Ullal ಬೋಳಿಯಾರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ: ಐವರ ಬಂಧನ

ಮಸೀದಿ ಎದುರು ಘೋಷಣೆ; ಐವರ ಮೇಲೆ ಪ್ರಕರಣ ದಾಖಲು

Team Udayavani, Jun 10, 2024, 10:06 PM IST

Ullal ಬೋಳಿಯಾರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ: ಐವರ ಬಂಧನ

ಉಳ್ಳಾಲ: ರವಿವಾರ ರಾತ್ರಿ ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದು. ಮಸೀದಿಯ ಎದುರು ಘೋಷಣೆ ಕೂಗಿದ ವಿಚಾರದಲ್ಲಿ ಐವರು ಬಿಜೆಪಿ ಕಾರ್ಯಕರ್ತರ ವಿರುದ್ಧವೂ ಕೇಸು ದಾಖಲಾಗಿದೆ.

ಚೂರಿ ಇರಿತಕ್ಕೆ ಸಂಬಂಧಿಸಿದಂತೆ ಬೋಳಿಯಾರು ನಿವಾಸಿಗಳಾದ ಶಾಕೀರ್‌ (28), ಅಬ್ದುಲ್‌ ರಜಾಕ್‌ (40), ಅಬೂಬಕ್ಕರ್‌ ಸಿದ್ದಿಕ್‌ (35), ಸವಾದ್‌ (18) ಹಾಗೂ ಹಫೀಝ್ (24) ಬಂಧಿತ ಆರೋಪಿಗಳು. ಸಿಸಿ ಟಿವಿ ದೃಶ್ಯಗಳ ಆಧಾರದಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಮಸೀದಿ ಎದುರು ಪ್ರಚೋದನಕಾರಿ ಘೋಷಣೆ ಕೂಗಿದ ಆರೋಪದಡಿ ಸುರೇಶ್‌, ವಿನಯ್‌, ಸುಭಾಷ್‌, ರಂಜಿತ್‌ ಹಾಗೂ ಧನಂಜಯ್‌ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಬೋಳಿಯಾರ್‌ ಜುಮ್ಮಾ ಮಸೀದಿ ಅಧ್ಯಕ್ಷ ಪಿ.ಕೆ. ಅಬ್ದುಲ್ಲ ನೀಡಿದ ದೂರಿನಡಿ ಎಫ್‌ಐಆರ್‌ ದಾಖಲಾಗಿದೆ. ಹೊಟ್ಟೆಗೆ ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದ ಹರೀಶ್‌ ಧರ್ಮನಗರ ಅವರಿಗೆ ರವಿವಾರ ರಾತ್ರಿಯೇ ಆಪರೇಷನ್‌ ನಡೆಸಿದ್ದು, ತೀರ್ವ ನಿಗಾ ಘಟಕದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಬೆನ್ನಿಗೆ ಚೂರಿ ಇರಿತಕ್ಕೊಳಗಾದ ನಂದಕುಮಾರ್‌ (24) ಚೇತರಿಸಿಕೊಳ್ಳುತ್ತಿದ್ದು, ಹಲ್ಲೆಗೊಳಗಾದ ಕೃಷ್ಣ ಕುಮಾರ್‌ ಹೊರ ರೋಗಿಯಾಗಿ ಚೆಕಿತ್ಸೆ ಪಡೆದಿದ್ದಾರೆ.

ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಸರಕಾರ ಪ್ರಮಾಣ ವಚನ ಸ್ವೀಕಾರ ಹಿನ್ನಲೆಯಲ್ಲಿ ರವಿವಾರ ಉಳ್ಳಾಲ ತಾಲೂಕಿನಾದ್ಯಂತ ವಿಜಯೋತ್ಸವ ಆಚರಿಸಿದ್ದು, ಬೋಳಿಯಾರು ಗ್ರಾಮ ಸಮಿತಿಯ ಆಶ್ರಯದಲ್ಲಿಯೂ ಧರ್ಮನಗರದಿಂದ ಬೋಳಿಯಾರು ಮಾರ್ಗವಾಗಿ ಚೇಳೂರುವರೆಗೆ ತಿರುಗಿ ಬೋಳಿಯಾರ್‌ನಲ್ಲಿ ವಿಜಯೋತ್ಸವ ಸಮಾರೋಪ ನಡೆದಿತ್ತು. ಬೋಳಿಯಾರ್‌ ಮಸೀದಿ ಎದುರು ಡಿಜೆ ಹಾಕಿ ಜಯಘೋಷ ಮಾಡಿ ತೆರಳಿದ್ದ ಮೆರವಣಿಗೆ ಮುಗಿದ ಬಳಿಕ ಬೈಕ್‌ನಲ್ಲಿ ಆಗಮಿಸಿದ್ದ ತಂಡ ಮಸೀದಿ ಎದುರು ಭಾರತ್‌ ಮಾತಾಕೀ ಜೈ ಎಂದು ಇನ್ನೊಮ್ಮೆ ಜಯಘೋಷ ಹಾಕಿದ್ದರು.

ಈ ಸಂದರ್ಭದಲ್ಲಿ ಅಲ್ಲೇ ಇದ್ದ ತಂಡವೊಂದು ಬೈಕ್‌ ಸವಾರರನ್ನು ಅಟ್ಟಾಡಿಸಿತ್ತು. ಇದೇ ಘಟನೆಯ ಮುಂದುವರಿದ ಭಾಗವಾಗಿ ಹರೀಶ್‌ ಮತ್ತಿಬ್ಬರು ಚಲಾಯಿಸುತ್ತಿದ್ದ ಬೈಕ್‌ ಮಸೀದಿಯಿಂದ 800 ಮೀಟರ್‌ ದೂರವಿರುವ ಬಾರೊಂದರ ಪಕ್ಕ ನಿಂತಿದ್ದಾಗ ಒಂದು ತಂಡ ಏಕಾಏಕಿಯಾಗಿ ನುಗ್ಗಿ ಬೈಕ್‌ನಲ್ಲಿ ಮೂವರನ್ನು ಎಳೆದಾಡಿಕೊಂಡು ಇಬ್ಬರಿಗೆ ಚೂರಿಯಿಂದ ಇರಿದು ಓರ್ವನಿಗೆ ಹಲ್ಲೆ ನಡೆಸಿ ಪರಾರಿಯಾಗಿತ್ತು.

ತಡರಾತ್ರಿ ಸ್ಟೇಷನ್‌ ಎದುರು ಪ್ರತಿಭಟನೆ
ಚೂರಿಯಿಂದ ಇರಿದ ಆರೋಪಿಗಳನ್ನು ತತ್‌ಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿ ಕೊಣಾಜೆ ಪೊಲೀಸ್‌ ಠಾಣೆಯ ಎದುರು ಬಿಜೆಪಿ ಕಾರ್ಯಕರ್ತರರು ಪ್ರತಿಭಟನೆ ನಡೆಸಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಬಿಜೆಪಿ ಮುಖಂಡರು ಠಾಣೆಗೆ ಆಗಮಿಸಿ ಪೊಲೀಸ್‌ ಕಮಿಷನರ್‌ ಅವರೊಂದಿಗೆ ಮಾತುಕತೆ ನಡೆಸಿ ಆರೋಪಿಗಳನ್ನು ಬಂಧಿಸಿದ ಭರವಸೆ ನೀಡಿದ ಬಳಿಕ ಕಾರ್ಯಕರ್ತರು ಪ್ರತಿಭಟನೆಯನ್ನು ನಿಲ್ಲಿಸಿದರು.

ಬೋಳಿಯಾರ್‌ನಲ್ಲಿ ಬಿಗಿ ಬಂದೋಬಸ್ತ್
ಘಟನೆ ನಡೆದ ಬೋಳಿಯಾರ್‌ನಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಮಸೀದಿ ಸೇರಿದಂತೆ ಬೋಳಿಯಾರ್‌ ಜಂಕ್ಷನ್‌ನಲ್ಲಿ ಕೆಎಸ್‌ಆರ್‌ಪಿ, ಸಿಆರ್‌ಪಿ ಮತ್ತು ಕೊಣಾಜೆ ಪೊಲೀಸರು ಬಿಗಿ ಬಂದೋಬಸ್ತ್ ಹಾಕಿದ್ದರು.
ಚೂರಿಯಿಂದ ಇರಿತಕ್ಕೊಳಗಾದ ಗಾಯಾಳುಗಳ ಆರೋಗ್ಯ ವಿಚಾರಿಸಲು ಆರ್‌ಎಸ್‌ಎಸ್‌ ಮುಖಂಡ ಡಾ| ಕಲ್ಲಡ್ಕ ಪ್ರಭಾಕರ ಭಟ್‌, ಸಂಸದ ಬ್ರಿಜೇಶ್‌ ಚೌಟ ಆಸ್ಪತ್ರೆಗೆ ಭೇಟಿ ನೀಡಿದರು.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.