Byndoor: ಮಹಿಳೆ ಅನುಮಾನಾಸ್ಪದ ಸಾವು
Team Udayavani, Jun 11, 2024, 10:00 PM IST
ಉಪ್ಪುಂದ: ಅಸ್ವಸ್ಥಳಾಗಿ ಕುಸಿದು ಬಿದ್ದು ಮಹಿಳೆ ಮೃತಪಟ್ಟ ಘಟನೆ ಜೂ.10ರಂದು ಬೈಂದೂರಿನಲ್ಲಿ ಸಂಭವಿಸಿದ್ದು ಮಹಿಳೆಯ ಸಾವಿನ ಕುರಿತು ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ.
ಬೈಂದೂರಿನ ನಿವಾಸಿ ನಾಗರತ್ನ (42) ಮೃತಮಟ್ಟ ಮಹಿಳೆ.
ನಾಗರತ್ನ ಅವರು 20 ವರ್ಷಗಳ ಹಿಂದೆ ಉಡುಪಿಯ ಕಲ್ಮಂಜ ನಿವಾಸಿ ಪ್ರವೀಣ್ ಅವರನ್ನು ಪ್ರೀತಿಸಿ ಮದುವೆಯಾಗಿ ಬ್ರಹ್ಮಾವರದ ಮಟಾ³ಡಿಯಲ್ಲಿ ವಾಸಮಾಡಿಕೊಂಡಿದ್ದರು. 4 ವರ್ಷಗಳ ಹಿಂದೆ ಪತಿ ಬಿಟ್ಟು ಹೋಗಿದ್ದರು. ಪ್ರಸ್ತುತ 2 ತಿಂಗಳ ಹಿಂದೆ ಮಟಾ³ಡಿಯ ಮನೆ ಬಿಟ್ಟು ಬೈಂದೂರು ಯೋಜನಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ನವೀನ್ ಅವರ ಜತೆ ಮಕ್ಕಳೊಂದಿಗೆ ವಾಸ ಮಾಡಿಕೊಂಡಿದ್ದರು.
ಜೂ. 10ರಂದು ಬೆಳಗ್ಗೆ ನಾಗರತ್ನ ಮನೆಯಲ್ಲಿ ಕುಸಿದು ಬಿದ್ದು ಅಸ್ವಸ್ಥರಾಗಿದ್ದು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋದಾಗ ಮೃತಪಟ್ಟಿರುವುದು ತಿಳಿಯಿತು. ಮನೆಯವರು ನಾಗರತ್ನ ಅವರ ಸಾವಿನಲ್ಲಿ ಅನುಮಾನ ವ್ಯಕ್ತಡಿಸಿ ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.