Bangalore Central Prison: ಜೈಲಲ್ಲಿ ರೌಡಿಶೀಟರ್ಗಳ ಮಧ್ಯೆ ಮಾರಾಮಾರಿ
Team Udayavani, Jun 11, 2024, 2:56 PM IST
ಬೆಂಗಳೂರು: ಹಫ್ತಾ ವಸೂಲಿ ಅಥವಾ ಹಳೇ ದ್ವೇಷಕ್ಕೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೇ ರೌಡಿಶೀಟರ್ಗಳಾದ ಕುಳ್ಳ ರಿಜ್ವಾನ್ ಮತ್ತು ಸಾಗರ್ ಗ್ಯಾಂಗ್ಗಳ ನಡುವೆ ಮಾರಾಮಾರಿ ನಡೆದಿದ್ದು, ಈ ಸಂಬಂಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂ.7ರಂದು ಘಟನೆ ನಡೆದ್ದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅಂದು ಸಂಜೆ 6.30ಕ್ಕೆ ಕೇಂದ್ರ ಕಾರಾಗೃಹದ ವಿಚಾರಣಾಧೀನ ಕೈದಿಗಳ ವಿಭಾಗದ ಬ್ಯಾರಕ್ 3 ಮತ್ತು 4 ಎದುರು ಈ ಗಲಾಟೆ ನಡೆದಿದ್ದು, ಈ ಸಂಬಂಧ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ.ಮಲ್ಲಿಕಾರ್ಜುನ್ ನೀಡಿದ ದೂರಿನ ಮೇರೆಗೆ ಪೊಲೀಸರು, ವಿಚಾರಣಾಧೀನ ಕೈದಿಗಳಾದ ವಿಶ್ವನಾಥ, ಮುನಿರಾಜ್, ಜಾಫರ್ ಸಾದಿಕ್, ವಿಶಾಲ್ಗೌಡ, ಟಿಪ್ಪು ಸುಲ್ತಾನ್, ಸೇಂದಿಲ್ ಕುಮಾರ್, ಅಜಯ್ ಸಿಂಗ್, ಕುಮಾರ್, ಇರ್ಷಾದ್ ಪಾಷಾ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಈ ವೇಳೆ ಗಲಾಟೆಯಲ್ಲಿ ಗಾಯಗೊಂಡಿರುವ ವಿಚಾರಣಾಧೀನ ಕೈದಿಗಳಾದ ತೇಜಸ್, ಅಮಿತ್ ಕುಮಾರ್, ಶೇಷಾದ್ರಿ, ಧನುಷ್ಗೆ ಕೇಂದ್ರ ಕಾರಾಗೃಹದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಏನಿದು ಘಟನೆ?: ಜೂ.7ರಂದು ಸಂಜೆ 6.30ಕ್ಕೆ ವಿಚಾರ ಣಾಧೀನ ಕೈದಿಗಳ ವಿಭಾಗದ ಬ್ಯಾರಕ್ 3 ಮತ್ತು 4 ಎದುರು ರೌಡಿ ಕುಳ್ಳ ರಿಜ್ವಾನ್ ಸಹಚರರು ಮತ್ತು ರೌಡಿ ಸಾಗರ್ ಸಹಚರರ ನಡುವೆ ಏಕಾಏಕಿ ಜಗಳ ಶುರುವಾಗಿದೆ. ಪರಸ್ಪರ ಕಲ್ಲಿನಿಂದ ಹಲ್ಲೆ ಮಾಡಿಕೊಂಡಿದ್ದಾರೆ. ಅದನ್ನು ಕಂಡ ಜೈಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಲಘು ಲಾಠಿ ಪ್ರಹಾರ ನಡೆಸಿ ಎರಡೂ ಗುಂಪುಗಳನ್ನು ಚದುರಿಸಿದ್ದಾರೆ. ಗಲಾಟೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಫ್ತಾ ವಸೂಲಿ ವಿಚಾರ ಅಥವಾ ಹಳೇ ದ್ವೇಷಕ್ಕೆ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ.
ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Bengaluru: ಇಬ್ಬರು ಡ್ರಗ್ಸ್ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ
Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.