R. Ashok; ಗ್ಯಾರಂಟಿಗಳಿಂದ ಕಾಂಗ್ರೆಸ್ಗೆ ಮತ ಬಂದಿಲ್ಲ
Team Udayavani, Jun 10, 2024, 11:45 PM IST
ಬೆಂಗಳೂರು: ಲೋಕಸಭೆ ಚುನಾವಣೆ ಯಲ್ಲಿ ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ಗೆ ಮತ ಬಂದಿಲ್ಲ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ತೆರಿಗೆ ಭಾರದಿಂದ ಜನ ಸುಸ್ತಾಗಿದ್ದಾರೆ. ಕಸಕ್ಕೂ ತೆರಿಗೆ ಹಾಕುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ. ಮುಂದೆ ಹಾಲು, ಅಲ್ಕೋಹಾಲ್, ಬಸ್ ಟಿಕೆಟ್ ದರವನ್ನೂ ಹೆಚ್ಚಿಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಇನ್ನಷ್ಟು ಹೊಸ ತೆರಿಗೆಗಳನ್ನು ವಿಧಿಸಲಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರಕಾರ ಮತಕ್ಕಾಗಿ ಗ್ಯಾರಂಟಿ ಜಾರಿ ಮಾಡಿದ್ದರಿಂದ ಈಗ ಸಾಲ ಮಾಡಿ ಸಂಬಳ ಕೊಡುವ ಪರಿಸ್ಥಿತಿ ಬಂದಿದೆ. ಗ್ಯಾರಂಟಿಗಳಿಂದ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ. ಒಬ್ಬ ಸಚಿವರೂ ಮಳೆ ಹಾನಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸಚಿವರಿರುವ ಕಡೆ ಹಿನ್ನೆಡೆಯಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ
Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.