T20 Worldcup: ಮೊದಲ ಸುತ್ತಲ್ಲೇ 4 ದೊಡ್ಡ ತಂಡಗಳ ಖೇಲ್‌ ಖತಂ?


Team Udayavani, Jun 11, 2024, 9:18 AM IST

T20 Worldcup: ಮೊದಲ ಸುತ್ತಲ್ಲೇ 4 ದೊಡ್ಡ ತಂಡಗಳ ಖೇಲ್‌ ಖತಂ?

ಈ ಬಾರಿ ಟಿ20 ವಿಶ್ವಕಪ್‌ನಲ್ಲಿ ನೂತನ ತಂಡಗಳಿಗೆ ಅವಕಾಶ ನೀಡಿದ್ದಕ್ಕೆ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಮೊದಲ ಬಾರಿ ಪಂದ್ಯಾವಳಿಯಲ್ಲಿ 20 ತಂಡಗಳು ಭಾಗಿಯಾಗಿದ್ದು, 3 ತಂಡಗಳು ಪದಾರ್ಪಣೆ ಮಾಡಿವೆ. ಬಹುತೇಕ ತಂಡಗಳು ಮೊದಲ ಸುತ್ತಿನಲ್ಲೇ ಹೊರ ಬೀಳಲಿವೆ, ಐಸಿಸಿ ಸಮಯ ವ್ಯರ್ಥ ಮಾಡುತ್ತಿವೆ ಎಂದು ಮಾಜಿ ಕ್ರಿಕೆಟಿಗರು ಹೇಳಿದ್ದರು. ಆದರೆ ಇದೀಗ ಕ್ರಿಕೆಟ್‌ ಶಿಶುಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದು, ದಿಗ್ಗಜ ತಂಡಗಳೇ ಟೂರ್ನಿಯಿಂದ ಹೊರ ಬೀಳುವಂತಾಗಿದೆ. ಸಾಮಾನ್ಯ ತಂಡಗಳ ಉತ್ತಮ ಆಟದಿಂದಾಗಿ ಪಾಕಿಸ್ಥಾನ, ಇಂಗ್ಲೆಂಡ್‌, ನ್ಯೂಜಿಲ್ಯಾಂಡ್‌ ಮತ್ತು ಶ್ರೀಲಂಕಾ ತಂಡಗಳ ಭವಿಷ್ಯ ತೂಗುಯ್ನಾಲೆಯಲ್ಲಿದೆ.

ಇಂಗ್ಲೆಂಡ್‌ನ‌ ಹಾದಿಗೆ ಅಡ್ಡಿಯಾದ ಮಳೆ!
ಇಂಗ್ಲೆಂಡ್‌ ಹಾಲಿ ಚಾಂಪಿಯನ್‌. ಆದರೆ ಈ ಬಾರಿ ಮೊದಲ ಸುತ್ತಿನಲ್ಲೇ ಪಂದ್ಯಾವಳಿಯಿಂದ ಹೊರ ಬೀಳುವ ಭೀತಿಯನ್ನು ಎದುರಿಸುತ್ತಿದೆ. “ಬಿ’ ಗುಂಪಿನ ಇಂಗ್ಲೆಂಡ್‌-ಸ್ಕಾಟ್ಲೆಂಡ್‌ ನಡುವಿನ ಮೊದಲ ಪಂದ್ಯ ಮಳೆ ಯಿಂದ ರದ್ದಾಗಿತ್ತು. ಹೀಗಾಗಿ ಒಂದು ಅಂಕ ಹಂಚಿಕೊಂಡಿತ್ತು. ಆಸ್ಟ್ರೇ ಲಿಯ ವಿರುದ್ಧ 36 ರನ್‌ಸೋಲು ಅನುಭವಿಸಿತು. ಇಂಗ್ಲೆಂಡ್‌ 4ನೇ ಸ್ಥಾನದಲ್ಲಿದೆ.

ಸ್ಕಾಟ್ಲೆಂಡ್‌ 3 ಪಂದ್ಯ ವಾಡಿದ್ದು, 2ರಲ್ಲಿ ಜಯ ಗಳಿಸಿ 5 ಅಂಕ ಪಡೆದು ಮೊದಲ ಸ್ಥಾನದಲ್ಲಿದೆ. ಆಸ್ಟ್ರೇಲಿಯ 2ನೇ ಸ್ಥಾನದಲ್ಲಿದ್ದು, ಎರಡೂ ಪಂದ್ಯ ಗೆದ್ದು 4 ಅಂಕ ಸಂಪಾದಿಸಿದೆ. ಇಂಗ್ಲೆಂಡ್‌ಗೆ 2 ಪಂದ್ಯ ಬಾಕಿಯಿದ್ದು, ಒಮಾನ್‌ ಮತ್ತು ನಮೀಬಿಯಾದ ವಿರುದ್ಧ ಆಡಲಿದೆ. ಇದರಲ್ಲಿ ಇಂಗ್ಲೆಂಡ್‌ ಜಯ ಸಾಧಿಸಿದರೆ ಒಟ್ಟು ಅಂಕ 5ಕ್ಕೆ ಏರಿಲಿದೆ. ಆದರೆ ಈಗಾಗಲೇ 5 ಅಂಕ ಪಡೆದಿರುವ ಸ್ಕಾಟ್ಲೆಂಡ್‌ನ‌ ರನ್‌ರೇಟ್‌ ಉತ್ತಮವಾಗಿದ್ದು, ಇದನ್ನು ಇಂಗ್ಲೆಂಡ್‌ ಮೀರಬೇಕಾಗಿದೆ. ಸ್ಕಾಟ್ಲೆಂಡ್‌ ಮತ್ತು ನಮೀಬಿಯಾ ವಿರುದ್ಧ ಆಸ್ಟ್ರೇಲಿಯ ಸೋಲುವ ಸಾಧ್ಯತೆ ಕಡಿಮೆ ಇರುವುದರಿಂದ ಇಂಗ್ಲೆಂಡ್‌ ಹಾದಿ ಬಹುತೇಕ ಮುಚ್ಚಿದೆ ಎನ್ನಬಹುದು.
ನ್ಯೂಜಿಲ್ಯಾಂಡ್‌ಗೆ ಸಂಕಷ್ಟ

ತಂದೊಡ್ಡಿದ ಅಫ್ಘಾನ್‌ ಸ್ಪಿನ್‌!
ನ್ಯೂಜಿಲ್ಯಾಂಡ್‌ “ಸಿ’ ಗುಂಪಿನಿಂದ ಹೊರ ಬೀಳುವ ಆತಂಕಕ್ಕೆ ಸಿಲುಕಿರುವುದಕ್ಕೆ ಕಾರಣ, ಅಫ್ಘಾನಿಸ್ಥಾನದ ಸ್ಪಿನ್‌ ಮೋಡಿ. ಇದರಿಂದ ಕಿವೀಸ್‌ 84 ರನ್‌ಗಳ ಭಾರೀ ಸೋಲನುಭವಿಸಿತು. ಹೀಗಾಗಿ ತಂಡದ ರನ್‌ರೇಟ್‌ -4.200ಕ್ಕೆ ಇಳಿದಿದೆ. ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇನ್ನೂ 3 ಪಂದ್ಯ ಉಳಿದಿದ್ದರೂ ಒಂದು ಪಂದ್ಯದಲ್ಲಿ ಬಲಿಷ್ಠ ವೆಸ್ಟ್‌ ಇಂಡೀಸ್‌ ಎದುರಾಗಲಿದೆ. .

ಲಂಕೆಯ ಬಾಗಿಲು ಬಂದ್‌?
“ಡಿ’ ಗುಂಪಿನ ಶ್ರೀಲಂಕಾ ಸ್ಥಿತಿಯೂ ಚಿಂತಾ ಜನಕವಾಗಿದೆ. ಅದು ಈಗಾಗಲೇ ದಕ್ಷಿಣ ಆಫ್ರಿಕಾ ಹಾಗೂ ಬಾಂಗ್ಲಾದೇಶದ ವಿರುದ್ಧ ಸೋಲು ಕಂಡಿದೆ. ಗುಂಪಿನಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದ್ದು, -0.777 ರನ್‌ರೇಟ್‌ ಹೊಂದಿದೆ. ಲಂಕಾಗೆ 2 ಪಂದ್ಯಗಳು ಬಾಕಿ ಇವೆ. ಎರಡನ್ನೂ ಗೆದ್ದರೂ ಮುಂದಿನ ಸುತ್ತಿಗೆ ಏರುವುದು ಉಳಿದ ತಂಡಗಳ ಫ‌ಲಿತಾಂಶದ ಮೇಲೆ ನಿರ್ಧಾರವಾಗಲಿದೆ. ಸದ್ಯದ ಮಟ್ಟಿಗೆ ಲಂಕೆಯ ಬಾಗಿಲು ಬಂದ್‌ ಆಗಿದೆ.

ಇದನ್ನೂ ಓದಿ: Mumbai: ಎಂಸಿಎ ಅಧ್ಯಕ್ಷ ಅಮೋಲ್‌ ಕಾಳೆ ನ್ಯೂಯಾರ್ಕ್‌ನಲ್ಲಿ ನಿಧನ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.