BBMP election: ಅಕ್ಟೋಬರ್‌ನಲ್ಲಿ ಬಿಬಿಎಂಪಿ ಚುನಾವಣೆ?


Team Udayavani, Jun 11, 2024, 1:57 PM IST

9

ಬೆಂಗಳೂರು: ಬಿಬಿಎಂಪಿಗೆ ಅಕ್ಟೋಬರ್‌ ತಿಂಗಳಲ್ಲಿ ಚುನಾವಣೆ ನಡೆಸುವುದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಬೆಂಗಳೂರು ಶಾಸಕರ ಸಭೆಯಲ್ಲಿ ಸಹಮತ ದೊರೆತಿದೆ. ಆದರೆ, ಬೆಂಗಳೂರು ವಿಭಜನೆ ವಿಚಾರದಲ್ಲಿ ಮಾತ್ರ ಯಾವುದೇ ಸಹಮತ ಮೂಡಿಲ್ಲದೇ ಇರುವುದರಿಂದ ಮತ್ತೂಮ್ಮೆ ಸಭೆ ನಡೆಯುವ ಸಾಧ್ಯತೆ ಇದೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್‌, ಜಮೀರ್‌ ಅಹ್ಮದ್‌ ಖಾನ್‌, ಶಾಸಕರಾದ ಎನ್‌.ಎ.ಹ್ಯಾರೀಸ್‌, ರಿಜ್ವಾನ್‌ ಅರ್ಷದ್‌, ಯು.ಬಿ.ವೆಂಕಟೇಶ್‌, ಕೃಷ್ಣಪ್ಪ, ಸುದಾಮ್‌ ದಾಸ್‌, ನಾಗರಾಜ್‌ ಯಾದವ್‌, ರಾಜ್ಯಸಭಾ ಸದಸ್ಯರಾದ ಜಿ.ಸಿ.ಚಂದ್ರಶೇಖರ್‌, ಮಾಜಿ ರಾಜ್ಯ ಸಭಾ ಪ್ರೊ.ರಾಜೀವ್‌ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಗೋವಿಂದರಾಜು ಅವರನ್ನು ಒಳಗೊಂಡ ನಿಯೋಗದ ಜತೆಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸುದೀರ್ಘ‌ ಚರ್ಚೆ ನಡೆಸಿದರು.

ನ್ಯಾಯಾಲಯದ ಸೂಚನೆ ಹಿನ್ನೆಲೆಯಲ್ಲಿ ಅಕ್ಟೋಬರ್‌ ಒಳಗಾಗಿ ಚುನಾವಣೆ ನಡೆಸಲೇಬೇಕಾಗುತ್ತದೆ. ಈ ವಿಚಾರವನ್ನು ಇನ್ನು ಮುಂದೂಡುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ, ರಾಜ್ಯ ಸರ್ಕಾರ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲೇಬೇಕಾಗುತ್ತದೆ. ಇಲ್ಲವಾದರೆ ನ್ಯಾಯಾಲಯದ ಕೆಂಗಣ್ಣಿಗೆ ಗುರಿಯಾಗ ಬೇಕಾಗುತ್ತದೆ ಎಂದು ನಿಯೋಗ ಸಿದ್ದರಾಮಯ್ಯ ಅವರ ಗಮನ ಸೆಳೆಯಿತು.

ವಿಭಜನೆ ಪ್ರಸ್ತಾಪ: ಈ ಸಂದರ್ಭದಲ್ಲಿ ಬೆಂಗಳೂರನ್ನು ಆಡಳಿತಾತ್ಮಕವಾಗಿ ವಿಭಜಿಸಿ ಚುನಾವಣೆ ನಡೆಸ ಬೇಕೋ, ಚುನಾವಣೆ ಬಳಿಕ ವಿಭಜನೆ ನಡೆಸ ಬೇಕೋ? ಎಂಬ ಪ್ರಶ್ನೆ ಎದುರಾಯಿತು. ಹೀಗಾಗಿ ಅಡ್ವೊಕೇಟ್‌ ಜನರಲ್‌ ಅವರನ್ನು ಸಭೆಗೆ ಕರೆಸಿ ಅವರ ಅಭಿಪ್ರಾಯ ಪಡೆದುಕೊಳ್ಳಲಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಹಿರಿಯರು ಮೊದಲು ಚುನಾವಣೆ ನಡೆಸಿ ಆ ಬಳಿಕ ವಿಭಜನೆ ನಡೆಸೋಣ ಎಂಬ ಪ್ರಸ್ತಾಪದ ಪರ ನಿಂತರೆ, ಡಿಸಿಎಂ ಡಿ.ಕೆ. ಶಿವಕುಮಾರ್‌ ಯಾವುದಾದರೊಂದು ಸ್ವರೂಪದಲ್ಲಿ ವಿಭಜನೆ ಸೂಕ್ತ ಎಂದು ಪ್ರತಿಪಾದಿಸಿದರು ಎಂದು ತಿಳಿದು ಬಂದಿದೆ.

ಎಷ್ಟು ವಿಭಜನೆ: ವಿಭಜನೆಗೆ ಸಂಬಂಧಪಟ್ಟಂತೆ ಎರಡು ಪ್ರಸ್ತಾಪಗಳು ಈಗಾಗಲೇ ರಾಜ್ಯ ಸರ್ಕಾರದ ಮುಂದೆ ಇದೆ. ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಹಾಗೂ ಕೇಂದ್ರ ಎಂದು 5 ಭಾಗವಾಗಿ ವಿಭಜಿಸಿ ಪ್ರತಿ ಪಾಲಿಕೆಗೆ ತಲಾ 80 ಸದಸ್ಯರು ಆಯ್ಕೆಯಾಗುವ ರೀತಿ ಒಟ್ಟು 400 ಸದಸ್ಯರಿಗೆ ಚುನಾವಣೆ ನಡೆಸುವುದು ಒಂದು ಭಾಗ. ಆಗ ಬೆಂಗಳೂರು ಹೊರವಲಯದಲ್ಲಿದ್ದು ಕೈಗಾರಿಕಾ ಹಬ್‌ಗಳಾಗಿ ಬೆಳೆದಿರುವ ಪ್ರದೇಶಗಳನ್ನು ಸೇರಿಸಿಕೊಳ್ಳಬೇಕೆಂಬ ಪ್ರಸ್ತಾಪ ಇದರಲ್ಲಿದೆ. ಇಲ್ಲವಾದರೆ ಗ್ರೇಟರ್‌ ಬೆಂಗಳೂರು ಎಂದು ಪರಿಗಣಿಸಿ ಬೆಂಗಳೂರಿಗೆ ಮೂರು ಮೇಯರ್‌ಗಳನ್ನು ನೇಮಿಸುವುದು ಇನ್ನೊಂದು ಪ್ರಸ್ತಾಪ. ಈ ಎಲ್ಲ ವಿಚಾರಗಳ ಬಗ್ಗೆ ಸಭೆಯಲ್ಲಿ ಸುದೀರ್ಘ‌ವಾಗಿ ಚರ್ಚೆಯಾಗಿದೆ.

ಆದರೆ, ಯಾವುದೇ ಕಾರಣಕ್ಕೂ ವಿಭಜನೆ ಇತ್ಯಾದಿ ವಿಚಾರಗಳ ಕಾರಣಕ್ಕಾಗಿ ಚುನಾವಣೆ ನಿರ್ಧರಿಸುವುದು ಮತ್ತೆ ನ್ಯಾಯಾಲಯದ ಅಂಗಳಕ್ಕೆ ವರ್ಗಾವಣೆ ಯಾಗುವುದು ಬೇಡ. ಆದಷ್ಟು ಬೇಗ ಬಿಬಿಎಂಪಿಗೆ ಜನಪ್ರತಿನಿಧಿಗಳು ಲಭಿಸುವಂತಾಗಲಿ ಎಂಬ ಆಶಯವನ್ನು ಬಹುತೇಕ ಶಾಸಕರು ವ್ಯಕ್ತಪಡಿಸಿದ್ದಾರೆ. ಎಲ್ಲ ಸಾಧ್ಯತೆಗಳನ್ನು ಮುಕ್ತವಾಗಿಟ್ಟುಕೊಂಡು ಚರ್ಚೆಯ ಬಳಿಕವೇ ನಿರ್ಧಾರ ತೆಗೆದುಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಕ್ಟೋಬರ್‌ನಲ್ಲಿ ಚುನಾವಣೆ ನಡೆಯುವುದು ಪಕ್ಕಾ ಆದರೆ ವಿಭಜನೆ ಸಾಧ್ಯತೆ ಕಡಿಮೆ.

ನಗರದಲ್ಲಿ ಕಾಂಗ್ರೆಸ್‌ ಬಲವೃದ್ಧಿಗೆ ಸಮಿತಿ: ಸಭೆಯಲ್ಲಿ ಬ್ರ್ಯಾಂಡ್‌ ಬೆಂಗಳೂರು ಬಗ್ಗೆಯೂ ಚರ್ಚೆ ನಡೆಸಲಾಗಿದ್ದು, ಬೆಂಗಳೂರು ಸೇರಿ ನಗರ ಪ್ರದೇಶದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತ ಬರದೇ ಇರುವ ಬಗ್ಗೆ ರಾಹುಲ್‌ ಗಾಂಧಿ ಕೇಳಿದ ಪ್ರಶ್ನೆ ಬಗ್ಗೆಯೂ ಚರ್ಚೆ ನಡೆದಿದೆ.

ಬೆಂಗಳೂರು ಬೆಳೆಸಿದ್ದು ಕಾಂಗ್ರೆಸ್‌. ಆದರೆ, ಜನ ಬಿಜೆಪಿಗೆ ಮತ ಹಾಕುತ್ತಾರೆ. ಈ ಬಗ್ಗೆ ನಾವು ಜನರಿಗೆ ಅರಿವು ಮೂಡಿಸಬೇಕು. ಜನರ ಮನಸು ಗೆಲ್ಲಲು ವಿಶೇಷ ಯೋಜನೆ ರೂಪಿಸಿದರೆ ಬಿಬಿಪಿಎಂಪಿ ಚುನಾವಣೆ ಯಲ್ಲೂ ಅನುಕೂಲವಾಗುತ್ತದೆ ಎಂಬ ಪ್ರಸ್ತಾಪಿಸ ಲಾಗಿದೆ. ಇದಕ್ಕಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಹಿರಿ-ಕಿರಿ ನಾಯಕರನ್ನು ಒಳಗೊಂಡ ಸಮಿತಿ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆದಷ್ಟು ಬೇಗ ಈ ಸಮಿತಿ ರಚನೆಯಾಗಲಿದೆ.

ಟಾಪ್ ನ್ಯೂಸ್

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Untitled-1

Bengaluru: ಬೆಂಕಿ ಅವಘಡ; 6 ಕಾಲೇಜು ಬಸ್‌ಗಳು ಸುಟ್ಟು ಕರಕಲು

Bengaluru: ಟ್ರಾಫಿಕ್‌ ಜಾಮ್‌ ಪರಿಹಾರಕ್ಕೆ ಕೇಂದ್ರದ ಮೊರೆ ಹೋದ ರಾಜ್ಯ

Bengaluru: ಟ್ರಾಫಿಕ್‌ ಜಾಮ್‌ ಪರಿಹಾರಕ್ಕೆ ಕೇಂದ್ರದ ಮೊರೆ ಹೋದ ರಾಜ್ಯ

BBMP: ಬಿಬಿಎಂಪಿಯಲ್ಲಿ ಅಕ್ರಮದ ಕುರಿತು ವರದಿ ಕೇಳಿದ ಸಿಎಂ ಕಚೇರಿ

BBMP: ಬಿಬಿಎಂಪಿಯಲ್ಲಿ ಅಕ್ರಮದ ಕುರಿತು ವರದಿ ಕೇಳಿದ ಸಿಎಂ ಕಚೇರಿ

Bengaluru: ಫ್ಲೈಓವರ್‌ನಲ್ಲಿ ಹಿಮ್ಮುಖವಾಗಿ ಕಾರು ಓಡಿಸಿದ ಚಾಲಕನ ಸೆರೆ

Bengaluru: ಫ್ಲೈಓವರ್‌ನಲ್ಲಿ ಹಿಮ್ಮುಖವಾಗಿ ಕಾರು ಓಡಿಸಿದ ಚಾಲಕನ ಸೆರೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

5-kushtagi

Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.