Trasi ; ಎಲೆಕ್ಟ್ರಾನಿಕ್ಸ್ ಶೋರೂಂಗೆ ಬೆಂಕಿ; ಕೋಟ್ಯಂತರ ರೂ. ನಷ್ಟ
Team Udayavani, Jun 10, 2024, 11:09 PM IST
ಕುಂದಾಪುರ: ಇಲ್ಲಿನ ರಾಸ್ಟ್ರೀಯ ಹೆದ್ದಾರಿ 66ರ ತ್ರಾಸಿಯ ಅಂಬಾ ಟಿವಿ ಹಾಗೂ ಹೋಂ ಅಪ್ಲಾಯನ್ಸಸ್ ಶೋರೂಂನಲ್ಲಿ ಆಕಸ್ಮಿಕ ಬೆಂಕಿ ಅವಘಡವಾಗಿದ್ದು, ಕೋಟ್ಯಾಂತರ ರೂ. ನಷ್ಟ ಸಂಭವಿಸಿದ ಘಟನೆ ರವಿವಾರ ರಾತ್ರಿ 10 ಗಂಟೆ ಸುಮಾರಿಗೆ ಸಂಭವಿಸಿದೆ.
ಸುಧಾಕರ ಶೆಟ್ಟಿ ಅವರಿಗೆ ಸೇರಿದ ಮಳಿಗೆ ಇದಾಗಿದ್ದು, ಅಲ್ಲಿ ಇಟ್ಟಿದ್ದ 3 ಲಕ್ಷ ರೂ. ನಗದು ಸಹಿತ ಎಲ್ಲ ಹಾನಿಯಾದ ಸೊತ್ತುಗಳೆಲ್ಲ ಸೇರಿದಂತೆ ಅಂದಾಜು 1.50 ಕೋ.ರೂ.ಗೂ ಮಿಕ್ಕಿ ನಷ್ಟ ಉಂಟಾಗಿದೆ. ರವಿವಾರ ರಾತ್ರಿ 8.30ಕ್ಕೆ ಮಳಿಗೆ ಬಂದ್ ಮಾಡಿ, ಮನೆಗೆ ಹೋಗಿದ್ದು, ಆ ಬಳಿಕ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ರಾತ್ರಿ 10 ಗಂಟೆಯ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಮಳಿಗೆಯ ಕೆಳಗಿನ ಫ್ಲೋರ್ನಲ್ಲಿದ್ದ ಬಹುತೇಕ ಎಲೆಕ್ಟ್ರಾನಿಕ್ ಸೊತ್ತುಗಳು, ಚಯರ್, ಇನ್ನಿತರ ವಸ್ತುಗಳು ಸುಟ್ಟು ಕರಕಲಾಗಿವೆ. ಮೇಲಿನ ಫ್ಲೋರ್ಗೆ ಅಷ್ಟೊಂದು ಪ್ರಮಾಣದ ಹಾನಿಯಾಗದಂತೆ ತಡೆಯುವಲ್ಲಿ ಅಗ್ನಿಶಾಮಕ ದಳದ ತಂಡ ಯಶಸ್ವಿಯಾಗಿದೆ. ಮಳಿಗೆಯಲ್ಲಿ ಒಟ್ಟಾರೆ 2.50 ಕೋ.ರೂ. ಮೌಲ್ಯದ ಸೊತ್ತುಗಳು ದಾಸ್ತಾನಿದ್ದು, ಈ ಪೈಕಿ 1.50 ಕೋ.ರೂ.ಗೂ ಮಿಕ್ಕಿ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ಅಂದಾಜಿಸಲಾಗಿದೆ.
ಮಂಗಳೂರಿನ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಆರ್. ರಂಗನಾಥ್, ಉಡುಪಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಿನಾಯಕ ಕಲ್ಗುಟಿಕರ್ ಘಟನ ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡಿದ್ದಾರೆ.
5 ಗಂಟೆ ನಿರಂತರ ಕಾರ್ಯಾಚರಣೆ
ರಾತ್ರಿ ಸಂಭವಿಸಿದ ಈ ದೊಡ್ಡ ಮಟ್ಟದ ಬೆಂಕಿ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ಬೈಂದೂರು, ಕುಂದಾಪುರ ಹಾಗೂ ಉಡುಪಿಯ 3 ಅಗ್ನಿಶಾಮಕ ದಳದ ವಾಹನಗಳು ಹಾಗೂ ಸಿಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯ ಕೈಗೊಂಡರು. ಕುಂದಾಪುರದ ಅಗ್ನಿಶಾಮಕ ಠಾಣಾಧಿಕಾರಿ ವಿ. ಸುಂದರ್, ಬೈಂದೂರಿನ ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಸಿಬಂದಿಯ ತಂಡದಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು. ರಾತ್ರಿ 10.30ರಿಂದ ಆರಂಭಗೊಂಡ ಕಾರ್ಯಾಚರಣೆ ಸೋಮವಾರ ಬೆಳಗ್ಗಿನ ಜಾವ 3 ಗಂಟೆಯವರೆಗೂ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Udupi: ರಸ್ತೆ ಮಾರ್ಜಿನ್ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.
Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ
Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ
Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫಲ ಬಿಡಬಹುದು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.