Kanakamajalu: ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ ಪಲ್ಟಿ
Team Udayavani, Jun 11, 2024, 8:25 PM IST
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ ಪಲ್ಟಿಯಾದ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಕನಕಮಜಲು ಗ್ರಾಮದ ಕೋಡಿ ಎಂಬಲ್ಲಿನ ತಿರುವಿನಲ್ಲಿ ಸೋಮವಾರ ಸಂಜೆ ಸಂಭವಿಸಿದೆ.
ಘಟನೆಯಿಂದ ಗ್ಯಾಸ್ ಸೋರಿಕೆ ಆಗುತ್ತಿದ್ದುದರಿಂದ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.
ಮಡಿಕೇರಿ ಕಡೆಯಿಂದ ಮಂಗಳೂರಿಗೆ ಗ್ಯಾಸ್ ಸಿಲಿಂಡರ್ ಸಾಗಾಟ ಮಾಡುತ್ತಿದ್ದ ಲಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿಯಲ್ಲಿ ಒಂದು ಹೊರತು ಪಡಿಸಿ ಉಳಿದ ಸಿಲಿಂಡರ್ಗಳು ಖಾಲಿಯಾಗಿದ್ದು, ಘಟನೆಯಲ್ಲಿ ಗ್ಯಾಸ್ ಇದ್ದ ಸಿಲಿಂಡರ್ನಲ್ಲಿ ಗ್ಯಾಸ್ ಸೋರಿಕೆ ಉಂಟಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳವನ್ನು ಕರೆಸಿಕೊಳ್ಳಲಾಯಿತು. ಸಿಲಿಂಡರ್ನಿಂದ ಗ್ಯಾಸ್ ಖಾಲಿ ಮಾಡಿ ಆತಂಕ ದೂರ ಮಾಡಲಾಯಿತು. ಘಟನೆಯಿಂದ ವಾಹನ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಯಿತು. ಕೆಲ ಸಮಯದ ಬಳಿಕ ಮತ್ತೆ ವಾಹನ ಸಂಚಾರ ಆರಂಭಗೊಂಡಿತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.