ಬರಹಗಾರರು ಸಹನೆ-ತಾಳ್ಮೆ ಬೆಳೆಸಿಕೊಳ್ಳಲಿ: ಡಾ.ವಿಜಯಕುಮಾರ ಕಟಗಿ


Team Udayavani, Jun 10, 2024, 5:02 PM IST

ಬರಹಗಾರರು ಸಹನೆ-ತಾಳ್ಮೆ ಬೆಳೆಸಿಕೊಳ್ಳಲಿ: ಡಾ.ವಿಜಯಕುಮಾರ ಕಟಗಿ

ಉದಯವಾಣಿ ಸಮಾಚಾರ
ಬಾಗಲಕೋಟೆ: ಓದು ಮತ್ತು ಬರಹಗಳು ಮನುಷ್ಯನಲ್ಲಿ ಶ್ರದ್ಧೆ ಮತ್ತು ಜ್ಞಾನಸ್ತ ಮನೋಭಾವನೆಯನ್ನು ಬೆಳೆಸುತ್ತವೆ. ಹೊಸ
ತಲೆಮಾರಿನ ಬರಹಗಾರರು ಸಹನೆ, ಮತ್ತು ತಾಳ್ಮೆ ಯನ್ನು ಬೆಳೆಸಿಕೊಳ್ಳಬೇಕು. ಪ್ರತಿರೋಧಾತ್ಮಕ, ಪ್ರಚೋಧನಾತ್ಮಕ ಆರೋಗ್ಯಪರ ಚಿಂತನೆ ರೂಪಿಸಿಕೊಳ್ಳಬೇಕು ಎಂದು ಬಿವಿವಿ ಸಂಘದ ಆಡಳಿತಾ ಧಿಕಾರಿಗಳು ಹಾಗೂ ಹಿರಿಯ ಸಾಹಿತಿಗಳಾದ ಡಾ.ವಿಜಯಕುಮಾರ ಕಟಗಿ ಹಳ್ಳಿಮಠ ಹೇಳಿದರು.

ನಗರದ ಬಸವೇಶ್ವರ ಕಲಾ ಮಹಾ ವಿದ್ಯಾಲಯ, ಮೇಘಮೆೈತ್ರಿ ಕನ್ನಡ ಸಾಹಿತ್ಯ ಸಂಘ ಇವರ ಸಹಯೋಗದಲ್ಲಿ ರವಿವಾರ ಹಮ್ಮಿಕೊಳ್ಳಲಾದ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಆಧುನಿಕ ತಲೆಮಾರಿಗೆ ಹೊಸ ಚಿಂತನೆಗಳು ಬೇಕು. ಸಾಹಿತಿಯಾಗಲು ದೊಡ್ಡ ಕೃತಿಗಳನ್ನೇ ಬರೆಯಬೇಕಿಲ್ಲ ಸಮಾಜಕ್ಕೆ ಉಪ ಯುಕ್ತವಾಗುವ ಎರಡು ಸಾಲುಗಳನ್ನು ಬರೆದರೂ ಅವರು ಸಾಹಿತ್ಯದ ಪರಿಪಾಲಕರೆ. ಪ್ರಾಚಿನ ಕರ್ನಾಟಕ ಹೇಗಿತ್ತು ನಾವುಹೇಗಿದ್ದೇವೆ ಎಂದು ಮೌಲ್ಯಮಾಪನ ಮಾಡಿಕೊಳ್ಳಬೇಕಿದೆ ಎಂದರು.

ಬಾಗಲಕೋಟೆ ಪ್ರಾಚಿನ ಕಾಲದಿಂದಲೂ ವಿಧ್ವತ್ಮಯದಿಂದ ಕೂಡಿದ ಸ್ಥಳವಾಗಿದ್ದು, ಇಂದು 400ಕ್ಕೂ ಹೆಚ್ಚು ಲೇಖಕಕರನ್ನು ಪೋಷಿಸಿ ಬೆಳೆಸುತ್ತಿದೆ. ಓದುಗರನ್ನು ಸೆಳೆಯುವ ಸಾಹಿತ್ಯ ರೂಡಿಸಿಕೊಳ್ಳಬೇಕಿದೆ. ಓದುಗರನ್ನು ಸೃಷ್ಟಿಮಾಡಲು ಸಾಧ್ಯವಾಗದಿದ್ದಾಗ ಬರವಣಿಗೆಗೆ ಮಹತ್ವ ಇಲ್ಲ. ಹಳೆ ತಲೆಮಾರಿನ ಲೇಖಕರು ಮತ್ತು ಹೊಸ ತಲೆಮಾರಿನ ಸಾಹಿತಿಗಳನ್ನು
ಒಂದುಗೂಡಿಸಿ ಸಮ್ಮೇಳನಗಳನ್ನು ಮಾಡಬೇಕು. ಇದರಿಂದ ಯುವ ಜನಾಂಗಕ್ಕೆ ಸಾಹಿತ್ಯದ ಅರಿವು ಮೂಡಿಸಲು ಸಾಧ್ಯ. ಸಮಾಜದಲ್ಲಿ ಅರಾಜಕತೆ ತಲೆದೋರಿದ್ದು ಕಾಯಕದಲ್ಲಿ ಆಸಕ್ತಿ ಇಲ್ಲದ ಜನರನ್ನು ಬಡಿದೆಬ್ಬಿಸಲು ಇಂತಹ ಸಮ್ಮೇಳನ,
ಸಮಾವೇಶಗಳು ನಡೆಯುವುದು ಅವಶ್ಯಕವಾಗಿದೆ ಎಂದರು.

ಬಿ.ಎಂ.ಶ್ರೀ ಪ್ರತಿಷ್ಠಾನದ ಅಧ್ಯಕ್ಷರಾದ ಡಾ| ಬೈರಮಂಗಲ ರಾಮೇಗೌಡ ಉದ್ಘಾಟನಪರ ಮಾತುಗಳನ್ನಾಡಿ ಕನ್ನಡ ಸಾಹಿತ್ಯದಲ್ಲಿರುವ ಸಮಗ್ರತೆ ಬೇರೆ ಸಾಹಿತ್ಯದಲ್ಲಿಲ್ಲ. ಡಾ. ವಿಜಯಕುಮಾರ್‌ ಕಟಗಿಹಳ್ಳಿಮಠ ಅಪರೂಪದ ವ್ಯಕ್ತಿತ್ವ. ಅವರು ಸಾಹಿತಿಗಳಾಗಿ ಅಷೆrà ಅಲ್ಲದೇ ಒಬ್ಬ ನಿಷ್ಠಾವಂತ ಪ್ರಾಧ್ಯಾಪಕರಾಗಿ, ಪ್ರಾಚಾರ್ಯರಾಗಿ ಸಾಧನೆ ಮಾಡಿದ್ದು ಕನ್ನಡ ಲೋಕಕ್ಕೆ ಅಪರೂಪದ ಕೊಡುಗೆಯಾಗಿದ್ದಾರೆ. ಬಸವೇಶ್ವರ ವಿದ್ಯಾವರ್ಧಕ ಸಂಘವು ಕೇವಲ ಉತ್ತರ ಕರ್ನಾಟಕಕ್ಕೆ ಸೀಮಿತವಾಗದೇ
ಕರ್ನಾಟಕದಾದ್ಯಂತ ಗುಣಮಟ್ಟದ ಶಿಕ್ಷಣ ಹಂಚುವ ಕೆಲಸ ಮಾಡಲಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಗಳಾದ ಡಾ| ಮಲ್ಲಿಕಾ ಘಂಟಿ ಮಾತನಾಡಿ, ಸಮಾಜದಲ್ಲಿ ಹೆಣ್ಣುಮಕ್ಕಳ ಪಾತ್ರ ದೊಡ್ಡದು. ಸಾಹಿತ್ಯಗಳನ್ನು ಗೌರವಿಸುವುದು ರಾಜಕೀಯದಲ್ಲಿ ಕಡಿಮೆಯಾಗುತ್ತಿರುವುದು ವಿಷಾದನಿಯ. ದೇಶದಲ್ಲಿ ಜಾತಿಯತೆ ತಲೆ ಎತ್ತಿ ನಿಂತಿದೆ. ಪ್ರಜಾಪ್ರಭುತ್ವದಲ್ಲಿ ಜಾತಿ ಸಂಘಟನೆಗಳು
ಹೆಚ್ಚುತ್ತಿದ್ದು ಪ್ರಭುದ್ಧತೆ ಕಡಿಮೆಯಾಗಿದೆ.

ಗಾಂಧೀಜಿಯವರ ಅಹಿಂಸೆಯ ತತ್ವದ ಮೂಲಕ ಭಾರತವನ್ನು ಮುನ್ನಡೆಸಬೇಕಿದೆ. ಯುವ ಬರಹಗಾರ ಸಂಖ್ಯೆ ಹೆಚ್ಚಾಗಿದ್ದು ಅವರು ಎಲ್ಲರ ಮನಸ್ಸು ತಟ್ಟಬೇಕಾಗಿದೆ. ಪುಸ್ತಕದ ಜೋತೆಗೆ ಸಾಹಿತ್ಯವನ್ನು ಓದುವ ಕೆಲಸ ಮಾಡಿ ಎಂದರು. ಕಾರ್ಯಕ್ರಮದಲ್ಲಿ ಕಮತಗಿಯ ಮೇಘಮೆೈತ್ರಿ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಂ. ರಮೇಶ ಕಮತಗಿ ಪ್ರಾಸ್ತಾವಿಕವಾಗಿ
ಮಾತನಾಡಿದರು. ಕಮತಗಿಯ ಹೀರೆಮಠದ ಶ್ರಿ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು, ಕನ್ನಡ ಸಾಹಿತ್ಯ ಪರಿಷತ್‌
ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ , ನಿವೃತ್ತ ಪ್ರಾಂಶುಪಾಲರಾದ ಚಂದ್ರಶೇಖರ ನಾದೂರು, ವಿಜಯ ಸಂಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಶಾಂತರಾಜು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಡಾ. ವಿ.ಎಸ್‌ ಕಟಗಿಹಳ್ಳಿ ಮಠ ಅವರ ಷವ್ಯಕ್ರಿಚಿತ್ರ ಸಂಪದಷ ಮತ್ತು ಡಾ| ಶಾಂತರಾಜು ಅವರ ಷಅಂತರ್ಶೋಧಷ ಕೃತಿ ಬಿಡುಗಡೆ ಮಾಡಲಾಯಿತು. ನಿವೃತ್ತ ಪ್ರಾಂಶುಪಾಲರಾದ ಪ್ರೊ. ಚಂದ್ರಶೇಖರ ನಾದೂರು
ಅಂತರ್ಶೋಧ ಕೃತಿ ಹಾಗೂ ಡಾ. ಶಾಂತರಾಜು ವ್ಯಕ್ತಿಚಿತ್ರ ಸಂಪದ ಕುರಿತು ವಿಮರ್ಶೆ ಮಾಡಿದರು. ಬಳಿಕ ವಿಚಾರಗೋಷ್ಠಿ ಮತ್ತು
ಕವಿಗೋಷ್ಠಿಗಳನ್ನು ಹಮ್ಮಿಕೊಳ್ಳಲಾಯಿತು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್

ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್

festcide

Feticide: ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಪತ್ತೆ

Bagalkote: ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

Bagalkote: ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

1-MLP

BJP:ಮಹಾಲಿಂಗಪುರ ಪುರಸಭೆಯ 4 ಸದಸ್ಯರು, 3 ಮುಖಂಡರು ಪಕ್ಷದಿಂದ ಉಚ್ಛಾಟನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.