ಬಾಡಿಗೆ ಕಟ್ಟಡದಲ್ಲಿಯೇ ಕಾರ್ಯ ನಿರ್ವಹಣೆ; 25 ವಸತಿ ನಿಲಯಗಳಿಗಿಲ್ಲ ಸ್ವಂತ ಕಟ್ಟಡ


Team Udayavani, Jun 10, 2024, 5:25 PM IST

ಬಾಡಿಗೆ ಕಟ್ಟಡದಲ್ಲಿಯೇ ಕಾರ್ಯ ನಿರ್ವಹಣೆ; 25 ವಸತಿ ನಿಲಯಗಳಿಗಿಲ್ಲ ಸ್ವಂತ ಕಟ್ಟಡ

ಉದಯವಾಣಿ ಸಮಾಚಾರ
ಗದಗ: ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್‌ ಪೂರ್ವ ಹಾಗೂ ನಂತರದ 62 ವಸತಿ ನಿಲಯಗಳ ಪೈಕಿ ಕೇವಲ 36 ವಸತಿ ನಿಲಯಗಳಿಗೆ ಸ್ವಂತ ಕಟ್ಟಡಗಳಿದ್ದರೆ 25 ವಸತಿ ನಿಲಯಗಳು ಬಾಡಿಗೆ ಕಟ್ಟಡದ ಆಶ್ರಯ ಪಡೆದಿವೆ.

ಜಿಲ್ಲೆಯಲ್ಲಿ ಮೆಟ್ರಿಕ್‌ ಪೂರ್ವ 33 ನಿಲಯಗಳ ಪೈಕಿ 8 ವಸತಿ ನಿಲಯಗಳು ಹಾಗೂ ಮೆಟ್ರಿಕ್‌ ನಂತರದ 31 ವಸತಿ ನಿಲಯಗಳ ಪೈಕಿ 13 ವಸತಿ ನಿಲಯಗಳು ಸ್ವಂತ ಕಟ್ಟಡವಿಲ್ಲದೇ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಬಾಡಿಗೆ ಕಟ್ಟಡದಲ್ಲಿರುವ 25 ವಸತಿ ನಿಲಯಗಳ ಪೈಕಿ 14 ವಸತಿ ನಿಲಯಗಳು ವಿದ್ಯಾರ್ಥಿನಿಯರ ವಸತಿ ನಿಲಯಗಳಾಗಿವೆ.

ಮೆಟಿಕ್‌ ನಂತರದ ಬಾಲಕಿಯರ ವಸತಿ ನಿಲಯಗಳ ಪೈಕಿ ಗದಗ 2, ನರಗುಂದ, ಲಕ್ಷ್ಮೇಶ್ವರ, ಗಜೇಂದ್ರಗಡ, ರೋಣ, ಬೆಳ್ಳಟ್ಟಿ ಹಾಗೂ ಹೊಂಬಳ ತಲಾ ಒಂದು ಸೇರಿ 8, ಮೆಟ್ರಿಕ್‌ ನಂತರದ ಬಾಲಕಿಯರ ಸ್ನಾತಕೋತ್ತರ ವಸತಿ ನಿಲಯ ಗದಗ ಮತ್ತು ನರಗುಂದ ಸೇರಿ 2, ಮೆಟ್ರಿಕ್‌ ನಂತರದ ವೃತ್ತಿಪರ ಬಾಲಕಿಯರ ವಸತಿ ನಿಲಯ 1 ಹಾಗೂ ಮೆಟ್ರಿಕ್‌ ಪೂರ್ವ ಬಾಲಕಿಯರ ವಸತಿ ನಿಲಯ ಗದಗ, ಮುಂಡರಗಿ, ಶಿರಹಟ್ಟಿ ತಲಾ 3 ಸೇರಿ ಒಟ್ಟಾರೆ 14 ವಸತಿ ನಿಲಯಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯ
ನಿರ್ವಹಿಸುತ್ತಿವೆ.

ಮೆಟ್ರಿಕ್‌ ನಂತರದ ಬಾಲಕಿಯರ ವಸತಿ ನಿಲಯಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ 10 ವಸತಿ ನಿಲಯಗಳ 1,325 ಬಾಲಕಿಯರು, ಮೆಟ್ರಿಕ್‌ ಪೂರ್ವ ಬಾಲಕಿಯರ  ವಸತಿ ನಿಲಯಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ 4 ವಸತಿ ನಿಲಯಗಳ ಪೈಕಿ 285 ವಿದ್ಯಾರ್ಥಿನಿಯರಿಗೆ ಇಲ್ಲಿ ಸೌಲಭ್ಯ ಕಲ್ಪಿಸಲಾಗಿದೆ.

ಬಾಡಿಗೆ ಕಟ್ಟಡಗಳಾಗಿದ್ದರಿಂದ ಭದ್ರತೆಯ ಅಭಾವ ವಿದ್ಯಾರ್ಥಿನಿಯರನ್ನು ಕಾಡುತ್ತಿರುವುದು ಮಾತ್ರ ಸುಳ್ಳಲ್ಲ. ಬಾಡಿಗೆ ಕಟ್ಟಡದಲ್ಲಿರುವ ವಸತಿ ನಿಲಯಗಳಿಗೆ ಕೆಲ ಕಡೆ ಕಾಂಪೌಂಡ್‌ ಇಲ್ಲದಿರುವುದು, ವಸತಿ ನಿಲಯಕ್ಕೆ ಅಂಟಿಕೊಂಡೇ ರಸ್ತೆ ಇದೆ. ಇಲಾಖೆಯಿಂದ ನೇಮಿಸಲ್ಪಟ್ಟ ರಾತ್ರಿ ಕಾವಲುಗಾರರು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿವೆ. ಭದ್ರತೆ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಜತೆಗೆ ವಿದ್ಯಾರ್ಥಿನಿಯರ ವಸತಿ ನಿಲಯಗಳಿಗೆ ಆದ್ಯತೆ ನೀಡಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ಇಲಾಖೆ ಮುಂದಾಗಬೇಕಿದೆ.

ಮುಖ್ಯವಾಗಿ ಜಿಲ್ಲೆಯಲ್ಲಿ ಮೆಟ್ರಿಕ್‌ ನಂತರ, ಮೆಟ್ರಿಕ್‌ ಪೂರ್ವ ವಸತಿ ನಿಲಯಗಳ ಬಾಡಿಗೆ ಹಾಗೂ ಸ್ವಂತ ಕಟ್ಟಡಗಳ ಪೈಕಿ 33 ನಿಲಯ ಮೇಲ್ವಿಚಾರಕರು, ಕಿರಿಯ ಮೇಲ್ವಿಚಾರಕರು, 25 ಅಡುಗೆಯವರು, 99 ಅಡುಗೆ ಸಹಾಯಕರು, 25 ರಾತ್ರಿ ಕಾವಲುಗಾರರ ಕೊರತೆ ಎದ್ದು ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆದಷ್ಟು ಬೇಗ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಸತಿ ನಿಲಯಗಳನ್ನು ಸ್ವಂತ ಕಟ್ಟಡಗಳಿಗೆ ವರ್ಗಾಯಿಸುವುದು ಸೇರಿದಂತೆ ಖಾಲಿ ಇರುವ
ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲಾದ್ಯಂತ ಮೆಟ್ರಿಕ್‌ ಪೂರ್ವ ಹಾಗೂ ಮೆಟ್ರಿಕ್‌ ನಂತರದ 62 ವಸತಿ ನಿಲಯಗಳಿದ್ದು, ಆ ಪೈಕಿ 25 ವಸತಿ ನಿಲಯಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಗಮನಕ್ಕಿದೆ. ಈ
ಹಿನ್ನೆಲೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಸತಿ ನಿಲಯಗಳಿಗೆ ಸ್ವಂತ ಕಟ್ಟಡ ಕಲ್ಪಿಸುವಂತೆ ಇಲಾಖೆಗೆ ಪತ್ರ ಬರೆದು ಪ್ರಸ್ತಾವನೆ ಸಲ್ಲಿಸಲಾಗಿದೆ. ಇದ್ದ ಸಿಬ್ಬಂದಿ ಜತೆಗೆ ವಸತಿ ನಿಲಯಗಳನ್ನು ಶಿಸ್ತುಬದ್ಧವಾಗಿ ನಡೆಸಿಕೊಂಡು ಹೋಗಲಾಗುತ್ತಿದೆ.
●ರವೀ ಗುಂಜೀಕರ್‌, ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆ ಜಿಲ್ಲಾ ಅಧಿಕಾರಿ

ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

Gadag; ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

Gadag; ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Gadag; ಹಬ್ಬದ ಖರೀದಿಗೆಂದು ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Mundargi: Bike rider went to Kochi without overbridge; Protest by villagers

Mundargi: ನೀರಿನಲ್ಲಿ ಕೊಚ್ಚಿ ಹೋದ ಬೈಕ್; ಓರ್ವ ಸಾವು

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.