Lakshmi Hebbalkar ಬಿಜೆಪಿ, ಎಂಇಎಸ್‌ ಒಂದಾಗಿದ್ದರಿಂದ ಕಾಂಗ್ರೆಸ್‌ಗೆ ಸೋಲು


Team Udayavani, Jun 11, 2024, 12:12 AM IST

Lakshmi Hebbalkar ಬಿಜೆಪಿ, ಎಂಇಎಸ್‌ ಒಂದಾಗಿದ್ದರಿಂದ ಕಾಂಗ್ರೆಸ್‌ಗೆ ಸೋಲು

ಬೆಂಗಳೂರು: ಬೆಳಗಾವಿ ಲೋಕಸಭಾ ಚುನಾವಣೆ ಫಲಿತಾಂಶವನ್ನು ಗಮನಿಸಿದರೆ ಮೇಲ್ನೋಟಕ್ಕೆ ಬಿಜೆಪಿ ಹಾಗೂ ಎಂಇಎಸ್‌ ಒಂದಾದಂತೆ ಕಾಣುತ್ತಿದೆ. ಕಳೆದ 25 ವರ್ಷಗಳಿಂದಲೂ ಬೆಳಗಾವಿಯಲ್ಲಿ ಕಾಂಗ್ರೆಸ್‌, ಬಿಜೆಪಿ ಹಾಗೂ ಎಂಇಎಸ್‌ ನಡುವೆ ತ್ರಿಕೋನ ಸ್ಪರ್ಧೆ ಇತ್ತು. ಈ ಬಾರಿ ಹಾಗಿರಲಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಸೋಮವಾರ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿಗೆ ಅನೇಕ ಕಾರಣಗಳಿವೆ. ವಿಧಾನಸಭೆ ವಾತಾವರಣ ಬೇರೆ, ಲೋಕಸಭಾ ಚುನಾವಣೆ ವಾತಾವರಣವೇ ಬೇರೆ. ಚುನಾವಣ ಲೆಕ್ಕಾಚಾರದ ಬಗ್ಗೆ ಹೇಳುವುದಾದರೆ ಒಂದೊಂದು ಕ್ಷೇತ್ರಕ್ಕೆ ಒಂದೊಂದು ದೃಷ್ಟಿಕೋನ ಇರುತ್ತದೆ. ಆದರೆ ಬೆಳಗಾವಿಯಲ್ಲಿ ಕಾಂಗ್ರೆಸ್‌ ಗೆಲುವಿಗೆ ಮೊದಲಿನಿಂದಲೂ ಉತ್ತಮ ವಾತಾವರಣ ಇತ್ತು. ಜನಬೆಂಬಲವೂ ವ್ಯಕ್ತವಾಗಿತ್ತು. ಹೀಗಿದ್ದರೂ ಫಲಿತಾಂಶ ನಮಗೆ ಕೈ ಕೊಟ್ಟಿತು. ಸೋಲನ್ನು ವಿನಯಪೂರ್ವಕವಾಗಿ ಸ್ವೀಕರಿಸುತ್ತೇನೆ ಎಂದರು.

ಕಾಂಗ್ರೆಸ್‌ ಸೋಲಿನ ಬಗ್ಗೆ ಹೈಕಮಾಂಡ್‌ ಪರಾಮರ್ಶೆ ಸಮಿತಿ ರಚಿಸಿರುವ ವರದಿ ಬಗ್ಗೆ ನನಗೆ ಗೊತ್ತಿಲ್ಲ. ರವಿವಾರ ಬೆಳಗಾವಿ ನಾಯಕರ ಭೇಟಿ ವೇಳೆ ಸಿಎಂ ಸಿದ್ದರಾಮಯ್ಯ ಅವರು ನನಗೆ “ಸಾರಿ’ ಎಂದಿರುವುದು ಅವರ ದೊಡ್ಡ ಗುಣ ಎಂದರು.

ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಹೆಚ್ಚು ಸ್ಥಾನ ಗೆಲ್ಲದಿರಬಹುದು. ಆದರೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಜನರ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಸ್ವಾರ್ಥ ಬಿಟ್ಟು ನಮ್ಮ ಸರಕಾರ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದೆ.
-ಲಕ್ಷ್ಮೀ ಹೆಬ್ಬಾಳ್ಕರ್‌,
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ

ಗ್ಯಾರಂಟಿಗಳಿಗೆ ಹಿನ್ನಡೆ ಆಗಿಲ್ಲ. ಕಲ್ಯಾಣ ಕರ್ನಾಟಕದ ಐದು ಸ್ಥಾನಗಳಲ್ಲಿ ನಾವು ಗೆದ್ದಿರುವುದೇ ಗ್ಯಾರಂಟಿಗಳಿಂದ. ಗ್ಯಾರಂಟಿಗಳನ್ನು ಕೊಟ್ಟು, ಅನುಷ್ಠಾನ ಮಾಡಿದ್ದನ್ನು ಬಹಳಷ್ಟು ಕಡೆ ಪ್ರತಿ ಮನೆಗೆ ಹೋಗಿ ಮನದಟ್ಟು ಮಾಡುವಲ್ಲಿ ವಿಫ‌ಲರಾಗಿದ್ದೇವೆ ಎನಿಸುತ್ತದೆ. ಆದರೆ ಗ್ಯಾರಂಟಿ ಮುಂದುವರಿಸಬೇಕು ಎಂಬುದು ನಮ್ಮೆಲ್ಲರ ಅಭಿಪ್ರಾಯ.
– ಈಶ್ವರ್‌ ಖಂಡ್ರೆ, ಅರಣ್ಯ ಸಚಿವ

 

ಟಾಪ್ ನ್ಯೂಸ್

2

Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ

Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

2

Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.