![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 10, 2024, 8:35 PM IST
ದೋಹಾ(ಕತಾರ್): ಕೊಲ್ಲಿ ರಾಷ್ಟ್ರಗಳಲ್ಲೊಂದು ಪುಟ್ಟ ದೇಶ, ಅದರ ರಾಜಧಾನಿಯಲ್ಲೊಂದು ಚಿಕ್ಕ ಜಾಗದಲ್ಲಿ ಒಳಾಂಗಣದಲ್ಲಿ ಮಳಿಗೆ. ಮಳಿಗೆಯ ಹೊರಗಿನ ಮಾರುಕಟ್ಟೆ ಪ್ರದೇಶದಲ್ಲಿ 36°ಸೆ ತಾಪಮಾನ, ಒಳಗೆ ಹವಾನಿಯಂತ್ರಿತ ವಾತಾವರಣ, ವಿಶೇಷವಾಗಿ ಹಣ್ಣಿನ ರಾಜನಿಗೆ ಈ ಸಿದ್ಧತೆ.
50ಕ್ಕೂ ಹೆಚ್ಚು ಅಂಗಡಿಗಳು, ಸುಮಾರು 25 ಮಾರಾಟಗಾರರು, ಎರಡು ವಾರದ ಸಂತೆ ಎಂದೇ ಹೇಳಬಹುದು. ಪ್ರತಿದಿನಕ್ಕೆ ಸಾವಿರಾರು ಜನರು ಬಂದು ಆನಂದಿಸಿ, ಸ್ವಾದಿಸಿ, ಹೋಗುತ್ತಿರುವರು. ಇದೇ ಕತಾರಿನ ದೋಹಾದಲ್ಲಿರುವ ಸೂಕ್ ವಾಕಿಫ್ ನಲ್ಲಿ ನಡೆದ ಮಾವಿನ ಮೇಳ.
ರಾಜಪುರಿ, ತೂತಪುರಿ, ಬಾದಾಮಿ, ನಾಟಿ, ಸಿಂಧೂರ ಇನ್ನೂ ಅನೇಕ ತಳಿಗಳ ಮಾವಿನ ಹಣ್ಣುಗಳ ಸುವಾಸನೆ ತುಂಬಿದ ಈ ಒಳಾಂಗಣ ಪ್ರದೇಶದಲ್ಲಿ, ಮಾವಿನ ಹಣ್ಣಿನ ರಸ, ಮಾವಿನಕಾಯಿ ಜೊತೆಗೆ ಉಪ್ಪು ಖಾರ, ಮಾವಿನ ಉಪ್ಪಿನಕಾಯಿ, ಮಾವಿನ ಐಸ್ ಕ್ರೀಮ್, ಮಾವಿನ ಫಲೂದ, ಮಾವಿನ ಲಸ್ಸಿ ಹೀಗೆ ವೈವಿಧ್ಯಮಯ ರುಚಿಕರ ರಸಭರಿತ ಮಾವಿನ ತಿಂಡಿ ಮತ್ತು ಪಾನಿಯಗಳು ಎಲ್ಲರನ್ನೂ ಆಕರ್ಷಿಸಿತು.
ಒಂದೆಡೆ ಸುಪ್ರಸಿದ್ಧ ವಾಣಿಜ್ಯ ಮಳಿಗೆಗಳ ಸಾಲಾಗಿ ಇದ್ದರೆ ಇನ್ನೊಂದೆಡೆ ಪ್ರಸಿದ್ಧ ಉಪಹಾರ ಕೇಂದ್ರಗಳ ಅಂಗಡಿ ಮುಂಗಟ್ಟುಗಳು ಇದ್ದವು, ಮತ್ತೊಂದೆಡೆ ನೇರ ಮಾರಾಟಗಾರರ (ಹೋಲ್ಸೇಲ್) ಮಳಿಗೆಗಳು ಇದ್ದವು. ಭಾರತ , ಕತಾರ್ , ಶ್ರೀಲಂಕಾ , ಬಾಂಗ್ಲಾದೇಶ, ಫಿಲಿಪಿನ್ಸ್ ಇನ್ನೂ ಹಲವು ದೇಶದ ಜನರು ಬಂದು ಈ ಮಾವಿನ ಮೇಳದಲ್ಲಿ ಹಣ್ಣಿನ ಯಾವುದಾದರೂ ಒಂದು ರುಚಿಯನ್ನು ಸೇವಿಸಿ ಹೋಗಿರುವುದು
ನಿಜವಾಗಲೂ ಅದ್ಭುತ ದೃಶ್ಯವಲ್ಲವೇ? ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಕೇರಳ, ಮಧ್ಯಪ್ರದೇಶ, ಗೋವಾ ಇನ್ನಿತರ ರಾಜ್ಯಗಳಿಂದ ಆಮದು ತರಿಸಿದ ಮಾವಿನ ಹಣ್ಣುಗಳು. ಕತರಿನ ಭಾರತೀಯ ದೂತಾವಾಸದ ನೇತೃತ್ವದಲ್ಲಿ ಐಬಿಪಿಸಿ (ಭಾರತೀಯ ವ್ಯವಹಾರ ಹಾಗೂ ವೃತ್ತಿ ನಿರತ ಮಂಡಳಿಯ) ಸಹಯೋಗದೊಂದಿಗೆ ಏರ್ಪಡಿಸಿದ್ದ ಎರಡು ವಾರಗಳ ಮಾವಿನ ಮೇಳವು, ದಿನಾಂಕ 8 ಜೂನ್ 2024ರಂದು ಸಂಪನ್ನಗೊಂಡಿತು. ನಿಜಕ್ಕೂ ಅದ್ದೂರಿ ಯಶಸ್ಸು ಕಂಡದ್ದು ಹಣ್ಣಿನ ರಾಜನೆ!
ಈ ಮೇಳವನ್ನು ಆಯೋಜಿಸಲು ಹಲವು ಸಂಘ ಸಂಸ್ಥೆಗಳು ಕೈಜೋಡಿಸಿದ್ದವು. ಅದರಲ್ಲಿ ಪ್ರಮುಖವಾದದು ಕತಾರಿನ ಭಾರತೀಯ ಸಂಸ್ಕೃತಿಕ ಕೇಂದ್ರ (ಐಸಿಸಿ). ಪ್ರತ್ಯೇಕವಾಗಿ ಐಸಿಸಿ ಉಪಾಧ್ಯಕ್ಷರಾದ ಕರ್ನಾಟಕ ಮೂಲದವರಾದ ಶ್ರೀ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಕತಾರಿನ ಹಲವಾರು ಅಧಿಕಾರಿಗಳು, ಭಾರತೀಯ ರಾಜದೂತವಾಸದ ಅಧಿಕಾರಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಮಳಿಗೆಗಳು ಹಾಗೂ ಉಪಹಾರ ಕೇಂದ್ರಗಳ ಮುಖ್ಯಸ್ಥರೊಂದಿಗೆ ಚರ್ಚಿಸಿ, ಸಮಾಲೋಚಿಸಿ, ಈ ಬೃಹತ್ ಗಾತ್ರದ ಮಾವಿನ ಮೇಳವನ್ನು ಆಯೋಜಿಸಲು ಭಾಗಿಯಾಗಿ, ಯಶಸ್ಸಿಗೆ ಕಾರಣಕರ್ತರುಗಳಲ್ಲಿ ಒಬ್ಬರಾಗಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.