ಇನ್ನು ವಿವಿಗಳಲ್ಲಿ ವರ್ಷಕ್ಕೆ2 ಬಾರಿ ಪ್ರವೇಶ ಪ್ರಕ್ರಿಯೆ!
Team Udayavani, Jun 12, 2024, 6:57 AM IST
ಹೊಸದಿಲ್ಲಿ: ಇನ್ನು ಮುಂದೆ ವಿದೇಶಿ ವಿ.ವಿ.ಗಳ ಮಾದರಿಯಲ್ಲೇ ದೇಶದಲ್ಲಿ ವಿಶ್ವವಿದ್ಯಾನಿಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವರ್ಷಕ್ಕೆ 2 ಬಾರಿ ಪ್ರವೇಶ ಪ್ರಕ್ರಿಯೆ ನಡೆಯಲಿದೆ. ಇಂಥದ್ದೊಂದು ಪ್ರಸ್ತಾವಕ್ಕೆ ವಿ.ವಿ.ಗಳ ಧನಸಹಾಯ ಆಯೋಗ (ಯುಜಿಸಿ) ಅನುಮತಿ ನೀಡಿದೆ.
ಅದರಂತೆ 2024-25ರ ಶೈಕ್ಷಣಿಕ ವರ್ಷದಿಂದ 2 ಬಾರಿ ಅಂದರೆ ಜುಲೈ-ಆಗಸ್ಟ್ನಲ್ಲಿ ಮತ್ತು ಜನವರಿ-ಫೆಬ್ರವರಿಯಲ್ಲಿ ವಿ.ವಿ.ಗಳು, ಉನ್ನತ ಶಿಕ್ಷಣ ಸಂಸ್ಥೆಗಳ ಪ್ರವೇಶ ಪ್ರಕ್ರಿಯೆ ನಡೆಯಲಿದೆ.
ಬೋರ್ಡ್ ಫಲಿತಾಂಶಗಳು, ಆರೋಗ್ಯ ಸಮಸ್ಯೆ ಅಥವಾ ವೈಯಕ್ತಿಕ ಕಾರಣಗಳಿಂದಾಗಿ ಜುಲೈ-ಆಗಸ್ಟ್ ಅವಧಿಯಲ್ಲಿ ಪ್ರವೇಶ ಪಡೆಯಲು ಸಾಧ್ಯವಾಗದೆ ಇರುವವರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಯುಜಿಸಿ ಮುಖ್ಯಸ್ಥ ಜಗದೀಶ್ ಕುಮಾರ್ ಹೇಳಿದ್ದಾರೆ.
ಇನ್ನು ಮುಂದೆ ಒಂದು ಹಂತದ ಪ್ರವೇಶ ಪ್ರಕ್ರಿಯೆಯನ್ನು ತಪ್ಪಿಸಿಕೊಂಡವರು ವಿ.ವಿ.ಗಳಿಗೆ ಪ್ರವೇಶ ಪಡೆಯಲು ಒಂದಿಡೀ ವರ್ಷ ಕಾಯಬೇಕಾಗಿರುವುದಿಲ್ಲ. ಅಲ್ಲದೆ ವಿವಿಧ ಉದ್ಯಮ ಸಂಸ್ಥೆಗಳು ಕೂಡ ವರ್ಷಕ್ಕೆ 2 ಬಾರಿ ಕ್ಯಾಂಪಸ್ ಸಂದರ್ಶನ ಮಾಡಿ, ಪದವೀಧರರಿಗೆ ಉದ್ಯೋಗಾವಕಾಶ ಕಲ್ಪಿಸಬಹುದು ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ. ವಿದೇಶಗಳ ಹಲವು ವಿ.ವಿ.ಗಳು ವರ್ಷಕ್ಕೆರಡು ಬಾರಿ ಪ್ರವೇಶ ಪ್ರಕ್ರಿಯೆ ಮಾದರಿಯನ್ನು ಅನುಸರಿಸುತ್ತಿವೆ. ಭಾರತದಲ್ಲೂ ಅದೇ ಮಾದರಿ ಅನುಸರಿಸಿದರೆ ನಮ್ಮ ಉನ್ನತ ಶಿಕ್ಷಣ ಸಂಸ್ಥೆಗಳು ಅಂತಾರಾಷ್ಟ್ರೀಯ ವಿ.ವಿ.ಗಳೊಂದಿಗೆ ಸಹಭಾಗಿತ್ವ ಸಾಧಿಸಲು ಮತ್ತು ವಿದ್ಯಾರ್ಥಿ ವಿನಿಮಯ ಮಾಡಿಕೊಳ್ಳಲು ಅನುಕೂಲವಾಗಲಿದೆ ಎಂದಿದ್ದಾರೆ.
ಕಡ್ಡಾಯ ಅಲ್ಲ
ವರ್ಷಕ್ಕೆ 2 ಬಾರಿ ಪ್ರವೇಶ ಪ್ರಕ್ರಿಯೆ ನಡೆಸುವುದು ಕಡ್ಡಾಯವಲ್ಲ. ಬೋಧಕ ಸಿಬಂದಿ ಸಹಿತ ಅಗತ್ಯ ಮೂಲಸೌಕರ್ಯಗಳನ್ನು ಹೊಂದಿರುವ ವಿ.ವಿ.ಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು ಎಂದೂ ಯುಜಿಸಿ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.