Belthangady; ಜಾಗದ ತಕರಾರು ಪ್ರಕರಣ: 25 ಮೇಕೆಯ ತಲೆ ಕಡಿದು ಫೋಟೋ ಇಟ್ಟು ವಾಮಾಚಾರ
Team Udayavani, Jun 10, 2024, 5:25 PM IST
ಬೆಳ್ತಂಗಡಿ: ಎರಡು ವ್ಯಕ್ತಿಗಳ ನಡುವೆ ಹಲವು ವರ್ಷಗಳಿಂದ ನಡೆಯುತ್ತಿದ್ದ ಜಾಗದ ತಕರಾರು ಸಂಬಂಧ ಇದೀಗ ಜಾಗವನ್ನು ಪ್ರವೇಶಿಸುವ ಗೇಟಿನ ಮುಂದೆ 25 ಮೇಕೆಯ ತಲೆ ಕಡಿದು ಅದಕ್ಕೆ 25 ಮಂದಿಯ ಪೋಟೋ ಇಟ್ಟು ವಾಮಾಚಾರ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ಜೂ.10 ರಂದು ಬೆಳಕಿಗೆ ಬಂದಿದೆ.
ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಬೋಳಿಯಾರ್ ಎಂಬಲ್ಲಿ 25 ಎಕರೆ ಜಾಗವನ್ನು ಕೇರಳ ಮೂಲದ ಗೋಪಾ ಕುಮಾರ್ ಮತ್ತು ಸುಮೇಶ್ ಎಂಬವರು ಕಳೆದ ವರ್ಷ ಮಂಗಳೂರು ವೈಷ್ಣವಿ ಟ್ರಾನ್ಸ್ ಪೋರ್ಟ್ ಮಾಲೀಕ ರಾಜೇಶ್ ಪ್ರಭು ಎಂಬಾತ ಖರೀದಿ ಮಾಡಿಕೊಂಡು ದಾಖಲೆ ಪತ್ರ ವರ್ಗಾವಣೆ ಮಾಡಿಸಿ ಜಾಗದ 8 ಕೋಟಿ ರೂಪಾಯಿ ಹಣ ನೀಡದೆ ಮೋಸ ಮಾಡಿದ್ದ. ಈ ಬಗ್ಗೆ ಹಲವು ಸಮಯದವರೆಗೆ ಗಲಾಟೆ ನಡೆಯುತ್ತಿತ್ತು. ನಂತರ ಮಾರಾಟ ಮಾಡಿದ ಜಾಗದ ಮಾಲೀಕರಾದ ಗೋಪಾ ಕುಮಾರ್ ಮತ್ತು ಸುಮೇಶ್ ಸೇರಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಈ ಬಗ್ಗೆ ಬೆಳ್ತಂಗಡಿ ಕೋರ್ಟ್ ನಲ್ಲಿ ಹಣ ನೀಡದೆ ಮೋಸ ಮಾಡಿದ ಬಗ್ಗೆ ದಾಖಲೆಗಳ ಮೂಲಕ ತಿಳಿದಿದ್ದು, ಜಾಗವನ್ನು ಮೂರನೇ ವ್ಯಕ್ತಿಗೆ ರಾಜೇಶ್ ಪ್ರಭು ಮಾರಾಟ ಮಾಡಬಾರದು ಮತ್ತು ಹಿಂದಿನ ಮೂಲ ಜಾಗದ ಮಾಲೀಕರಾದ ಗೋಪಾ ಕುಮಾರ್ ಮತ್ತು ಸುಮೇಶ್ ವಶಕ್ಕೆ ಬೆಳ್ತಂಗಡಿ ಕೋರ್ಟ್ ನೀಡಿತ್ತು.
ಇದೀಗ ಜಾಗಕ್ಕೆ ಪ್ರವೇಶ ಮಾಡುವ ಗೇಟಿನ ಮುಂದೆ ಜೂ.9 ರಂದು ರಾತ್ರಿ 25 ಮೇಕೆಯ ತಲೆ ಕಡಿದು ಅದಕ್ಕೆ 25 ಮಂದಿಯ ಫೋಟೋಗಳನ್ನು ಇಟ್ಟು ಜಾಗ ಖರೀದಿ ಮಾಡಿ ಹಣ ಮೋಸ ಮಾಡಿದ್ದ ಮಂಗಳೂರಿನ ವೈಷ್ಣವಿ ಟ್ರಾನ್ಪೋರ್ಟ್ ಮಾಲೀಕನಾಗಿರುವ ಪ್ರಭಾವಿ ವ್ಯಕ್ತಿ ರಾಜೇಶ್ ಪ್ರಭು ಎಂಬಾತ ವಾಮಾಚಾರ ಮಾಡಿದ್ದಾನೆ ಎಂದು ಆರೋಪ ಕೇಳಿಬರುತ್ತಿದ್ದೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಬಂದು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.