![Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು](https://www.udayavani.com/wp-content/uploads/2024/06/chk-3-415x293.jpg)
Boliyar ಚೂರಿ ಇರಿತ ಪ್ರಕರಣ; ಠಾಣೆಗೆ ಕಾರ್ಯಕರ್ತರ ಮುತ್ತಿಗೆ
Team Udayavani, Jun 10, 2024, 2:34 PM IST
![4-kudla-1](https://www.udayavani.com/wp-content/uploads/2024/06/4-kudla-1-620x372.jpg)
ಉಳ್ಳಾಲ: ಬೋಳಿಯಾರು ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚೂರಿಯಿಂದ ಇರಿದ ಪ್ರಕರಣದ ಬೆನ್ನಲ್ಲೇ ಕೊಣಾಜೆ ಪೊಲೀಸರ ಬೇಜವಾಬ್ದಾರಿ ಪ್ರಶ್ನಿಸಿ, ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿ ತಡರಾತ್ರಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಕೊಣಾಜೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.
ಕೇಂದ್ರದಲ್ಲಿ ಎನ್ ಡಿಎ ಸರಕಾರದ ಪ್ರಮಾಣ ವಚನ ಹಿನ್ನೆಲೆ ಬಿಜೆಪಿ ಬೋಳಿಯಾರು ಗ್ರಾಮ ಸಮಿತಿ ವತಿಯಿಂದ ಬೋಳಿಯಾರಿನಿಂದ ಧರ್ಮನಗರದವರೆಗೆ ವಿಜಯೋತ್ಸವ ರ್ಯಾಲಿ ಆಯೋಜಿಸಲಾಗಿತ್ತು.
ಈ ಸಂದರ್ಭ ಬೋಳಿಯಾರು ಮಸೀದಿ ಸಮೀಪ ಡಿಜೆ ಹಾಕದಂತೆ ತಂಡವೊಂದು ರ್ಯಾಲಿಯಲ್ಲಿದ್ದವರಿಗೆ ಸೂಚಿಸಿತ್ತು. ಇದರಿಂದ ವಾಗ್ವಾದ ನಡೆದಿತ್ತು. ವಿಜಯೋತ್ಸವ ಮುಗಿಸಿ ಬೋಳಿಯಾರು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ಧರ್ಮನಗರದ ಹರೀಶ್ ಪೂಜಾರಿ ಮತ್ತು ಅವರ ಭಾವ ನಂದನ್ ಎಂಬವರನ್ನು ತಡೆಹಿಡಿದ ತಂಡ ಚೂರಿಯಿಂದ ಇರಿದು ಪರಾರಿಯಾಗಿತ್ತು.
ಘಟನೆ ಸಂಬಂಧ ಕೊಣಾಜೆ ಠಾಣೆಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಮುಖಂಡ ಸಂತೋಷ್ ರೈ ಬೋಳಿಯಾರ್ ತಡರಾತ್ರಿಯೇ ಭೇಟಿ ನೀಡಿದ್ದರು.
ಇದೇ ವೇಳೆ ಬಿಜೆಪಿ ಕಾರ್ಯಕರ್ತರು ಠಾಣೆಯಲ್ಲಿ ಜಮಾಯಿಸಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೋಳಿಯಾರು ಮಸೀದಿ ಸಮೀಪ ವಾಗ್ವಾದ ನಡೆದರೂ ಪೊಲೀಸರು ವೀಡಿಯೋ ಮಾತ್ರ ಸೆರೆಹಿಡಿದಿದ್ದಾರೆ. ಯಾವುದೇ ಕ್ರಮ ಕೈಗೊಂಡಿಲ್ಲ. ಸೆರೆಹಿಡಿದ ವೀಡಿಯೋ ನೋಡಿ ತಕ್ಷಣವೇ ಘಟನೆಗೆ ಕಾರಣರಾದವನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
ಪೊಲೀಸರು ಆರೋಪಿಗಳನ್ನು ಶೀಘ್ರವೇ ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಕಾರ್ಯಕರ್ತರನ್ನು ಸಮಾಧಾನಿಸಿ ವಾಪಸ್ಸು ಕಳುಹಿಸಿದ್ದಾರೆ.
ಹತ್ತು ಮಂದಿ ವಶಕ್ಕೆ ವಿಡಿಯೋ ವೈರಲ್
ಬಿಜೆಪಿ ವಿಜಯೋತ್ಸವದ ಹಿನ್ಬಲೆಯಲ್ಲಿ ಬೋಳಿಯಾರ್ ಸಮಾಧಾನ್ ಬಾರ್ ಮುಂಭಾಗ ದಾಂದಲೆ ನಡೆಸಿ ಇಬ್ಬರಿಗೆ ಚೂರಿಯಿಂದ ಇರಿದ ಪ್ರಕರಣಕ್ಜೆ ಸಂಬಂಧಿಸಿದಂತೆ 10 ಕ್ಕೂಹೆಚ್ಚು ಶಂಕಿತರನ್ಬು ಕೊಣಾಜೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು ಘಟನೆ ಮುನ್ನ ಬೋಳಿಯಾರು ಮಸೀದಿ ಮುಂಭಾಗ ನಡೆದ ವಿಜಯೋತ್ಸವದ ಮೆರವಣಿಗೆ ಮತಗತು ಜೈಕಾರವಹಾಕಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರನ್ಬು ಅಟ್ಟಾಡಿಸಿದ ಸಿಸಿಟಿವಿ ದೃಶ್ಯ ವೃಲ್ ಆಗಿದೆ.
ಮಸೀದಿ ಮುಂದೆ ಸಾಗಿದ ವಿಜಯೋತ್ಸವ ಮೆರವಣಿಗೆಯಲ್ಲಿ ಘೋಷಣೆ ಕೂಗಿದ್ದ ಕಾರ್ಯಕರ್ತರು ವಿಜಯೋತ್ಸವ ಮುಗಿದ ಬಳಿಕ ಅಲ್ಲಿಂದ ಮತ್ತೆ ಮಸೀದಿ ಬಳಿ ಬೈಕ್ ನಲ್ಲಿ ಹೋಗುತ್ತಿರುವಾಗ ಘೋಷಣೆ ಕೂಗಿದಾಗ ಮಸೀದಿ ಮುಂಭಾಗದಲ್ಲಿ ಇದ್ದ ಯುವಕರು ಅವರನ್ನು ಅಟ್ಟಾಡಿಸಿಕೊಂಡು ಹೋಗಿದ್ದಾರೆ. ಇದೇ ಸಂದರ್ಭದಲ್ಲಿ ಮಸೀದಿಯಿಂದ 800 ಮೀಟರ್ ದೂರದಲ್ಲಿದ್ದ ಬೋಳಿಯಾರ್ ಸಮಾಧಾನ್ ಬಾರ್ ಮುಂಭಾಗ ಇಬ್ಬರಿಗೆ ಚೂರಿಯಿಂದ ಇರಿದಿದ್ದಾರೆ.
ಟಾಪ್ ನ್ಯೂಸ್
![Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು](https://www.udayavani.com/wp-content/uploads/2024/06/chk-3-415x293.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್ಟಿಯೂ ಅಗತ್ಯ](https://www.udayavani.com/wp-content/uploads/2024/06/vehicle-panic-button-150x92.jpg)
Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್ಟಿಯೂ ಅಗತ್ಯ
![Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್ನಲ್ಲಿ ಮಾತ್ರವೇ ಲಭ್ಯ](https://www.udayavani.com/wp-content/uploads/2024/06/TULU-2-150x55.jpg)
Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್ನಲ್ಲಿ ಮಾತ್ರವೇ ಲಭ್ಯ
![Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್’](https://www.udayavani.com/wp-content/uploads/2024/06/WARNA-NADHI-150x94.jpg)
Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್’
![BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್ ಕುಮಾರ್ ಕಟೀಲು](https://www.udayavani.com/wp-content/uploads/2024/06/bjppro-150x97.jpg)
BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್ ಕುಮಾರ್ ಕಟೀಲು
![Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ](https://www.udayavani.com/wp-content/uploads/2024/06/dc-1-150x72.jpg)
Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ
MUST WATCH
ಹೊಸ ಸೇರ್ಪಡೆ
![Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು](https://www.udayavani.com/wp-content/uploads/2024/06/chk-3-150x106.jpg)
Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು
![what if rain interrupts to icc t20 world cup final? What does the rule say?](https://www.udayavani.com/wp-content/uploads/2024/06/final-150x83.jpg)
ICC T20 World Cup; ಫೈನಲ್ ಪಂದ್ಯಕ್ಕೆ ಮಳೆ ಬಂದರೆ ಏನು ಗತಿ? ನಿಯಮ ಏನು ಹೇಳುತ್ತದೆ?
![13-tn-sitharama](https://www.udayavani.com/wp-content/uploads/2024/06/13-tn-sitharama-150x90.jpg)
T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್. ಸೀತಾರಾಮ
![Gujarat: ಭಾರೀ ಮಳೆಗೆ ರಾಜ್ ಕೋಟ್ ಏರ್ ಪೋರ್ಟ್ ಟರ್ಮಿನಲ್ ನ ಕೆನೋಪಿ ಕುಸಿತ](https://www.udayavani.com/wp-content/uploads/2024/06/Kenop-150x90.jpg)
Gujarat: ಭಾರೀ ಮಳೆಗೆ ರಾಜ್ ಕೋಟ್ ಏರ್ ಪೋರ್ಟ್ ಟರ್ಮಿನಲ್ ನ ಕೆನೋಪಿ ಕುಸಿತ
![No problem anyone comes in front of Martin…: Producer Uday Mehta](https://www.udayavani.com/wp-content/uploads/2024/06/martin-150x83.jpg)
Martin ಮುಂದೆ ಯಾರೇ ಬರಲಿ ನೋ ಪ್ರಾಬ್ಲಂ…: ನಿರ್ಮಾಪಕ ಉದಯ್ ಮೆಹ್ತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.