CM Siddaramaiah ಅಬಕಾರಿ ತೆರಿಗೆ ಸಂಗ್ರಹ ನಿರೀಕ್ಷಿತ ಗುರಿ ಮುಟ್ಟಿಲ್ಲ
Team Udayavani, Jun 11, 2024, 8:28 PM IST
ಬೆಂಗಳೂರು: ಅಬಕಾರಿ ಪರವಾನಗಿಗಳ ನವೀಕರಣ ವೇಳೆ ಸನ್ನದುದಾರರಿಗೆ ಕಿರುಕುಳ ನೀಡದಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನ ಸಭೆ ಹಾಗೂ ಅಬಕಾರಿ ಇಲಾಖೆ ವ್ಯವಹಾರಗಳನ್ನು ಸರಳಗೊಳಿಸುವ ನೂತನ ತಂತ್ರಾಂಶವನ್ನು ಲೋಕಾರ್ಪಣೆ ಮಾಡಿ ಮಾತನಾಡಿ, ನೆರೆ ರಾಜ್ಯಗಳಿಂದ ಕರ್ನಾಟಕಕ್ಕೆ ಕಳ್ಳಸಾಗಣೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯವಾಗಿ ತಡೆಗಟ್ಟಬೇಕು. ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ಗುರಿ ನಿಗದಿಪಡಿಸಲಾಗಿದೆ. ಹೀಗಾಗಿ ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕೆಂದು ಅವರು ಸೂಚಿಸಿದರು.
ಚುನಾವಣ ನೀತಿ ಸಂಹಿತೆ ಕಾರಣದಿಂದ ತೆರಿಗೆ ಸಂಗ್ರಹ ಬೆಳವಣಿಗೆ ದರ ನಿರೀಕ್ಷಿತ ಮಟ್ಟ ತಲುಪಿಲ್ಲ. ಮುಂದಿನ ದಿನಗಳಲ್ಲಿ ಇದನ್ನು ಭರ್ತಿ ಮಾಡಿ. ಇಲಾಖೆಯಲ್ಲಿ ಕಾನ್ಸ್ಟೆಬಲ್, ಸಬ್ ಇನ್ಸ್ಪೆಕ್ಟರ್ಗಳ ನೇಮಕಾತಿ ಹಾಗೂ ವಾಹನಗಳ ಅಗತ್ಯ ಕುರಿತಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಕರ ಸಮಾಧಾನ ಯೋಜನೆಯಡಿ 5.10 ಕೋಟಿ ರೂ. ವಸೂಲಾಗಿದ್ದು ಯೋಜನೆಯನ್ನು ಇನ್ನಷ್ಟು ಕಾಲ ವಿಸ್ತರಿಸುವಂತೆ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ತಂತ್ರಾಂಶ ಲೋಕಾರ್ಪಣೆ
ಅಬಕಾರಿ ಇಲಾಖೆ ವ್ಯವಹಾರಗಳನ್ನು ಸರಳಗೊಳಿಸಲು ನೂತನ ಆನ್ಲೈನ್ ತಂತ್ರಾಂಶವನ್ನು ಲೋಕಾರ್ಪಣೆಗೊಳಿಸಲಾಯಿತು. ಇಲಾಖೆಯ ಸೇವೆಗಳನ್ನು ಒದಗಿಸುವ ಹಾಗೂ ಅಬಕಾರಿ ಇಲಾಖೆಗೆ ಸಂಬಂಧಿಸಿದ ನಿಯಮ ಉಲ್ಲಂಘನೆ ಹಾಗೂ ಅಕ್ರಮದ ಪ್ರಕರಣಗಳು ಹಾಗೂ ಅಧಿಕಾರಿಗಳ ತಪಾಸಣೆಯನ್ನೂ ಇದರಲ್ಲಿ ದಾಖಲಿಸಲು ಹಾಗೂ ಅನುಸರಿಸಲು ಅವಕಾಶ ಕಲ್ಪಿಸಲಾಗಿದೆ.
ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಹಾಗೂ ನಸೀರ್ ಅಹ್ಮದ್, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ .ಕೆ.ಅತೀಕ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ಅಬಕಾರಿ ಇಲಾಖೆಯ ಆಯುಕ್ತ ಡಾ| ರವಿಶಂಕರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.