ಮುಂಡಗೋಡ- ಶಾಸಕರ ಮಾದರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ಆತಂಕ


Team Udayavani, Jun 10, 2024, 6:04 PM IST

ಮುಂಡಗೋಡ- ಶಾಸಕರ ಮಾದರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ಆತಂಕ

■ ಉದಯವಾಣಿ ಸಮಾಚಾರ
ಮುಂಡಗೋಡ: ಇಲ್ಲಿನ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳು ಸಮರ್ಪಕವಾಗಿ ಶಿಕ್ಷಣ ಸಿಗದೇ ವಂಚಿತರಾಗುತ್ತಿದ್ದಾರೆ ಎಂಬ ಆತಂಕ ಪಾಲಕರಲ್ಲಿ ಮೂಡಿದ್ದು ಬೇರೆ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ.

ಪಟ್ಟಣ ಹೃದಯ ಭಾಗದಲ್ಲಿ ಶಾಸಕರ ಮಾದರಿ ಶಾಲೆಯಿದ್ದು, ಇಲ್ಲಿ ಒಂದರಿಂದ ಎಂಟನೇ ತರಗತಿ ವರೆಗೆ ಕನ್ನಡ ಹಾಗೂ ಒಂದರಿಂದ 6ನೇ ತರಗತಿವರೆಗೆ ಆಂಗ್ಲ ಮಾಧ್ಯಮ ಶಿಕ್ಷಣ ಪಡೆಯುತ್ತಿದ್ದು, ಒಟ್ಟು 650 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕನ್ನಡ ಹಾಗೂ ಆಂಗ್ಲ ಮಾಧ್ಯಮವಿರುವ ಕಾರಣ ಈ ಶಾಲೆಯಲ್ಲಿ ಒಟ್ಟು ಇಪ್ಪತ್ತು ಶಿಕ್ಷಕರು ಕರ್ತವ್ಯ ನಿರ್ವಹಿಸಬೇಕು. ಆದರೆ ಸದ್ಯ ಮುಖ್ಯೋಪಾಧ್ಯಾಯ ಸೇರಿ 9 ಶಿಕ್ಷಕರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ.

ಕಳೆದ ವರ್ಷ ನಡೆದ ವರ್ಗಾವಣೆಯಲ್ಲಿ ಈ ಶಾಲೆ ಯಿಂದ ಹಲವಾರು ಶಿಕ್ಷಕರು ಬೇರಡೆ ವರ್ಗಾವಣೆ ಗೊಂಡಿದ್ದಾರೆ. ಆದರೆ ವರ್ಗವಾದ ಶಿಕ್ಷಕರ ಜಾಗಕ್ಕೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿತ್ತು. ಆದರೆ ಪ್ರಸ್ತುತ ವರ್ಷದಲ್ಲಿ ಕನ್ನಡ ಮಾಧ್ಯಮ ಮತ್ತು ಇಂಗ್ಲಿಷ ಮಾಧ್ಯಮ ತಲಾ ನಾಲ್ಕು ಶಿಕ್ಷಕರ ಕೊರತೆ ಎದುರಾಗಿದೆ.

ಶಾಸಕರ ಮಾದರಿ ಶಾಲೆಯಲ್ಲಿ ಉತ್ತಮ ಶಿಕ್ಷಣ ಸಿಗುತ್ತದೆ ಎಂಬ ಉದ್ದೇಶದಿಂದ ಕನ್ನಡ ಹಾಗೂ ಆಂಗ್ಲ ಮಾಧ್ಯಮಕ್ಕೆ ವಿದ್ಯಾರ್ಥಿಗಳನ್ನು ಸೇರಿಸಿದ್ದಾರೆ. ಆದರೆ ಇದೀಗ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳಿಗೆ ಸರಿಯಾಗಿ ಶಿಕ್ಷಣ ಸಿಗುತ್ತಿಲ್ಲ. ಅಲ್ಲದೆ ನಮ್ಮ ಮಕ್ಕಳ ಶಾಲೆಯಲ್ಲಿ ಟೀಚರ್‌ ಇರುವುದಿಲ್ಲ, ಶಾಲೆಗೆ ಹೋಗುವುದಿಲ್ಲ ಎಂದು ಗೈರಾಗುತ್ತಿದ್ದಾರೆ.

ಕೆಲ ಪಾಲಕರು ಶಿಕ್ಷಕರ ಕೊರತೆಯಿಂದ ಮಕ್ಕಳನ್ನು ಬೇರೆ ಶಾಲೆಗೆ ಹಾಕುತ್ತಿದ್ದಾರೆ. ಹೀಗಾಗಿ ವರ್ಗವಾಗಿ ಹೋದ ಅವರ ಜಾಗಕ್ಕೆ ಬೇರೆ ಶಿಕ್ಷಕರನ್ನು ನೇಮಿಸಬೇಕು. ಅದು ಬಿಟ್ಟು ಶಿಕ್ಷಕರೆ ಇಲ್ಲದಿದ್ದರೆ ಮಕ್ಕಳ ಭವಿಷ್ಯ ಏನೆಂಬುದು ಪಾಲಕರ ಚಿಂತೆಗೀಡು ಮಾಡಿದೆ. ಸದ್ಯ 9 ಶಿಕ್ಷಕರ ಕೊರತೆಯಿದೆ. ಶೀಘ್ರವೇ ಶಿಕ್ಷಕರನ್ನು ನೇಮಿಸದೆ ಹೋದರೆ ಪಾಲಕರು ಶಿಕ್ಷಣ ಇಲಾಖೆ ಎದುರು ಪ್ರತಿಭಟನೆ ನಡೆಸುತ್ತೇವೆ ಎಂದು ಕೆಲ ಪಾಲಕರು ತಿಳಿಸಿದ್ದು, ಕೂಡಲೆ ಶಿಕ್ಷಕರನ್ನು ನೇಮಕ ಮಾಡಿ ಮಾದರಿ ಶಾಲೆಯೂ ತಾಲೂಕಿನ ಇತರೆ ಶಾಲೆ ಗಳಿಗೆ ಮಾದರಿಯಾಗಿರಬೇಕು ಎಂದು ಪಾಲಕರು ಆಗ್ರಹಿಸಿದ್ದಾರೆ. ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ಗಮನ ಹರಿಸಿ ಕೂಡಲೇ ಶಾಸಕರ ಮಾದರಿ ಶಾಲೆಗೆ ಶಿಕ್ಷಕರನ್ನು ನೇಮಕ ಮಾಡಬೇಕು. ಇಲ್ಲದಿದ್ದರೆ ಪಾಲಕರು ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.

ಶಿಕ್ಷಕರ ಕೊರತೆ ಬಗ್ಗೆ ಬಿಇಒ ಅವರ ಗಮನಕ್ಕೆ ತರಲಾಗಿದೆ. ಸದ್ಯಕ್ಕೆ ಐದು ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿ ಎಂದು ಸೂಚಿಸಿದ್ದಾರೆ. ಕಳೆದ ವರ್ಷ ಕರ್ತವ್ಯ ನಿರ್ವಹಿಸಿದ ಅತಿಥಿ ಶಿಕ್ಷಕರಿಗೆ ನಾಳೆಯಿಂದಲೇ ಬನ್ನಿ ಎಂದು ತಿಳಿಸಿದ್ದೇನೆ.
●ವಿನೋದ ನಾಯ್ಕ, ಶಾಲೆ ಮುಖ್ಯೋಪಾಧ್ಯಾಯ

ಟಾಪ್ ನ್ಯೂಸ್

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

Desi Swara: ವೀರಶೈವವು ಬಸವಪೂರ್ವ ಯುಗದ ಸನಾತನ ಧರ್ಮ

Desi Swara: ವೀರಶೈವವು ಬಸವಪೂರ್ವ ಯುಗದ ಸನಾತನ ಧರ್ಮ

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಗಾದೆ ಮಾತು ಹೇಳಿದರೆ ಕೇಳಬೇಕಮ್ಮಾ…

Desi Swara: ಗಾದೆ ಮಾತು ಹೇಳಿದರೆ ಕೇಳಬೇಕಮ್ಮಾ…

Desi Swara: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ

Desi Swara: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Untitled-1

Bengaluru: ಬೆಂಕಿ ಅವಘಡ; 6 ಕಾಲೇಜು ಬಸ್‌ಗಳು ಸುಟ್ಟು ಕರಕಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.