Extortion Case: 1ಕೋಟಿ ಸುಲಿಗೆ ಆರೋಪ, ನೂತನ ಸಂಸದ ಪಪ್ಪು ಯಾದವ್ ವಿರುದ್ಧ ಎಫ್ಐಆರ್ ದಾಖಲು
Team Udayavani, Jun 11, 2024, 8:39 AM IST
ಬಿಹಾರ: ಬಿಹಾರದಿಂದ ಹೊಸದಾಗಿ ಚುನಾಯಿತರಾಗಿರುವ ಸಂಸದ ಪೂರ್ಣಿಯಾ ರಾಜೇಶ್ ರಂಜನ್, ಅಲಿಯಾಸ್ ಪಪ್ಪು ಯಾದವ್ ವಿರುದ್ಧ ಹಣ ಸುಲಿಗೆ, ಜೀವ ಬೆದರಿಕೆ ಆರೋಪದ ಮೇಲೆ ಸೋಮವಾರ ಪ್ರಕರಣ ದಾಖಲಿಸಲಾಗಿದೆ.
ಎಫ್ಐಆರ್ನಲ್ಲಿ ಪಪ್ಪು ಯಾದವ್ ಅವರು ಉದ್ಯಮಿಯೊಬ್ಬರಿಂದ 1 ಕೋಟಿ ರೂಪಾಯಿ ಸುಲಿಗೆಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಸುಲಿಗೆ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಉದ್ಯಮಿಗೆ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ದೂರು ನೀಡಿರುವ ಉದ್ಯಮಿ ಪೂರ್ಣಿಯಾದಲ್ಲಿ ಪೀಠೋಪಕರಣ ವ್ಯಾಪಾರ ಮಾಡುತ್ತಾರೆ. ಜೂನ್ 4 ರಂದು ಮತ ಎಣಿಕೆ ವೇಳೆ ಪಪ್ಪು ಯಾದವ್ ತನ್ನ ನಿವಾಸಕ್ಕೆ ಕರೆ ಮಾಡಿ 1 ಕೋಟಿ ನೀಡುವಂತೆ ಕೇಳಿದ್ದರು ಎಂದು ಉದ್ಯಮಿ ಲಿಖಿತ ಅರ್ಜಿಯಲ್ಲಿ ತಿಳಿಸಿದ್ದಾರೆ. 1 ಕೋಟಿ ಕೊಡದಿದ್ದರೆ ಕೊಲೆ ಮಾಡಲಾಗುವುದು. ಮುಂದಿನ 5 ವರ್ಷಗಳ ಕಾಲ ಶಾಂತಿಯುತವಾಗಿ ಬದುಕಬೇಕಾದರೆ ಹಣ ಪಾವತಿಸಬೇಕು ಇಲ್ಲವಾದರೆ ಪೂರ್ಣಿಯವರನ್ನು ಬಿಡಬೇಕು ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲಾಗಿದೆ.
ಉದ್ಯಮಿಯಿಂದ 1 ಕೋಟಿ ರೂ. ಬೇಡಿಕೆ:
ಪೊಲೀಸರಿಗೆ ದೂರು ನೀಡಿದ ಉದ್ಯಮಿ, ಏಪ್ರಿಲ್ 2, 2021 ರಂದು ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಅವರಿಂದ 10 ಲಕ್ಷ ರೂಪಾಯಿ ಕೊಡುವಂತೆ ಬೇಡಿಕೆಯಿಟ್ಟಿದ್ದರು. ಇದಲ್ಲದೆ, 2023 ರಲ್ಲಿ ದುರ್ಗಾ ಪೂಜೆಯ ಸಮಯದಲ್ಲಿ, ವಾಟ್ಸಾಪ್ ಕರೆಯಲ್ಲಿ ಬೆದರಿಕೆ ಮತ್ತು ನಿಂದನೆಯೊಂದಿಗೆ 15 ಲಕ್ಷ ರೂಪಾಯಿ ಮತ್ತು ಎರಡು ಸೋಫಾ ಸೆಟ್ಗಳನ್ನು ಕೇಳಿದ್ದರು ಎಂದು ಉದ್ಯಮಿ ಹೇಳಿದ್ದಾರೆ. ದೂರಿನ ಆಧಾರದ ಮೇಲೆ, ಸಂಸದ ಪಪ್ಪು ಯಾದವ್ ಮತ್ತು ಅವರ ಆಪ್ತ ಅಮಿತ್ ಯಾದವ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 385/504/506/34 ರ ಅಡಿಯಲ್ಲಿ ಪೂರ್ಣಿಯ ಮುಫಾಸಿಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿ ಸಂಸದ ಪಪ್ಪು ಯಾದವ್ ಪ್ರತಿಕ್ರಿಯೆ ನೀಡಿದ್ದು ನನ್ನ ಏಳಿಗೆ ಸಹಿಸಲಾಗದೆ ನನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿ ಕೂಲಂಕುಷವಾಗಿ ತನಿಖೆ ನಡೆಯಬೇಕು ಪೊಲೀಸರ ತನಿಖೆಗೆ ತನ್ನ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿಕೊಂಡಿದ್ದು ತಪ್ಪಿತಸ್ಥರು ಯಾರೆಂದು ಜನತೆಗೆ ಗೊತ್ತಾಗಬೇಕು ಎಂದು ಹೇಳಿದ್ದಾರೆ.
ಪಪ್ಪು ಯಾದವ್ ಇತ್ತೀಚೆಗಷ್ಟೇ ಪೂರ್ಣಿಯಾ ಕ್ಷೇತ್ರದಿಂದ ಗೆದ್ದು ಸಂಸದರಾಗಿದ್ದು, ಸಂಸದರಾದ ತಕ್ಷಣ ಅವರ ವಿರುದ್ಧ ಗಂಭೀರ ಆರೋಪ ಮಾಡಲಾಗಿತ್ತು. ಪಪ್ಪು ಯಾದವ್ ಅವರು ಪೂರ್ಣಿಯಾದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಇದರಲ್ಲಿ ಅವರು 5.67 ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆದರೆ, ಜೆಡಿಯು ಅಭ್ಯರ್ಥಿ 5.43 ಲಕ್ಷ ಮತಗಳನ್ನು ಪಡೆದರು. ಆರ್ಜೆಡಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದ ಬಿಮಾ ಭಾರತಿ ಅವರು ಇಲ್ಲಿಂದ ಕೇವಲ 27,120 ಮತಗಳನ್ನು ಗಳಿಸಲು ಸಾಧ್ಯವಾಯಿತು.
ಇದನ್ನೂ ಓದಿ: Horoscope: ಹೊಟೇಲ್ ಉದ್ಯಮಿಗಳಿಗೆ ಆದಾಯ ವೃದ್ಧಿಯಾಗಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.