Highway ಬದಿಯ ಮಣ್ಣು ಸವಕಳಿಗೆ ಹುಲ್ಲು ಆಸರೆ! 48.50 ಕಿ.ಮೀ. ಮಧ್ಯೆ 20 ಕಡೆ ಸ್ಥಳ ಗುರುತು

ಬಿ.ಸಿ.ರೋಡು-ಅಡ್ಡಹೊಳೆ ಭಾಗದಲ್ಲಿ ವಿನೂತನ ಪ್ರಯೋಗ

Team Udayavani, Jun 11, 2024, 7:30 AM IST

Highway ಬದಿಯ ಮಣ್ಣು ಸವಕಳಿಗೆ ಹುಲ್ಲು ಆಸರೆ! 48.50 ಕಿ.ಮೀ. ಮಧ್ಯೆ 20 ಕಡೆ ಸ್ಥಳ ಗುರುತು

ಬಂಟ್ವಾಳ: ಬಹುಭಾರದ ವಾಹನಗಳು ಸಾಗುವ ರಾಷ್ಟ್ರೀಯ ಹೆದ್ದಾರಿಗಳ ಬದಿ ಜರಿಯದಂತೆ ಮತ್ತು ಧಾರಣ ಸಾಮರ್ಥ್ಯವನ್ನು ಕಾಪಿಟ್ಟು ಕೊಳ್ಳುವ ಉದ್ದೇಶದಿಂದ ಹೆದ್ದಾರಿ ಬದಿಯಲ್ಲಿ ಹುಲ್ಲು ನಾಟಿ ಮಾಡುವ ವಿನೂತನ ಪ್ರಯೋಗವೊಂದು ಬಂಟ್ವಾಳದಲ್ಲಿ ನಡೆಯುತ್ತಿದೆ!

ಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿಯ ಬಿ.ಸಿ.ರೋಡು -ಪೆರಿಯ ಶಾಂತಿ ಮಧ್ಯೆ 48.50 ಕಿ.ಮೀ. ಭಾಗವನ್ನು ಕೆಎನ್‌ಆರ್‌ ಕಂಪೆನಿ ಅಭಿವೃದ್ಧಿಪಡಿಸುತ್ತಿದೆ. ಈ ಮಧ್ಯೆ ಅಧಿಕ ಪ್ರಮಾಣದ ಮಣ್ಣು ತುಂಬಿಸಿರುವ 20
ಕಡೆಗಳಲ್ಲಿ ಈ ರೀತಿ ಹುಲ್ಲು ಬೆಳೆಸಲುಸ್ಥಳ ಗುರುತಿಸಿದ್ದು, ಪಾಣೆಮಂಗಳೂರು ಭಾಗದಲ್ಲಿ ಅದರ ಕೆಲಸವೂ ಆರಂಭಗೊಂಡಿದೆ. ಕರಾವಳಿ ಭಾಗದಲ್ಲಿ ಇಂತಹ ಪ್ರಯೋಗ ಇದೇ ಮೊದಲು.

ತೆಂಗಿನ ನಾರಿನ ಮ್ಯಾಟ್‌
ಹುಲ್ಲು ಬೆಳೆಸುವ ಗುತ್ತಿಗೆಯನ್ನು ತಮಿಳುನಾಡು ಮೂಲದ ಸಂಸ್ಥೆಗೆ ವಹಿಸಲಾಗಿದ್ದು, ಕಾರ್ಮಿಕರು ಬಿ.ಸಿ.ರೋಡು ಸರ್ಕಲ್‌ನಿಂದ ಮುಂದಕ್ಕೆ ಪಾಣೆಮಂಗಳೂರು ಭಾಗಕ್ಕೆ ಕಾಂಕ್ರೀಟ್‌ ಕಾಮಗಾರಿ ಪೂರ್ಣಗೊಂಡಲ್ಲಿ ತೆಂಗಿನ ನಾರಿನ ಮ್ಯಾಟ್‌ಗಳನ್ನು ಜೋಡಿಸಿ ಹುಲ್ಲು ನೆಡುತ್ತಿದ್ದಾರೆ. ಅಲ್ಲಿ ವಾಹನಗಳು ರಸ್ತೆಯಿಂದ ಕೆಳಕ್ಕೆ ಜಾರದಂತೆ ತಡೆಯಲು ಮೆಟಲ್‌ ಬೀಮ್‌ ಹೆವಿ ಗಾರ್ಡ್‌ಗಳನ್ನೂ ಅಳವಡಿಸಲಾಗಿದೆ.

10 ವರ್ಷಗಳ ನಿರ್ವಹಣೆ
ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡರೂ ಗುತ್ತಿಗೆ ಕಂಪೆನಿ ಯು 10 ವರ್ಷಗಳ ಕಾಲ ಇಲ್ಲೇ ಇದ್ದು, ಹೆದ್ದಾರಿಯ ನಿರ್ವಹಣೆ ಮಾಡಲಿದೆ. ಹೀಗಾಗಿ ಪ್ರಸ್ತುತ ನೆಟ್ಟಿರುವ ಹುಲ್ಲು ಎತ್ತರಕ್ಕೆ ಬೆಳೆದಾಗ ಕಟಾವು ಮಾಡಿ ಮತ್ತೆ ಸೊಂಪಾಗಿ ಬೆಳೆಯುವಂತೆ ನಿರ್ವಹಣೆ ಮಾಡಲಿದೆ. ಮುಂದೆ ಮತ್ತೆ ಹೆದ್ದಾರಿ ನಿರ್ವಹಣೆಯ ಟೆಂಡರ್‌ ಕರೆದು ಆಗಿನ ಸಂಸ್ಥೆಯು ಹುಲ್ಲು ಬೆಳೆದಿರುವ ಪ್ರದೇಶದ ನಿರ್ವಹಣೆ ಮಾಡಬೇಕಿದೆ ಎನ್ನಲಾಗಿದೆ.

ಪರಿಣಾಮ ಏನು?
ಲಾವಂಚ ಮಾದರಿಯ ಈ ಹುಲ್ಲು ಹೆಚ್ಚಿನ ಎತ್ತರಕ್ಕೆ ಬೆಳೆಯಲಿದ್ದು ಬೇರುಗಳು ವಿಸ್ತಾರವಾಗಿ ಹರಡಿ ಮಣ್ಣನ್ನು ಹಿಡಿದಿಟ್ಟುಕೊಳ್ಳುವುದರಿಂದ ಮಣ್ಣು ಜರಿಯುವ ಅಥವಾ ನೀರಿನಲ್ಲಿ ಕೊಚ್ಚಿಹೋಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಜತೆಗೆ ಹೆದ್ದಾರಿ ಬದಿಯ ಸೌಂದರ್ಯವೂ ವೃದ್ಧಿಸಲಿದೆ.

ಮಣ್ಣು ಕುಸಿಯದಂತೆ ಕಾಪಾಡುವ ಜತೆಗೆ ರಸ್ತೆಯ ಸಾಮರ್ಥ್ಯ ಕಾಪಾಡುವ ದೃಷ್ಟಿಯಿಂದ 20 ಕಡೆಗಳಲ್ಲಿ ಈ ರೀತಿ ಹುಲ್ಲು ಬೆಳೆಸಲು ಸ್ಥಳ ಗುರುತಿಸಿದ್ದೇವೆ. ಕೆಲಸದ ಗುತ್ತಿಗೆಯನ್ನು ತಮಿಳುನಾಡು ಮೂಲದವರಿಗೆ ನೀಡಲಾಗಿದ್ದು, ಅಲ್ಲಿನ ಕಾರ್ಮಿಕರು ಹುಲ್ಲಿನ ಮ್ಯಾಟ್‌ಗಳನ್ನು ಜೋಡಿಸುತ್ತಿದ್ದಾರೆ.
– ನಂದಕುಮಾರ್‌ ಸಾರ್ವಜನಿಕ ಸಂಪರ್ಕಾಧಿಕಾರಿ, ಕೆಎನ್‌ಆರ್‌ ಕನ್‌ಸ್ಟ್ರಕ್ಷನ್‌

-ಕಿರಣ್‌ ಸರಪಾಡಿ

ಟಾಪ್ ನ್ಯೂಸ್

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

ತನ್ನಿಂತಾನೆ ಚಲಿಸಿದ ಲಾರಿ; ತಪ್ಪಿದ ಭಾರಿ ಅನಾಹುತ

ತನ್ನಿಂತಾನೆ ಚಲಿಸಿದ ಲಾರಿ; ತಪ್ಪಿದ ಭಾರಿ ಅನಾಹುತ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.