ಅಪಾರ್ಟ್ಮೆಂಟ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್ ಯುವ ನಟಿ: ಕಾರಣ ನಿಗೂಢ
Team Udayavani, Jun 10, 2024, 1:02 PM IST
ಮುಂಬಯಿ: ಯುವನಟಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮುಂಬೈನ ಲೋಖಂಡವಾಲಾದಲ್ಲಿ ನಡೆದಿರುವುದು ವರಿದಯಾಗಿದೆ.
ನೂರ್ ಮಾಲಾಬಿಕಾ ದಾಸ್(31) ನೇಣು ಬಿಗಿದುಕೊಂಡು ಮೃತಪಟ್ಟ ನಟಿ. ಜೂ.6 ರಂದು ಲೋಖಂಡವಾಲಾದಲ್ಲಿರುವ ತನ್ನ ಅಪಾರ್ಟ್ ಮೆಂಟ್ ನಲ್ಲಿ ನೂರು ಫ್ಯಾನ್ ಗೆ ನೇಣು ಬಿಗಿದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಫ್ಲಾಟ್ನಿಂದ ದುರ್ವಾಸನೆ ಬರುತ್ತಿದೆ ಎಂದು ನಟಿಯ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಓಶಿವಾರ ಪೊಲೀಸರು ಆಕೆಯ ಕೊಠಡಿಯ ಬಾಗಿಲು ಮುರಿದು ನೋಡಿದಾಗ ನೂರ್ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ನೂರ್ ಅವರ ಔಷಧಿಗಳು, ಆಕೆಯ ಮೊಬೈಲ್ ಫೋನ್ ಮತ್ತು ಡೈರಿ ಪೊಲೀಸರಿಗೆ ಆಕೆಯ ಕೋಣೆಯಲ್ಲಿ ಪತ್ತೆಯಾಗಿದೆ. ಆಕೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಗೋರೆಗಾಂವ್ನ ಸಿದ್ಧಾರ್ಥ್ ಆಸ್ಪತ್ರೆಗೆ ರವಾನಿಸಿ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಆದರೆ ಆಕೆಯ ಕುಟುಂಬಸ್ಥರು ಯಾರು ಕೂಡ ಅಂತ್ಯಕ್ರಿಯೆಗೆ ಮುಂದೆ ಬಾರದಿದ್ದ ಕಾರಣಕ್ಕೆ ಪೊಲೀಸರು ಎನ್ ಜಿಒ ಜೊತೆ ಸೇರಿ ಭಾನುವಾರ(ಜೂ.9 ರಂದು) ಅಂತಿಮ ವಿಧಿವಿಧಾನವನ್ನು ನೆರವೇರಿಸಿದ್ದಾರೆ ಎಂದು ವರದಿ ತಿಳಿಸಿದೆ.
ಮೇ ತಿಂಗಳವರೆಗೆ ನಟಿಯ ಜೊತೆ ಕುಟುಂಬಸ್ಥರು ಇದ್ದರು. ಇತ್ತೀಚಿಗಷ್ಟೇ ಕುಟುಂಬಸ್ಥರು ತನ್ನ ಊರು ಅಸ್ಸಾಂಗೆ ವಾಪಾಸ್ ಆಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿದ್ದರ ಹಿಂದಿನ ಕಾರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅಸ್ಸಾಂ ಮೂಲದ ನೂರ್ ಬಾಲಿವುಡ್ ನ ಕೆಲ ಸಿನಿಮಾದಲ್ಲಿ ನಟಿಸಿದ್ದರು. ʼಬ್ಯಾಕ್ರೋಡ್ ಹಸ್ಲ್ʼ, ʼಸಿಸ್ಕಿಯಾನ್ʼ, ʼವಾಕ್ಮನ್ʼ, ʼಟೀಕಿ ಚಟ್ನಿʼ ಮುಂತಾದ ಸಿನಿಮಾದಲ್ಲಿ ನಟಿಸಿದ್ದರು.
ಇತ್ತೀಚೆಗಷ್ಟೇ ಕಾಜೋಲ್ ಅವರ ವೆಬ್ ಸರಣಿ ʼದಿ ಟ್ರಯಲ್ʼ ನಲ್ಲಿ ನಟಿಸಿದ್ದರು. ಸಿನಿಮಾಕ್ಕೆ ಬರುವ ಮುನ್ನ ಅವರು ಮಾಜಿ ಗಗನಸಖಿಯಾಗಿ ಕೆಲಸ ಮಾಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
ಮದುವೆಯಾದ ವಾರದಲ್ಲೇ ಆಸ್ಪತ್ರೆಗೆ ಭೇಟಿ ನೀಡಿದ ಸೋನಾಕ್ಷಿ: ಗರ್ಭಿಣಿ ಇರಬಹುದೆಂದ ನೆಟ್ಟಿಗರು.!
Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..
ಸ್ತನ ಕ್ಯಾನ್ಸರ್ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..
Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?
MUST WATCH
ಹೊಸ ಸೇರ್ಪಡೆ
Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ
Bantwala: ಮರ ಬಿದ್ದು ಕೋಳಿ ಫಾರಂ ಜಖಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.