![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 11, 2024, 12:31 AM IST
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾದ ಕ್ಷೇತ್ರಗಳ ಬಗ್ಗೆ ಅಧ್ಯಯನಕ್ಕೆ ಬಿಜೆಪಿ ಮುಂದಾಗಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಪಕ್ಷಕ್ಕೆ ಮತ ಕಡಿಮೆಯಾಗಿದೆ ಎಂಬ ಬಗ್ಗೆ ಪಕ್ಷ ವಿಶ್ಲೇಷಣೆ ಆರಂಭಿಸಿದ್ದು, ಕೆಲವು ಜಿಲ್ಲಾಧ್ಯಕ್ಷರ ತಲೆದಂಡ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ಗೆ ಹೋಲಿಸಿದರೆ ಬಿಜೆಪಿಯ ಸಂಖ್ಯಾಬಲ ಹೆಚ್ಚಿದೆ. ಆದರೆ ಒಟ್ಟಾರೆ ಸಾಧನೆ ಕಳೆದ ಬಾರಿಗಿಂತ ಕಳಪೆಯಾಗಿದೆ. ಇದಕ್ಕೆ ಕಾರಣ ಹುಡುಕುವಂತೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೂಚನೆ ನೀಡಿದ್ದು, ಎಲ್ಲ ಜಿಲ್ಲೆ ಹಾಗೂ ತಾಲೂಕುಗಳಿಂದ ಮುನ್ನಡೆಯ ಪ್ರಮಾಣವನ್ನು ಕಲೆ ಹಾಕುವಂತೆ ಸೂಚನೆ ನೀಡಲಾಗಿದೆ.
ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಐದು ಕ್ಷೇತ್ರಗಳು ಹಾಗೂ ಲಿಂಗಾಯತ ಪ್ರಾಬಲ್ಯದ ದಾವಣಗೆರೆ ಹಾಗೂ ಚಿಕ್ಕೋಡಿ ಕಾಂಗ್ರೆಸ್ ವಶವಾಗಿರುವುದರ ಹಿಂದಿನ ಕಾರಣವನ್ನು ತಿಳಿಯುವಂತೆ ಸೂಚನೆ ನೀಡಲಾಗಿದೆ. ಈ ವರದಿ ಬಂದ ಬಳಿಕ ಮತ್ತೂಮ್ಮೆ ರಾಜ್ಯ ಪ್ರವಾಸ ನಡೆಸಲು ವಿಜಯೇಂದ್ರ ನಿರ್ಧರಿಸಿದ್ದಾರೆ.
ಲೋಕಸಭಾ ಚುನಾವಣೆಯ ಬೆನ್ನಲ್ಲೇ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಎದುರಾಗಲಿದೆ. ಹೀಗಾಗಿ ತಳಹಂತದಿಂದ ಪಕ್ಷ ಸಂಘಟನೆ ಮಾಡುವುದ ಕ್ಕಾಗಿ ಪ್ರವಾಸ ನಡೆಸಲಿದ್ದಾರೆ. ಇದೇ ಸಂದರ್ಭದಲ್ಲಿ ಮತ್ತೊಮ್ಮೆ ಪಕ್ಷದ ಪದಾಧಿಕಾರಿ ಪಟ್ಟಿ ಪರಿಷ್ಕರಿಸುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.