Amaravati ಆಂಧ್ರಪ್ರದೇಶದ ರಾಜಧಾನಿಯಾಗಲಿದೆ: ಚಂದ್ರಬಾಬು ನಾಯ್ಡು ಘೋಷಣೆ
ವಿಶಾಖಪಟ್ಟಣಂ ರಾಜ್ಯದ ವಾಣಿಜ್ಯ ಹಬ್ ಆಗಲಿದೆ.
Team Udayavani, Jun 11, 2024, 3:40 PM IST
ಹೈದರಾಬಾದ್: ಇನ್ನು ಕೆಲವೇ ವರ್ಷಗಳಲ್ಲಿ ಅಮರಾವತಿ ಆಂಧ್ರಪ್ರದೇಶದ ರಾಜಧಾನಿಯಾಗಲಿದೆ ಎಂದು ತೆಲುಗು ದೇಶಂ ಪಕ್ಷದ ಎನ್.ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಕ್ಕೂ ಮೊದಲು ತಿಳಿಸಿದ್ದಾರೆ.
ಅಮರಾವತಿ ಆಂಧ್ರಪ್ರದೇಶದ ಏಕೈಕ ರಾಜಧಾನಿಯಾಗಲಿದೆ, ಅಷ್ಟೇ ಅಲ್ಲ ಬಹುನಿರೀಕ್ಷೆಯ ಪೋಲಾವರಂ ಯೋಜನೆಯನ್ನೂ ಪೂರ್ಣಗೊಳಿಸುವುದಾಗಿ ಚಂದ್ರಬಾಬು ನಾಯ್ಡು ಈ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.
“ಅಮರಾವತಿ ನಮ್ಮ ರಾಜಧಾನಿಯಾಗಲಿದೆ. ನಮಗೆ ಅಭಿವೃದ್ಧಿ ಪರವಾದ ರಾಜಕೀಯ ಬೇಕೆ ಹೊರತು, ಪೂರ್ವಾಗ್ರಹ ಪೀಡಿತ ರಾಜಕೀಯ ಅಗತ್ಯವಿಲ್ಲ.. ವಿಶಾಖಪಟ್ಟಣಂ ರಾಜ್ಯದ ವಾಣಿಜ್ಯ ಹಬ್ ಆಗಲಿದೆ. ನಾನು ಆಂಧ್ರದಲ್ಲಿ ಮೂರು ರಾಜಧಾನಿ ಮಾಡಲು ಹೊರಟಿರುವ ಜನರ ರೀತಿ ರಾಜಕಾರಣ ಮಾಡುವುದಿಲ್ಲ. ವಿಶಾಖಪಟ್ಟಣ ನನಗೆ ಪೂರ್ಣ ಅಧಿಕಾರ ನೀಡಿದೆ. ಆ ನಿಟ್ಟಿನಲ್ಲಿ ರಾಯಲಸೀಮೆಯನ್ನು ಭರ್ಜರಿಯಾಗಿ ಅಭಿಪಡಿಸುವುದಾಗಿ ಈ ಸಂದರ್ಭದಲ್ಲಿ ನಾಯ್ಡು ಹೇಳಿದರು.
ಆಂಧ್ರಪ್ರದೇಶದಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ ಬರೋಬ್ಬರಿ 164 ಸ್ಥಾನಗಳನ್ನು ಪಡೆಯುವ ಮೂಲಕ ಸ್ಪಷ್ಟ ಬಹುಮತ ಪಡೆದು ಅಧಿಕಾರದ ಗದ್ದುಗೆ ಏರುವ ಮೂಲಕ ಅಮರಾವತಿ ಯೋಜನೆ ಮುನ್ನೆಲೆಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 world cup: ವಿಶ್ವಕಪ್ ದಿಗ್ವಿಜಯ… ಅಂದು – ಇಂದು
Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ
TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ
Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.