪಗಾಂವ ಗ್ರಾಮದ ಪವಿತ್ರಾ ಸೋಮಪ್ಪ ಮಡಿವಾಳರ, ಧಾರವಾಡ ತಾಲೂಕಿನ ಹೊಸಟ್ಟಿ ಗ್ರಾಮದ ಪ್ರವೀಣ ಮಂಜುನಾಥ ಮಡಿವಾಳರ ಎಂಬಾತರನ್ನು ಬಂಧಿಸಲಾಗಿದೆ.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ಸತ್ತು ಕೇಂದ್ರದ ಸಂಯೋಜಕ ರಾಜಕುಮಾರ ಸಿಂಗಪ್ಪ ರಾಠೋಡ ನೀಡಿರುವ ದೂರಿನ ಮೇರೆಗೆ ಮಗು ಮಾರಾಟ ಮಾಡಲು ಯತ್ನಿಸಿದಾಗ ಆರೋಪಿಗಳನ್ನು ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಘಟನೆ ಹಿನ್ನೆಲೆ: ಪ್ರವೀಣ ಮಡಿವಾಳರ ಹಾಗೂ ಪವಿತ್ರಾ ಮಡಿವಾಳರ ಮಧ್ಯೆ ಲೈಂಗಿಕ ಸಂಬಂಧದಲ್ಲಿ ಒಂದು ತಿಂಗಳ ಹಿಂದೆ ಹೆಣ್ಣು ಮಗು ಹುಟ್ಟಿತ್ತು. ಇದರ ಗರ್ಭಪಾತ ಮಾಡಲು ಡಾ. ಅಬ್ದುಲಗಫಾರ ಲಾಡಖಾನ್ ಬಳಿ ಇವರು ಹೋಗಿದ್ದರು. ಯಾರಿಗೂ ಗೊತ್ತಾಗದಂತೆ ಗರ್ಭಪಾತ ಮಾಡುವಂತೆ ಕೇಳಿದ್ದರು. ಆದರೆ ವೈದ್ಯ ಲಾಡಖಾನ ಹೆರಿಗೆ ಮಾಡಿ ಮಗುವನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದರು. ಪ್ರವೀಣ ಹಾಗೂ ಪವಿತ್ರಾ ಮುಂದಿನ ದಿನಗಳಲ್ಲಿ ಮದುವೆ ಆಗುವುದಾಗಿ ತಿಳಿಸಿದ್ದಾರೆ.

30 ತಿಂಗಳ ಕಾಲ ಮಗುವನ್ನು ವೈದ್ಯ ಲಾಡಖಾನ್ ಆರೈಕೆ ಮಾಡಿ, ತನ್ನ ಆಸ್ಪತ್ರೆಯ ಸಿಬ್ಬಂದಿ ಚಂದನ ಸುಬೇಧಾರ ಕಡೆಯಿಂದ 60 ಸಾವಿರ ರೂ.ಗೆ ಪ್ರಿಯಂಕಾ ಜೈನರಗೆ ಮಾರಾಟ ಮಾಡಿದ್ದರು. ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡಿರುವ ಪ್ರಿಯಂಕಾಗೆ ಹಾಗೂ ವೈದ್ಯ ಲಾಡಖಾನಗೂ ಪರಿಚಯವಿತ್ತು. ಈ ಮಗುವನ್ನು ಪವಿತ್ರಾ 60 ಸಾವಿರ ರೂ.ಗೆ ಖರೀದಿಸಿ ಮತ್ತೊಬ್ಬರಿಗೆ 1.40 ಲಕ್ಷ ರೂ.ಗೆ ಮಾರಾಟ ಮಾಡಲು ಯತ್ನಿಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಪ್ರಿಯಂಕಾ ಹಾಗೂ ವೈದ್ಯ ಲಾಡಖಾನ ಸೇರಿದಂತೆ ಎಲ್ಲರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಗು ಮಾರಾಟದ ಬಗ್ಗೆ ಬಾಯಿ ಬಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಐಪಿಸಿ ಕಲಂ 500, 363, 370 0, 4.2. ಮತ್ತು 80, 81 ಮಕ್ಕಳ ಸಂರಕ್ಷಣಾ ಕಾಯ್ದೆ-2015ರಡಿ ಪ್ರಕರಣದ ದಾಖಲಿಸಲಾಗಿದೆ.

ಪೊಲೀಸ್ ಕಮೀಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಡಿಸಿಪಿಗಳಾದ ರೋಹನ್ ಜಗದೀಶ, ಪಿ.ವಿ. ಸ್ನೇಹ ಮಾರ್ಗದರ್ಶನದಲ್ಲಿ ಮಾಳಮಾರುತಿ ಪೊಲೀಸ್ ಇನ್ಸಪೆಕ್ಟರ್ ಜೆ.ಎಂ. ಕಾಲಿಮಿರ್ಚಿ ನೇತೃತ್ವದಲ್ಲಿ ಪಿಎಸ್‌ಐ ರಾಮಗೌಡ ಸಂಕನಾಳ, ಸಿಬ್ಬಂದಿಗಳಾದ ಕೆ.ಬಿ. ಗೌರಾಣಿ ಹಾಗೂ ಜಾಸ್ಮೀನ್ ಮುಲ್ಲಾ ರಹಸ್ಯ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

Belagavi1

Belagavi: ಸಾಲಗಾರರ ಕಿರುಕುಳದಿಂದ ಬೇಸತ್ತು ನೇಕಾರ ಆತ್ಮ*ಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.