Kulageri Cross; ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಬಸ್ಗಳನ್ನ ನಿಲ್ಲಿಸಿ ಪ್ರತಿಭಟನೆ
ಪ್ರಾಥಮಿಕ ಆರೋಗ್ಯ ಕೇಂದ್ರ ಬಳಿ ಸಾರಿಗೆ ಬಸ್ ನಿಲ್ಲಿಸುತ್ತಿಲ್ಲ ಎಂದು ಗ್ರಾಮಸ್ಥರಿಂದ ಪ್ರತಿಭಟನೆ
Team Udayavani, Jun 10, 2024, 7:07 PM IST
ಕುಳಗೇರಿ ಕ್ರಾಸ್: ಇಲ್ಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಸಾರಿಗೆ ಬಸ್ ಪ್ರಾಥಮಿಕ ಆರೋಗ್ಯ ಕೇಂದ್ರ ಬಳಿ ನಿಲ್ಲಿಸುತ್ತಿಲ್ಲ ಎಂದು ಖಾನಾಪೂರ ಎಸ್ಕೆ ಗ್ರಾಮ ಸೇರಿದಂತೆ ಸುತ್ತ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಬಸ್ಗಳನ್ನ ನಿಲ್ಲಿಸಿ ದಿಢೀರ್ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಪಂ ಸದಸ್ಯ ಶೇಖಪ್ಪ ಪವಾಡಿನಾಯ್ಕರ್ ನಮ್ಮ ಗ್ರಾಮಸ್ಥರು ಬಸ್ ನಿಲುಗಡೆಗಾಗಿ ಸುಮಾರು ನಾಲ್ಕೈದು ವರ್ಷಗಳಿಂದ ಹೋರಾಡುತ್ತಿದ್ದಾರೆ. ಬಸ್ ನಿಲ್ಲಿಸುವಂತೆ ಸಾರಿಗೆ ಅಧಿಕಾರಿಗಳು ಆದೇಶ ಮಾಡಿದ್ದಾರೆ ಆದರೂ ಬಸ್ ಚಾಲಕರು ಪ್ರಯಾಣಿಕರ ಜೊತೆ ಸಹಕರಿಸದೆ ಬಸ್ ನಿಲ್ಲಿಸದೇ ತೆರಳುತ್ತಿದ್ದಾರೆ. ಈ ಕುರಿತು ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದೇವೆ ಆದರೂ ಏನೂ ಪ್ರಯೋಜನವಾಗಿಲ್ಲ ಎಂದು ಆರೋಪಗಳ ಸುರಿಮಳೆ ಸುರಿಸಿದರು.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಪೊಲೀಸರು ಮನವೊಲಿಕೆಗೆ ಎಷ್ಟೇ ಪ್ರಯತ್ನಿಸಿದರೂ ಒಪ್ಪದ ಗ್ರಾಮಸ್ಥರು ಬಸ್ ನಿಲ್ಲಿಸುವವರೆಗೂ ನಮ್ಮ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದರು.
ದಿಢೀರ್ ಪ್ರತಿಭಟನೆ ಕೈಗೊಂಡಿದ್ದರಿಂದ ನೂರಾರು ವಾಹನಗಳು ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಲ್ಲತೊಡಗಿದವು ಪ್ರಯಾಣಿಕರು ತೊಂದರೆ ಅನುಭವಿಸಿದರು. ವಿಕೋಪಕ್ಕೆ ಹೋಗುವುದನ್ನ ಗಮನಿಸಿದ ಪೊಲೀಸರು ಮೇಲಾಧಿಕಾರಿಗಳ ಗಮನಕ್ಕೆ ತಂದರು.
ನಂತರ ಸ್ಥಳಕ್ಕೆ ಆಗಮಿಸಿದ ಬಾದಾಮಿ ಪಿಎಸ್ಐ ವಿಠಲ್ ನಾಯಕ್ ಪ್ರತಿಭಟನಾಕಾರರನ್ನು ಮನವೊಲಿಸಿ ಪರಿಸ್ಥಿತಿ ತಿಳಿಗೊಳಿಸಿದರು. ನಂತರ ಗ್ರಾಮಸ್ಥರ ಜೊತೆ ಮಾತನಾಡಿ ತೊಂದರೆಗಳನ್ನ ಆಲಿಸಿದರು. ಡಿಪೋ ಮ್ಯಾನೇಜರ್ ಜೊತೆ ಮಾತನಾಡಿ ಇಲ್ಲಿ ಆರೋಗ್ಯ ಕೇಂದ್ರ ಇರುವುದರಿಂದ ರೋಗಿಗಳಿಗೆ ತೊಂದರೆಯಾಗುತ್ತದೆ ತಾವು ಬಸ್ ನಿಲ್ಲಿಸುವಂತೆ ಕ್ರಮಕೈಗೊಳ್ಳಬೇಕು ಎಂದು ತಿಳಿಹೇಳಿದರು.
ಅದಕ್ಕೆ ಸ್ಪಂದಿಸಿದ ಡಿಪೋಮ್ಯಾನೇಜರ್ ನಮ್ಮ ಜಿಲ್ಲೆಯ ಘಟಕಗಳಿಂದ ಬರುವ ಎಲ್ಲ ಬಸ್ ನಿಲ್ಲಿಸುವಂತೆ ಇಂದಿನಿಂದಲೇ ಆದೇಶಿಸುತ್ತಿದ್ದೇನೆ ಎಂದು ಹೇಳಿದರು
ಪ್ರತಿಭಟನೆಗೆ ಕಾರಣ: ಹೆರಿಗೆಗಾಗಿ ಆಸ್ಪತ್ರೆಗೆ ಬರುತ್ತಿದ್ದ ಮಹಿಳೆಯೊಬ್ಬರು ಎಷ್ಟೇ ಅಂಗಲಾಚಿ ಬೇಡಿಕೊಂಡರು ಸಾರಿಗೆ ಬಸ್ ಚಾಲಕ ನಿಲ್ಲಿಸಿಲ್ಲ. ದಾರಿಯಲ್ಲೇ ಆ ಮಹಿಳೆಯ ಹೆರಿಗೆಯಾಯಿತು ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
Bagalkote: ಆನ್ಲೈನ್ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ
ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ
ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.