ತೆಲಸಂಗ: ಪ್ರಯಾಣಿಕರ ದಾರಿ ತಪ್ಪಿಸುವ ಮಾರ್ಗಸೂಚಿ ಫಲಕಗಳು


Team Udayavani, Jun 10, 2024, 5:17 PM IST

ತೆಲಸಂಗ: ಪ್ರಯಾಣಿಕರ ದಾರಿ ತಪ್ಪಿಸುವ ಮಾರ್ಗಸೂಚಿ ಫಲಕಗಳು

ಉದಯವಾಣಿ ಸಮಾಚಾರ
ತೆಲಸಂಗ: ರಸ್ತೆಗಳ ಬದಿಗಳಲ್ಲಿ ಅಳವಡಿಸುವ ಗ್ರಾಮಗಳ ಮಾರ್ಗಸೂಚಿ ಫಲಕಗಳು ಮಾರ್ಗಸೂಚಿಯಾಗಿರಬೇಕು. ಆದರೆ ಅಥಣಿ ತಾಲೂಕಿನ ಕಕಮರಿಯಿಂದ ತೆಲಸಂಗ ಸಾವಳಗಿವರೆಗೆ ಅಭಿವೃದ್ಧಿ ಪಡಿಸಿರುವ ಕರ್ನಾಟಕ ಎಸ್‌.ಎಚ್‌ 260 ರಸ್ತೆ ಬದಿಯಲ್ಲಿ ಅಳವಡಿಸಿರುವ ಗ್ರಾಮಗಳ ಕಿ.ಮೀ ಮಾರ್ಗಸೂಚಿ ಫಲಕಗಳು ಪ್ರಯಾಣಿಕರಿಗೆ ದಾರಿ ತಪ್ಪಿಸುತ್ತಿವೆ.

ಫಲಕಗಳಲ್ಲಿ ಕಿ.ಮೀ. ಲೋಪದೋಷಗಳಾಗಿವೆ. ಹಾಲಳ್ಳಿ ಮಾರ್ಗದಿಂದ ತೆಲಸಂಗ ಕ್ರಾಸ್‌ ರಸ್ತೆ ದಾಟುವ ಮುನ್ನ ಹಾಕಿರುವ ಫಲಕದಲ್ಲಿ ತೆಲಸಂಗ 2 ಕಿ.ಮೀ. ಬರೆಯುವ ಬದಲು 3 ಕಿ.ಮೀ ಅಂತ ಬರೆಯಲಾಗಿದೆ. ಆಶ್ಚರ್ಯವೆಂದರೆ ನಾಲ್ಕು ಹೆಜ್ಜೆ ಅಂತರದಲ್ಲಿಯೇ ರಸ್ತೆ ಕ್ರಾಸ್‌ ಮಾಡಿದ ನಂತರ ಇನ್ನೊಂದು ಫಲಕದಲ್ಲಿ ತೆಲಸಂಗ 4 ಕಿ.ಮೀ ಅಂತ ಫಲಕದಲ್ಲಿದೆ. ಅಲ್ಲದೇ ಈ ನೂತನ ಫಲಕದ ಪಕ್ಕದಲ್ಲೇ ಹಳೇ ಕಲ್ಲಿನ ಫಲಕದಲ್ಲಿ ತೆಲಸಂಗ 2 ಕಿ.ಮೀ ಅಂತ ಸ್ಪಷ್ಟವಾಗಿ ಬರೆದಿದ್ದರೂ 3 ಕಿ.ಮೀ, 4
ಕಿ.ಮೀ ಅಂತ ತಪ್ಪಾದ ಫಲಕ ಹಾಕಿ ಗೊಂದಲ ಸೃಷ್ಟಿಸಲಾಗಿದೆ.

ತೆಲಸಂಗ ಗ್ರಾಮದ ಅಂಬೇಡ್ಕರ್‌ ವೃತ್ತದಲ್ಲೂ ತಪ್ಪು ಫಲಕ ಹಾಕಲಾಗಿದೆ. 4 ಕಿ.ಮೀ ಅಂತರದ ಕನ್ನಾಳ ಗ್ರಾಮಕ್ಕೆ 6.5 ಕಿ.ಮೀ ಅಂತ, 10 ಕಿ.ಮೀ ಅಂತರದ ಕಕಮರಿ ಗ್ರಾಮಕ್ಕೆ 13 ಕಿ.ಮೀ ಅಂತ  ಹಾಕಲಾಗಿದೆ. ಫಲಕ ಹಾಕಿ 8 ತಿಂಗಳ ಕಳೆದರೂ ಫಲಕ ತಪ್ಪೆಂದು ಗೊತ್ತಾಗದ ಅಧಿಕಾರಿಗಳ

ವರ್ತನೆಗೆ ಜನ ಬೇಸತ್ತಿದ್ದಾರೆ. ಕಕಮರಿಯಿಂದ ತೆಲಸಂಗ ಮಾರ್ಗಕ್ಕೆ ಕಕಮರಿಯಲ್ಲಿ ಅಳವಡಿಸಿರುವ ಫಲಕದಲ್ಲಿ ತೆಲಸಂಗ 10 ಕಿ.ಮೀ ಅಂತ ಸರಿಯಾಗಿಯೇ ಇದೆ. ಈ ಫಲಕದೊಂದಿಗೆ ಅಳವಡಿಸಿರುವ ಇನ್ನುಳಿದ ಫಲಕಗಳಲ್ಲಿ ತಪ್ಪಾಗಿ ನಮೂದಿಸಿ ಅಳವಡಿಸಿರುವ ಫಲಕಗಳಿಂದ ದೂರದ ಪ್ರಯಾಣಿಕರು ಲೋಕೋಪಯೋಗಿ ಇಲಾಖೆಗೆ ಹಿಡಿಶಾಪ ಹಾಕುವಂತಾಗಿದೆ.

ಕುಸಿದ ರಸ್ತೆ: ತೆಲಸಂಗ ಕ್ರಾಸ್‌ದಿಂದ ಹಾಲಳ್ಳಿ ಮಾರ್ಗವಾಗಿ ಹೋಗುವ ಪೋಳ ಅವರ ತೋಟದ ಬಳಿ ಈ ನೂತನ ರಸ್ತೆ ಕುಸಿದಿದೆ. ಇದರಿಂದ ಜೋರಾಗಿ ಬಂದ್‌, ಬೈಕ್‌, ಕಾರ್‌ ಸೇರಿದಂತೆ ವಿವಿಧ ವಾಹನಗಳು ದಿಢೀರ್‌ ವೇಗದಲ್ಲಿ ಜಂಪ್‌ ಆಗಿ ಚಾಲಕನ ನಿಯಂತ್ರಣ ತಪ್ಪುತ್ತಿವೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ.

ಅಧಿಕಾರಿಗಳ ವಿರುದ್ಧ ಆಕ್ರೋಶ
ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಪ್ಯಾಕೇಜ್‌ ಸಂಖ್ಯೆ 508, ಅಥಣಿ ತಾಲೂಕಿನ ರಾಜ್ಯ ಗಡಿ-ಕಕಮರಿ-ತೆಲಸಂಗ-ಸಾವಳಗಿ ರಸ್ತೆ ಸುಧಾರಣೆ ಗುತ್ತಿಗೆ ಮೊತ್ತ 2323.00 ಲಕ್ಷ ರೂ.ಗಳು, ಅಭಿವೃದ್ಧಿ ಪಡಿಸಿರುವ ರಸ್ತೆ ಉದ್ದ 16.00 ಕಿ.ಮೀ. ಕಾಮಗಾರಿ ಪ್ರಾರಂಭ 04-07-2022, ಮುಕ್ತಾಯ 03-01-2024, ಗುತ್ತಿಗೆ ಅವಧಿ 18 ತಿಂಗಳು. ಅವಧಿ ಮುಗಿದು 6 ತಿಂಗಳು ಕಳೆದರೂ ತಪ್ಪಾದ ಫಲಕ ಸರಿಪಡಿಸಿಲ್ಲ. ಕುಸಿದ ರಸ್ತೆಗೆ ಡಾಂಬರ್‌ ಹಾಕಿಲ್ಲ. ಬೀದಿದೀಪ ಉರಿಯುತ್ತಿಲ್ಲ. ಇದರಿಂದ ಅ ಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ತಪ್ಪು ಫಲಕಗಳಿದ್ದರೆ ಖಂಡಿತ ಅವುಗಳನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ಕುಸಿದ ರಸ್ತೆ ಬಗ್ಗೆ ನಮ್ಮ ಎಂಜಿನಿಯರ್‌ ಕಳಿಸಿ ಅದನ್ನು ಸರಿಪಡಿಸುವ ಕೆಲಸವನ್ನು ಶೀಘ್ರ ಮಾಡಲಾಗುವುದು.
*ಜಯಾನಂದ ಹಿರೇಮಠ,
ಎಇಇ, ಪಿಡಬ್ಲ್ಯುಡಿ ಅಥಣಿ.

ಬರುವ ಒಂದೆರೆಡು ವಾರಗಳಲ್ಲಿ ತಪ್ಪುಗಳಾಗಿರುವ ಎಲ್ಲ ನಾಮಫಲಕ ತೆರವುಗೊಳಿಸಿ ಗ್ರಾಮಗಳ ಅಂತರದ ಸರಿಯಾದ ಕಿ.ಮೀ ಮಾರ್ಗಸೂಚಿ ಫಲಕ ಅಳವಡಿಸುವ ಕಾರ್ಯ ಪೂರ್ಣಗೊಳ್ಳಬೇಕು. ಬೀದಿದೀಪ ಉರಿಯಬೇಕು. ಕುಸಿದ ರಸ್ತೆ ಸರಿಪಡಿಸಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ.
*ಬುರಾನ ಅರಟಾಳ, ಯುವ ಮುಖಂಡ, ತೆಲಸಂಗ.

■ ಜಗದೀಶ ತೆಲಸಂಗ

ಟಾಪ್ ನ್ಯೂಸ್

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

During the Lok Sabha election, there was a discussion about caste-wise DCM, but….: hc mahadevappa

Lok Sabha ಚುನಾವಣೆ ವೇಳೆ ಜಾತಿವಾರು ಡಿಸಿಎಂ ಚರ್ಚೆ ನಡೆದಿತ್ತು, ಆದರೆ….: ಮಹಾದೇವಪ್ಪ

Dengue

Belagavi; ಜ್ವರದಿಂದ ಬಳಲುತ್ತಿದ್ದ ಯುವಕ ಸಾವು: ಡೆಂಗ್ಯೂ ಶಂಕೆ

ಬೆಳಗಾವಿ: ಪ್ರತಿಭಾ ಪಲಾಯನ ತಡೆಯಬೇಕಿದೆ: ನಿರಂಜನ

ಬೆಳಗಾವಿ: ಪ್ರತಿಭಾ ಪಲಾಯನ ತಡೆಯಬೇಕಿದೆ: ನಿರಂಜನ

satish jarakiholi

CM ಬದಲಾವಣೆ ವಿಷಯ ಮುಗಿದು ಹೋದ ಅಧ್ಯಾಯ: ಸತೀಶ್ ಜಾರಕಿಹೊಳಿ

ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ

ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.